AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone in TTD: ತಿರುಮಲಕ್ಕೆ ಬಂದು ವೆಂಕಟೇಶ್ವರನ ದರ್ಶನ ಪಡೆದ ನಟಿ ದೀಪಿಕಾ ಪಡುಕೋಣೆ

ದೇವಾಲಯ ತಲುಪಲು ದೀಪಿಕಾ ಪಡುಕೋಣೆ ಅವರು ಎರಡೂವರೆ ಗಂಟೆಗಳ ಕಾಲ ಜನರ ಜೊತೆ ನಡೆದುಬಂದಿದ್ದಾರೆ. ಅವರ ಜೊತೆ ಸಹೋದರಿ ಅನಿಶಾ ಪಡುಕೋಣೆ ಕೂಡ ಇದ್ದರು. ವಿಐಪಿ ಪಾಸ್​ ಮೂಲಕ ಅವರು ದೇವರ ದರ್ಶನ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಅವರು ಈಗ ‘ಫೈಟರ್​’ ಸಿನಿಮಾದ ಬಿಡುಗಡೆಗೆ ಕಾದಿದ್ದಾರೆ.

Deepika Padukone in TTD: ತಿರುಮಲಕ್ಕೆ ಬಂದು ವೆಂಕಟೇಶ್ವರನ ದರ್ಶನ ಪಡೆದ ನಟಿ ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ
ಮದನ್​ ಕುಮಾರ್​
|

Updated on: Dec 15, 2023 | 12:09 PM

Share

ಬಾಲಿವುಡ್​ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ತಿರುಮಲ ದೇವಸ್ಥಾನಕ್ಕೆ (Venkateswara Swami temple) ಭೇಟಿ ನೀಡಿದ್ದಾರೆ. ಡಿಸೆಂಬರ್​ 14ರಂದು ಅವರು ತಿರುಪತಿಗೆ ಆಗಮಿಸಿದ್ದರು. ಶುಕ್ರವಾರ (ಡಿಸೆಂಬರ್​ 15) ಮುಂಜಾನೆ ಸಹೋದರಿ ಅನಿಶಾ ಪಡುಕೋಣೆ ಜೊತೆ ಸೇರಿ ಅವರು ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದ ಅವರ ವಿಡಿಯೋ ವೈರಲ್​ ಆಗಿದೆ. 2023ರ ವರ್ಷ ದೀಪಿಕಾ ಪಡುಕೋಣೆ ಅವರ ಪಾಲಿಗೆ ಆಶಾದಾಯಕ ಆಗಿತ್ತು. ವರ್ಷಾಂತ್ಯದಲ್ಲಿ ಅವರು ದೇವರ ದರ್ಶನಕ್ಕೆ ಬಂದಿದ್ದಾರೆ.

ದೇವಾಲಯ ತಲುಪಲು ದೀಪಿಕಾ ಪಡುಕೋಣೆ ಅವರು ಎರಡೂವರೆ ಗಂಟೆಗಳ ಕಾಲ ಜನರ ಜೊತೆ ನಡೆದುಬಂದಿದ್ದಾರೆ. ಅವರ ಜೊತೆ ಸಹೋದರಿ ಅನಿಶಾ ಪಡುಕೋಣೆ ಕೂಡ ಇದ್ದರು. ವಿಐಪಿ ಪಾಸ್​ ಮೂಲಕ ಅವರು ದೇವರ ದರ್ಶನ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಅವರು ಈಗ ‘ಫೈಟರ್​’ ಸಿನಿಮಾದ ಬಿಡುಗಡೆಗೆ ಕಾದಿದ್ದಾರೆ. ಅದಕ್ಕೂ ಮುನ್ನ ಅವರು ದೇವರ ಮೊರೆ ಹೋಗಿದ್ದಾರೆ.

ದಿನದಿಂದ ದಿನಕ್ಕೆ ದೀಪಿಕಾ ಪಡುಕೋಣೆ ಅವರ ಖ್ಯಾತಿ ಹೆಚ್ಚುತ್ತಿದೆ. ಹಲವು ವರ್ಷಗಳಿಂದ ಅವರು ಬಾಲಿವುಡ್​ನಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ‘ಪಠಾಣ್​’ ಮತ್ತು ‘ಜವಾನ್​’ ಸಿನಿಮಾದಿಂದ ಅವರು ಈ ವರ್ಷ ಭರ್ಜರಿ ಗೆಲುವು ಕಂಡಿದ್ದಾರೆ. ಹೃತಿಕ್​ ರೋಷನ್​ ಜೊತೆ ‘ಫೈಟರ್​’ ಸಿನಿಮಾದಲ್ಲಿ ನಟಿಸಿದ್ದು, 2024ರ ಜನವರಿ 25ರಂದು ಆ ಸಿನಿಮಾ ಬಿಡುಗಡೆ ಆಗಲಿದೆ. ಅದಕ್ಕಾಗಿ ಸಕಲ ಸಿದ್ಧತೆಗಳು ನಡೆದಿವೆ.

ಇದನ್ನೂ ಓದಿ: ‘ಫೈಟರ್’ ಮಾತ್ರವಲ್ಲ ಈ ಸಿನಿಮಾಗಳಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ ದೀಪಿಕಾ ಪಡುಕೋಣೆ..

‘ಫೈಟರ್​’ ಸಿನಿಮಾಗೆ ಸಿದ್ದಾರ್ಥ್​ ಆನಂದ್​ ಅವರು ನಿರ್ದೇಶನ ಮಾಡಿದ್ದಾರೆ. ಯುದ್ಧ ವಿಮಾನಗಳ ಸಾಹಸ ದೃಶ್ಯಗಳು ಈ ಸಿನಿಮಾದಲ್ಲಿ ಹೈಲೈಟ್​ ಆಗಲಿವೆ. ಇತ್ತೀಚೆಗೆ ಇದರ ಟೀಸರ್​ ಬಿಡುಗಡೆ ಆಯಿತು. ಇದರಲ್ಲಿ ಆ್ಯಕ್ಷನ್​ ಅಬ್ಬರ ಕಾಣಿಸಿದೆ. ಜೊತೆಗೆ, ಹೃತಿಕ್​ ರೋಷನ್​ ಮತ್ತು ದೀಪಿಕಾ ಪಡುಕೋಣೆ ನಡುವಿನ ಕೆಲವು ಬೋಲ್ಡ್​ ದೃಶ್ಯಗಳು ಕೂಡ ಸಿನಿಪ್ರಿಯರ ಕಣ್ಣು ಕುಕ್ಕಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ