AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ದೊಡ್ಡ ಅವಕಾಶ ಕಳೆದುಕೊಂಡ ದೀಪಿಕಾ ಪಡುಕೋಣೆ

ನಟಿ ದೀಪಿಕಾ ಪಡುಕೋಣೆ ಮಾತೃತ್ವದ ಕಾರಣ ವೃತ್ತಿಜೀವನದಲ್ಲಿ ಸವಾಲು ಎದುರಿಸುತ್ತಿದ್ದಾರೆ. ಮಗುವಿನ ಆರೈಕೆಗಾಗಿ ದಿನಕ್ಕೆ 8 ಗಂಟೆ ಮಾತ್ರ ಕೆಲಸ ಮಾಡುವ ಷರತ್ತಿನಿಂದ 'ಕಲ್ಕಿ 2898 ಎಡಿ 2', 'ಸ್ಪಿರಿಟ್' ಹಾಗೂ ಹಾಲಿವುಡ್‌ನ 'ವೈಟ್ ಲೋಟಸ್' ನಂತಹ ದೊಡ್ಡ ಅವಕಾಶಗಳನ್ನು ಕಳೆದುಕೊಂಡಿದ್ದಾರೆ. ಈ ನಿರ್ಧಾರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

ಮತ್ತೊಂದು ದೊಡ್ಡ ಅವಕಾಶ ಕಳೆದುಕೊಂಡ ದೀಪಿಕಾ ಪಡುಕೋಣೆ
ದೀಪಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Feb 28, 2026 | 12:39 PM

Share

ನಟಿ ದೀಪಿಕಾ ಪಡುಕೋಣೆ ಅವರು ದೊಡ್ಡ ದೊಡ್ಡ ಅವಕಾಶವನ್ನು ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಕಾರಣ ಅವರು ಹಾಕುವ ಷರತ್ತು ಎಂದರೂ ತಪ್ಪಾಗಲಿಕ್ಕಿಲ್ಲ. ಅವರು ಇತ್ತೀಚೆಗೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ‘ಕಲ್ಕಿ 2898 ಎಡಿ 2’ ಚಿತ್ರದಿಂದ ಹಾಗೂ ‘ಸ್ಪಿರಿಟ್’ ಚಿತ್ರದಿಂದ ಹೊರ ಹೋದರು. ಈಗ ಅವರಿಗೆ ಮತ್ತೊಂದು ಅವಕಾಶ ಕಳೆದು ಹೋಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ದೀಪಿಕಾ ಪಡುಕೋಣೆ ಅವರು ಸಿನಿಮಾದಲ್ಲಿ ನಟಿಸಲು ತಮ್ಮದೇ ಆದ ಷರತ್ತು ಹೊಂದಿದ್ದಾರೆ. ಮಗುವನ್ನು ಸಾಕುವ ಜವಾಬ್ದಾರಿ ಅವರಿಗೆ ಇರುವುದರಿಂದ ಅವರು ದಿನದಲ್ಲಿ 8 ಗಂಟೆ ಮಾತ್ರ ಕೆಲಸ ಮಾಡೋದಾಗಿ ಹೇಳಿದ್ದಾರೆ. ಈ ಕಾರಣದಿಂದಲೇ ಅವರು ‘ಕಲ್ಕಿ 2898 ಎಡಿ’ ಹಾಗೂ ‘ಸ್ಪಿರಿಟ್ ಚಿತ್ರದಿಂದ ಹೊರ ಹೋದರು. ಅವರಿಗೆ ಈ ಮಧ್ಯೆ ಒಂದು ಹಾಲಿವುಡ್ ಆಫರ್ ಕೂಡ ಕೈ ತಪ್ಪಿತ್ತು.

ಅವರಿಗೆ ಇಂಗ್ಲಿಷ್​​ನ ಕಾಮಿಡಿ ಸೀರಿಸ್ ‘ವೈಟ್ ಲೋಟಸ್’ ಆಫರ್ ಬಂದಿತ್ತು. ಮಗು ಜನಿಸಿದ ತಕ್ಷಣವೇ ಈ ಆಫರ್ ಬಂದಿತ್ತು. ಹೀಗಾಗಿ, ಅವರಿಗೆ ಆಡಿಷನ್​​ಗೆ ತೆರಳು ಸಾಧ್ಯವಾಗಿಲ್ಲ. ಅಮೆರಿಕದ ಪ್ರಸಿದ್ಧ ಬ್ಲ್ಯಾಕ್ ಕಾಮಿಡಿ ಸರಣಿ ಇದಾಗಿದೆ. ಮೈಕ್ ವೈಟ್ ಇದನ್ನು ನಿರ್ದೇಶನ ಮಾಡುತ್ತಿದ್ದಾರೆ.

ದೀಪಿಕಾ ಪಡುಕೋಣೆ ಮಗು ಜನಿಸುವುದಕ್ಕೂ ಮೊದಲು ಯಾವುದೇ ಷರತ್ತು ಇಲ್ಲದೆ ಕೆಲಸ ಮಾಡುತ್ತಾ ಸಾಗುತ್ತಿದ್ದರು. ಅವರು ಈಗ ಅಲ್ಲು ಅರ್ಜುನ್ ಹಾಗೂ ಅಟ್ಲಿ ಸಿನಿಮಾಗೆ ನಾಯಕಿ ಆಗಿದ್ದಾರೆ. ಪ್ಲ್ಯಾನ್ ಪ್ರಕಾರವೇ ಎಲ್ಲವೂ ನಡೆದರೆ ದೀಪಿಕಾ ಅವರು ಈ ಚಿತ್ರದ ಮೂಲಕ ದೊಡ್ಡ ಕಂಬ್ಯಾಕ್ ಮಾಡಲಿದ್ದಾರೆ. ಅವರು ದೊಡ್ಡ ಬ್ರೇಕ್ ತೆಗದುಕೊಂಡಿದ್ದು, ಅವರಿಗಾಗಿ ಎಲ್ಲರೂ ಕಾಯುತ್ತಿದ್ದಾರೆ.

ಇದನ್ನೂ ಓದಿ: ಪೌರಾಣಿಕ ಸಿನಿಮಾನಲ್ಲಿ ದೀಪಿಕಾ ಪಡುಕೋಣೆ, ನಾಯಕ ಯಾರು?

ಎಲ್ಲ ನಟಿಯರ ಕರಿಯರ್​​ನಲ್ಲೂ ಏರಿಳಿತ ಸಾಮಾನ್ಯ. ಅದೇ ರೀತಿ ದೀಪಿಕಾ ಪಡುಕೋಣೆ ಜೀವನದಲ್ಲೂ ಬಂದಿದೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಅವರು ಸದ್ಯ ಮಗುವಿನ ಆರೈಕೆಯಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:06 am, Sat, 28 February 26

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್