AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಕಾ’ ಸಿನಿಮಾ: ದೀಪಿಕಾ ಪಡುಕೋಣೆಗೆ ಹೀರೋಗೆ ಸರಿಸಮಾನವಾಗಿ ಸಂಭಾವನೆ ಸಿಕ್ಕಿತೇ?

'ರಾಕಾ' ಚಿತ್ರದಲ್ಲಿ ದೀಪಿಕಾ ಪಡುಕೋಣೆ ಸಂಭಾವನೆ ಕುರಿತು ಚರ್ಚೆ ನಡೆಯುತ್ತಿದೆ. ಅಲ್ಲು ಅರ್ಜುನ್‌ಗೆ ಸರಿಸಮಾನವಾಗಿ ದೀಪಿಕಾಗೆ ಸಂಭಾವನೆ ಸಿಕ್ಕಿಲ್ಲ ಎಂದು ವರದಿಗಳು ತಿಳಿಸಿವೆ. ಇದು ಸಮಾನ ವೇತನದ ಹೋರಾಟದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮಗು ಜನಿಸಿದ ನಂತರ ದೀಪಿಕಾ ಶೂಟಿಂಗ್‌ಗೆ ಹಾಕುವ ಕಂಡೀಷನ್‌ಗಳು ಮತ್ತು ಅವರ ಪಾತ್ರದ ಬಗ್ಗೆಯೂ ಕುತೂಹಲ ಮೂಡಿದೆ.

‘ರಾಕಾ’ ಸಿನಿಮಾ: ದೀಪಿಕಾ ಪಡುಕೋಣೆಗೆ ಹೀರೋಗೆ ಸರಿಸಮಾನವಾಗಿ ಸಂಭಾವನೆ ಸಿಕ್ಕಿತೇ?
ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Apr 11, 2026 | 7:22 AM

Share

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಕೈಬಿಟ್ಟರು. ಇದರಲ್ಲಿ ಸೀಕ್ವೆಲ್ ಕೂಡ ಇತ್ತು ಅನ್ನೋದು ಅಚ್ಚರಿಯ ಸಂಗತಿ. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಿದ್ದ ದೀಪಿಕಾ, ಸೀಕ್ವೆಲ್​ ಮಾಡದೆ ಸಿನಿಮಾದಿಂದ ಹೊರ ನಡೆದರು. ಈಗ ದೀಪಿಕಾ ಪಡುಕೋಣೆ ಅವರು ‘ರಾಕಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ಪಡುಕೋಣೆ ಪಡೆದುಕೊಳ್ಳುತ್ತಿರುವ ಸಂಭಾವನೆ ಕುರಿತು ಚರ್ಚೆ ಆಗುತ್ತಿದೆ.

ದೀಪಿಕಾ ಪಡುಕೋಣೆ ಅವರು ಸದಾ ಸಮಾನತೆಯ ಬಗ್ಗೆ ಮಾತನಾಡುತ್ತಾರೆ. ಹೀರೋಗೆ ಸಿಕ್ಕಷ್ಟೇ ಸಂಭಾವನೆ ತಮಗೂ ಸಿಗಬೇಕು ಎಂದು ಅವರು ಬಯಸುತ್ತಾರೆ. ಇದನ್ನು ಅನೇಕ ಕಡೆಗಳಲ್ಲಿ ವಾದಿಸಿದ್ದಾರೆ ಕೂಡ. ಇನ್ನು, 8 ಗಂಟೆ ಮಾತ್ರ ಸಿನಿಮಾದಲ್ಲಿ ನಟಿಸೋದಾಗಿ ಹೇಳಿದ್ದಾರೆ. ಈ ಎಲ್ಲಾ ಕಾರಣದಿಂದ ದೀಪಿಕಾ ಅವರನ್ನು ಅನೇಕ ಸಿನಿಮಾಗಳಿಗೆ ಆಯ್ಕೆ ಮಾಡಲು ಸಾಧ್ಯವಾಗುತ್ತಿಲ್ಲ. ಆದಾಗ್ಯೂ ಅವರು ‘ರಾಕಾ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ.

ಅಲ್ಲು ಅರ್ಜುನ್ ನಟನೆಯ, ಅಟ್ಲಿ ನಿರ್ದೇಶನದ ‘ರಾಕಾ’ ಸಿನಿಮಾಗಾಗಿ ಅಲ್ಲು ಅರ್ಜುನ್ ಅವರು ಬರೋಬ್ಬರಿ 175 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಇದರ ಜೊತೆಗೆ ಅವರಿಗೆ ಸಿನಿಮಾದ ಲಾಭದಲ್ಲೂ ಪಾಲಿದೆ ಎನ್ನಲಾಗುತ್ತಿದೆ. ಆದರೆ, ದೀಪಿಕಾಗೆ ಅಲ್ಲು ಅರ್ಜುನ್​ಗೆ ಸರಿಯಾಗಿ ಸಂಭಾವನೆ ನೀಡಿಲ್ಲ. ಅವರಿಗೆ 25 ಕೋಟಿ ರೂಪಾಯಿ ಮಾತ್ರ ನೀಡಲಾಗಿದೆ.

ಉಳಿದ ಹೀರೋಯಿನ್​​ಗಳಿಗೆ ಹೋಲಿಕೆ ಮಾಡಿದರೆ ದೀಪಿಕಾಗೆ ಸಿಕ್ಕ ಸಂಭಾವನೆ ತುಂಬಾನೇ ದೊಡ್ಡದು. ಆದರೆ, ಅಲ್ಲು ಅರ್ಜುನ್ ಜೊತೆ ಹೋಲಿಕೆ ಮಾಡಿದರೆ ಇಬ್ಬರ ಸಂಭಾವನೆಯಲ್ಲಿ ಅಜಗಜಾಂತರ ವ್​ಯತ್ಯಾಸ ಇದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ಪತಿಯ ಸಿನಿಮಾ ದೊಡ್ಡ ಸಕಸ್ಸ್ ಕಂಡರೂ ತುಟಿಪಿಟಿಕ್ ಎನ್ನದ ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಅವರು ಮಗು ಜನಿಸಿದ ಬಳಿಕ ಸಿನಿಮಾ ಶೂಟಿಂಗ್​ ಮಾಡಲು ಸಾಕಷ್ಟು ಕಂಡೀಷನ್ ಹಾಕುತ್ತಿದ್ದಾರೆ. ಈ ಕಂಡೀಷನ್​​ಗೆ ಒಪ್ಪಿಕೊಳ್ಳಲು ಎಲ್ಲರೂ ರೆಡಿ ಇರೋದಿಲ್ಲ. ದೀಪಿಕಾ ಪಡುಕೋಣೆ ಷರತ್ತುಗಳನ್ನು ಅಟ್ಲಿ ತಂಡ ಒಪ್ಪಿಕೊಂಡಿದೆ. ಅವರ ಪಾತ್ರ ಹೇಗಿದೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ