AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ ಗಾಂಧಿಯ ತಿರುಚಿದ ಫೋಟೋ ಹಂಚಿಕೊಂಡ ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್

ಜಾತಿ ಗಣತಿ ಬಗ್ಗೆ ರಾಹುಲ್​ ಗಾಂಧಿ ಮಾತಾಡಿದ್ದನ್ನು ಟೀಕಿಸುವುದು ಕಂಗನಾ ರಣಾವತ್​ ಉದ್ದೇಶ ಆಗಿತ್ತು. ಆದರೆ ಅದಕ್ಕಾಗಿ ಎಡಿಟೆಡ್​ ಫೋಟೋವನ್ನು ಬಳಸಿದ್ದರಿಂದ ರಾಹುಲ್​ ಗಾಂಧಿಗೆ ಅವಮಾನ ಮಾಡಲಾಗಿದೆ ಎಂದು ವಕೀಲರೊಬ್ಬರು ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ವರದಿ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ..

ರಾಹುಲ್​ ಗಾಂಧಿಯ ತಿರುಚಿದ ಫೋಟೋ ಹಂಚಿಕೊಂಡ ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್
ರಾಹುಲ್​ ಗಾಂಧಿ, ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Aug 08, 2024 | 9:17 PM

Share

ನಟಿ ಕಂಗನಾ ರಣಾವತ್​ ಅವರು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾಗ ಮಾಡಿಕೊಂಡ ವಿವಾದಗಳಿಗೆ ಲೆಕ್ಕವೇ ಇಲ್ಲ. ಈಗ ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ರಾಜಕೀಯದಲ್ಲೂ ವಿವಾದಗಳ ಸರಣಿಯನ್ನು ಅವರು ಮುಂದುವರಿಸಿದ್ದಾರೆ. ಬಿಜೆಪಿ ಪಕ್ಷದಿಂದ ಸಂಸದೆಯಾಗಿ ಆಯ್ಕೆ ಆಗಿರುವ ಕಂಗನಾ ರಣಾವತ್​ ಅವರು ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಬಗ್ಗೆ ಟೀಕೆ ಮಾಡುವ ಭರದಲ್ಲಿ ಒಂದು ತಿರುಚಿದ ಫೋಟೋವನ್ನು ಹಂಚಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ನಟಿಯ ವಿರುದ್ಧ 40 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.

ಸಂಸತ್ತಿನಲ್ಲಿ ರಾಹುಲ್​ ಗಾಂಧಿ ಅವರು ಜಾತಿ ಗಣತಿ ಬಗ್ಗೆ ಮಾತನಾಡಿದ್ದರು. ಅದನ್ನು ವಿರೋಧಿಸುವ ಸಲುವಾಗಿ ಕಂಗನಾ ಅವರು ಒಂದು ಎಡಿಟೆಡ್​ ಫೋಟೋವನ್ನು ಹಂಚಿಕೊಂಡರು. ಆ ಫೋಟೋದಲ್ಲಿ ರಾಹುಲ್​ ಗಾಂಧಿ ತಲೆಗೆ ಮುಸ್ಲಿಂ ಟೋಪಿ, ಕ್ರಿಸ್ಚಿಯನ್​ ಕ್ರಾಸ್​, ಹಿಂದೂಗಳ ತಿಲಕ ಮುಂತಾದ್ದನ್ನು ಎಡಿಟ್​ ಮಾಡಲಾಗಿತ್ತು. ಇದರಿಂದ ರಾಹುಲ್​ ಗಾಂಧಿ ಅವರಿಗೆ ಅವಮಾನ ಆಗಿದೆ ನೆಟ್ಟಿಗರು ಗರಂ ಆಗಿದ್ದರು.

ಇದನ್ನೂ ಓದಿ: ಸಂಸದೆ, ನಟಿ ಕಂಗನಾ ರಣಾವತ್​ ಮನೆ ಮಾರಿಕೊಳ್ಳುವ ಸ್ಥಿತಿ ಬಂತಾ? ಎಲ್ಲರಿಗೂ ಅಚ್ಚರಿ

ಈ ವಿಚಾರಕ್ಕೆ ಸಂಬಂಧಿಸಿ ಕಂಗನಾ ರಣಾವತ್​ ವಿರುದ್ಧ ಸುಪ್ರೀಂ ಕೋರ್ಟ್​ ಲಾಯರ್​ ನರೇಂದ್ರ ಮಿಶ್ರಾ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಯಾವುದೇ ವ್ಯಕ್ತಿಯ ಪೋಟೋವನ್ನು ತಿರುಚಿ, ಅದನ್ನು ಆನ್​ಲೈನ್​ನಲ್ಲಿ ಶೇರ್​ ಮಾಡುವುದು ಮಾಹಿತಿ-ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಅಪರಾಧ ಆಗುತ್ತದೆ. ಇದರಿಂದ ರಾಹುಲ್ ಗಾಂಧಿ ಅವರನ್ನು ಸಾರ್ವಜನಿಕವಾಗಿ ಅವಮಾನಿಸಿದಂತೆ ಆಗಿದೆ ಎಂದು ನರೇಂದ್ರ ಮಿಶ್ರಾ ಹೇಳಿದ್ದಾರೆ.

ಕಂಗನಾ ಶೇರ್​ ಮಾಡಿದ್ದ ಎಡಿಟೆಡ್​ ಫೋಟೋ

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಕಂಗನಾ ರಣಾವತ್​ ಅವರು ಆಯ್ಕೆ ಆಗಿದ್ದಾರೆ. ಸಿನಿಮಾ ಕೆಲಸಗಳನ್ನು ಬದಿಗೊತ್ತಿ ಅವರು ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಿರ್ದೇಶನ, ನಿರ್ಮಾಣ ಮಾಡಿ, ನಟಿಸಿರುವ ‘ಎಮರ್ಜೆನ್ಸಿ’ ಸಿನಿಮಾ ಸೆಪ್ಟೆಂಬರ್ 6ರಂದು ಬಿಡುಗಡೆ ಆಗಲಿದೆ. ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ಈ ಸಿನಿಮಾ ಸಿದ್ಧವಾಗಿದೆ. ಎಲ್ಲವೂ ಪ್ಲ್ಯಾನ್​ ಪ್ರಕಾರ ನಡೆದಿದ್ದರೆ ಈಗಾಗಲೇ ಈ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ರಿಲೀಸ್​ ವಿಳಂಬ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್