ಗ್ಲಾಮರ್​ ಲುಕ್​ ಬಿಟ್ಟು ಆ್ಯಕ್ಷನ್​ ಅವತಾರ ತಾಳಲಿದ್ದಾರೆ ದೀಪಿಕಾ ಪಡುಕೋಣೆ

ಈಗ ಶಾರುಖ್​ ಪಠಾಣ್​ ಸಿನಿಮಾ ಮೂಲಕ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ನಾಯಕಿ. ಈ ಸಿನಿಮಾದಲ್ಲಿ ಅವರೂ ಆ್ಯಕ್ಷನ್ ಮೆರೆಯುತ್ತಿದ್ದಾರೆ.

ಗ್ಲಾಮರ್​ ಲುಕ್​ ಬಿಟ್ಟು ಆ್ಯಕ್ಷನ್​ ಅವತಾರ ತಾಳಲಿದ್ದಾರೆ ದೀಪಿಕಾ ಪಡುಕೋಣೆ
ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 26, 2021 | 9:40 PM

ದೀಪಿಕಾ ಪಡುಕೋಣೆ ಇಲ್ಲಿವರೆಗೆ ಸಾಕಷ್ಟು ಸಿನಿಮಾಗಳಲ್ಲಿ ಗ್ಲಾಮರಸ್ ​ಲುಕ್​ನಲ್ಲಿ ಕಾಣಿಸಿಕೊಂಡಿದ್ದರು. ಇದೇ ಮೊದಲ ಬಾರಿಗೆ ಅವರು ಆ್ಯಕ್ಷನ್​ ಅವತಾರ ತಾಳಲಿದ್ದಾರೆ. ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಚಿತ್ರದಲ್ಲಿ ದೀಪಿಕಾ ಆ್ಯಕ್ಷನ್​ ಮೆರೆಯಲಿದ್ದಾರೆ. ಇದಕ್ಕಾಗಿ ಅವರು ದೇಹವನ್ನು ಹುರಿಗೊಳಿಸಿಕೊಳ್ಳುತ್ತಿದ್ದಾರೆ.

2013ರಲ್ಲಿ ತೆರೆಗೆ ಬಂದಿದ್ದ ಶಾರುಖ್​ ಖಾನ್​ ನಟನೆಯ ಚೆನ್ನೈ ಎಕ್ಸ್​ಪ್ರೆಸ್​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಹ್ಯಾಪಿ ನ್ಯೂ ಇಯರ್​ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದರೂ, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಾದ ನಂತರ ತೆರೆಕಂಡ ಎಲ್ಲ ಚಿತ್ರಗಳೂ ನೆಲ ಕಚ್ಚಿದ್ದವು. ಈಗ ಶಾರುಖ್​ ಪಠಾಣ್​ ಸಿನಿಮಾ ಮೂಲಕ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ನಾಯಕಿ. ಈ ಸಿನಿಮಾದಲ್ಲಿ ಅವರೂ ಆ್ಯಕ್ಷನ್ ಮೆರೆಯುತ್ತಿದ್ದಾರೆ.

ಸಿದ್ಧಾರ್ಥ್​ ಆನಂದ್ ನಿರ್ದೇಶನ ಮಾಡುತ್ತಿರುವ ‘ಪಠಾಣ್​’ ಚಿತ್ರದಲ್ಲಿ  ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ. ದೀಪಿಕಾ ಕೂಡ ಆ್ಯಕ್ಷನ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೊದಲು ‘ಎಕ್ಸ್​ಎಕ್ಸ್​ಎಕ್ಸ್: ರಿಟರ್ನ್​ ಆಫ್​ ಕ್ಯಾಂಡರ್​ ಕೇಜ್’​ ಚಿತ್ರದಲ್ಲಿ ದೀಪಿಕಾ ಆ್ಯಕ್ಷನ್​ ಮೆರೆದಿದ್ದರು. ಇದನ್ನು ನೋಡಿದ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದರು. ಈಗ ಅವರು ಮತ್ತೆ ಇದೇ ರೀತಿಯ ಆ್ಯಕ್ಷನ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳೋಕೆ ರೆಡಿ ಆಗಿದ್ದಾರೆ. ಇದಕ್ಕಾಗಿ ಅವರು ಜಿಮ್​ನಲ್ಲೂ ವರ್ಕೌಟ್​ ಮಾಡುತ್ತಿದ್ದಾರೆ.

ನಟ ರಜನಿಕಾಂತ್​ ಅವರ ಮುಂದಿನ ಚಿತ್ರಕ್ಕೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಕಾಲ್​ ಶೀಟ್​ ಕೇಳಲಾಗಿದೆ ಎನ್ನುವ ಮಾತು ಕೇಳಿ ಬಂದಿದೆ. ‘ಕೊಚಡಿಯನ್’​ ಸಿನಿಮಾದಲ್ಲಿ ರಜನಿ ಹಾಗೂ ದೀಪಿಕಾ ಒಟ್ಟಾಗಿ ಕೆಲಸ ಮಾಡಿದ್ದರು. ಆದರೆ, ಇದು ಮೋಷನ್ ಕ್ಯಾಪ್ಚರ್​​ ಸಿನಿಮಾ ಆಗಿತ್ತು. ಒಂದೊಮ್ಮೆ ಈ ಹೊಸ ಚಿತ್ರದಲ್ಲಿ ದೀಪಿಕಾ ನಟಿಸೋಕೆ ಒಪ್ಪಿದರೆ ಇದೇ ಮೊದಲ ಬಾರಿಗೆ ರಜನಿ ಜತೆ ಅವರು ನೈಜವಾಗಿ ತೆರೆಹಂಚಿಕೊಂಡಂತಾಗಲಿದೆ ಈ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ.

ಇದನ್ನೂ ಓದಿ: ಶಾರುಖ್​ ಖಾನ್​ ಬಗ್ಗೆ ಹರಿದಾಡಿದ್ದ ಸುದ್ದಿ ಸುಳ್ಳು; ಆದರೂ ಬೇಸರಗೊಂಡ ಫ್ಯಾನ್ಸ್​

ಶಾರುಖ್​ ಪುತ್ರಿ ಸುಹಾನಾ ಖಾನ್​ ಹಾಟ್​ ಫೋಟೋಶೂಟ್ ವೈರಲ್​; ಅಪ್ಪನ ಕಮೆಂಟ್​ ಏನು?​

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​