AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸ್ನೆಸ್​ನಲ್ಲಿ ಭಾರೀ ಹೊಡೆತ ತಿಂದ ನಟಿ ದೀಪಿಕಾ ಪಡುಕೋಣೆ; ಕೋಟಿ ಕೋಟಿ ನಷ್ಟ

ನಟಿ ದೀಪಿಕಾ ಪಡುಕೋಣೆ ಒಡೆತನದ 82°E ಸ್ಕಿನ್‌ಕೇರ್ ಕಂಪನಿ ಭಾರಿ ನಷ್ಟ ಅನುಭವಿಸಿದೆ. ಆದರೂ, ವೆಚ್ಚ ಕಡಿತದಿಂದ ನಷ್ಟದ ಪ್ರಮಾಣ ಇಳಿಕೆಯಾಗಿದೆ. ದುಬಾರಿ ಉತ್ಪನ್ನಗಳು ಮತ್ತು ತೀವ್ರ ಸ್ಪರ್ಧೆಯಿಂದ ಕಂಪನಿ ಸವಾಲು ಎದುರಿಸುತ್ತಿದೆ. ಅಲ್ಲದೆ, ದೀಪಿಕಾ ಕೆಲವು ಸಿನಿಮಾಗಳಿಂದ ಹೊರ ಬಂದಿದ್ದಾರೆ.

ಬಿಸ್ನೆಸ್​ನಲ್ಲಿ ಭಾರೀ ಹೊಡೆತ ತಿಂದ ನಟಿ ದೀಪಿಕಾ ಪಡುಕೋಣೆ; ಕೋಟಿ ಕೋಟಿ ನಷ್ಟ
ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Nov 26, 2025 | 12:55 PM

Share

ನಟಿ ದೀಪಿಕಾ ಪಡುಕೋಣೆ ಅವರು ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದಾರೆ. ಕೆಲವು ಸಿನಿಮಾಗಳಿಂದ ಅವರು ಹೊರ ಬಂದಿರೋದು ಚರ್ಚೆಗೆ ಕಾರಣ ಆಗಿದೆ. ಈ ಮಧ್ಯೆ ದೀಪಿಕಾ ಪಡುಕೋಣೆ (Deepika Padukone) ಅವರು ಬಿಸ್ನೆಸ್​ನಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಅವರ ಒಡೆತನದ ಸ್ಕಿನ್​ಕೇರ್ ಕಂಪನಿ ನಷ್ಟದಲ್ಲಿ ಇದೆ. ಈ ಬಗ್ಗೆ ವರದಿ ಪ್ರಸಾರ ಆಗಿದೆ.

ದೀಪಿಕಾ ಪಡುಕೋಣೆ ಅವರು ‘82°E’ ಹೆಸರಿನ ಬ್ರ್ಯಾಂಡ್ ಹೊಂದಿದ್ದಾರೆ. 2024ರಲ್ಲಿ ಕಂಪನಿ 21.2 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಅದು ಈಗ 14.7 ಕೋಟಿ ರೂಪಾಯಿಗೆ ಇಳಿಕೆ ಆಗಿದೆ. ವಿಶೇಷ ಎಂದರೆ ನಷ್ಟದಲ್ಲೂ ಇಳಿಕೆ ಕಂಡಿದೆ. 2024ರಲ್ಲಿ 23 ಕೋಟಿ ನಷ್ಟ ಆದರೆ ಈ ವರ್ಷ 12.3 ಕೊಟಿ ರೂಪಾಯಿ ನಷ್ಟ ಆಗಿದೆ.

2024ರಲ್ಲಿ 82°E ಕಂಪನಿ 47 ಕೋಟಿ ರೂಪಾಯಿ ವೆಚ್ಚ ಮಾಡಿತ್ತು. ಈ ವರ್ಷ ಸಾಕಷ್ಟು ಕಾಸ್ಟ್ ಕಟಿಂಗ್ ಮಾಡಲಾಗಿದ್ದು, ಈ ಮೂಲಕ ಖರ್ಚನ್ನು 25 ಕೋಟಿಗೆ ಇಳಿಸಲಾಗಿದೆ. ಇದರಿಂದ ನಷ್ಟ ತಗ್ಗಿದೆ. 2024ರಲ್ಲಿ ಬ್ರ್ಯಾಂಡ್​ಗೆ ಸಾಕಷ್ಟು ಮಾರ್ಕೆಟಿಂಗ್ ಮಾಡಲಾಗಿತ್ತು. ಇದನ್ನು 2025ರಲ್ಲಿ ಕಡಿಮೆ ಮಾಡಲಾಗಿದೆ.

ದೀಪಿಕಾ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇದನ್ನು ಬಳಸಿಕೊಂಡು ಉತ್ಪನ್ನಗಳನ್ನು ಪ್ರಚಾರ ಮಾಡಿದ್ದರು. ಆದರೆ, ಬ್ರ್ಯಾಂಡ್ ನಷ್ಟ ಅನುಭವಿಸುವುದು ತಪ್ಪಿಲ್ಲ. 82°E ಬ್ರ್ಯಾಂಡ್​ನ ಉತ್ಪನ್ನಗಳು ಸಾಕಷ್ಟು ದುಬಾರಿಯಾಗಿವೆ.ಈ ಸಂಸ್ಥೆಗೆ ಸಾಕಷ್ಟು ದೊಡ್ಡ ಸ್ಪರ್ಧೆ ಇದ್ದು,ಇದರಲ್ಲಿ ಗೆಲುವು ಕಾಣೋದು ಅಷ್ಟು ಸುಲಭದಲ್ಲಿ ಇಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸಿನಿಮಾದಿಂದ ಹೊರ ನಡೆದ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ದೀಪಿಕಾ ಪಡುಕೋಣೆ

ನಟಿ ದೀಪಿಕಾ ಪಡುಕೋಣೆ ಅವರು ದಿನಕ್ಕೆ 8 ಗಂಟೆ ಮಾತ್ರ ಕೆಲಸ ಮಾಡೋದಾಗಿ ಹೇಳಿದ್ದಾರೆ. ಈ ಕಾರಣದಿಂದಲೇ ಅವರು ‘ಸ್ಪಿರಿಟ್’ ಸಿನಿಮಾದಿಂದ ಹೊರಕ್ಕೆ ಬಂದರು. ಅಲ್ಲದೆ, ‘ಕಲ್ಕಿ 2898 ಎಡಿ’ ಸೀಕ್ವೆಲ್​ನಿಂದಲೂ ಅವರು ದೂರ ಆಗಿದ್ದಾರೆ. ಇದು ಸಿನಿಮಾಗೆ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು