AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ ಗಾಂಧಿಯ ತಿರುಚಿದ ಫೋಟೋ ಹಂಚಿಕೊಂಡ ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್

ಜಾತಿ ಗಣತಿ ಬಗ್ಗೆ ರಾಹುಲ್​ ಗಾಂಧಿ ಮಾತಾಡಿದ್ದನ್ನು ಟೀಕಿಸುವುದು ಕಂಗನಾ ರಣಾವತ್​ ಉದ್ದೇಶ ಆಗಿತ್ತು. ಆದರೆ ಅದಕ್ಕಾಗಿ ಎಡಿಟೆಡ್​ ಫೋಟೋವನ್ನು ಬಳಸಿದ್ದರಿಂದ ರಾಹುಲ್​ ಗಾಂಧಿಗೆ ಅವಮಾನ ಮಾಡಲಾಗಿದೆ ಎಂದು ವಕೀಲರೊಬ್ಬರು ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ವರದಿ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ..

ರಾಹುಲ್​ ಗಾಂಧಿಯ ತಿರುಚಿದ ಫೋಟೋ ಹಂಚಿಕೊಂಡ ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್
ರಾಹುಲ್​ ಗಾಂಧಿ, ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Aug 08, 2024 | 9:17 PM

Share

ನಟಿ ಕಂಗನಾ ರಣಾವತ್​ ಅವರು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾಗ ಮಾಡಿಕೊಂಡ ವಿವಾದಗಳಿಗೆ ಲೆಕ್ಕವೇ ಇಲ್ಲ. ಈಗ ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ರಾಜಕೀಯದಲ್ಲೂ ವಿವಾದಗಳ ಸರಣಿಯನ್ನು ಅವರು ಮುಂದುವರಿಸಿದ್ದಾರೆ. ಬಿಜೆಪಿ ಪಕ್ಷದಿಂದ ಸಂಸದೆಯಾಗಿ ಆಯ್ಕೆ ಆಗಿರುವ ಕಂಗನಾ ರಣಾವತ್​ ಅವರು ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಬಗ್ಗೆ ಟೀಕೆ ಮಾಡುವ ಭರದಲ್ಲಿ ಒಂದು ತಿರುಚಿದ ಫೋಟೋವನ್ನು ಹಂಚಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ನಟಿಯ ವಿರುದ್ಧ 40 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.

ಸಂಸತ್ತಿನಲ್ಲಿ ರಾಹುಲ್​ ಗಾಂಧಿ ಅವರು ಜಾತಿ ಗಣತಿ ಬಗ್ಗೆ ಮಾತನಾಡಿದ್ದರು. ಅದನ್ನು ವಿರೋಧಿಸುವ ಸಲುವಾಗಿ ಕಂಗನಾ ಅವರು ಒಂದು ಎಡಿಟೆಡ್​ ಫೋಟೋವನ್ನು ಹಂಚಿಕೊಂಡರು. ಆ ಫೋಟೋದಲ್ಲಿ ರಾಹುಲ್​ ಗಾಂಧಿ ತಲೆಗೆ ಮುಸ್ಲಿಂ ಟೋಪಿ, ಕ್ರಿಸ್ಚಿಯನ್​ ಕ್ರಾಸ್​, ಹಿಂದೂಗಳ ತಿಲಕ ಮುಂತಾದ್ದನ್ನು ಎಡಿಟ್​ ಮಾಡಲಾಗಿತ್ತು. ಇದರಿಂದ ರಾಹುಲ್​ ಗಾಂಧಿ ಅವರಿಗೆ ಅವಮಾನ ಆಗಿದೆ ನೆಟ್ಟಿಗರು ಗರಂ ಆಗಿದ್ದರು.

ಇದನ್ನೂ ಓದಿ: ಸಂಸದೆ, ನಟಿ ಕಂಗನಾ ರಣಾವತ್​ ಮನೆ ಮಾರಿಕೊಳ್ಳುವ ಸ್ಥಿತಿ ಬಂತಾ? ಎಲ್ಲರಿಗೂ ಅಚ್ಚರಿ

ಈ ವಿಚಾರಕ್ಕೆ ಸಂಬಂಧಿಸಿ ಕಂಗನಾ ರಣಾವತ್​ ವಿರುದ್ಧ ಸುಪ್ರೀಂ ಕೋರ್ಟ್​ ಲಾಯರ್​ ನರೇಂದ್ರ ಮಿಶ್ರಾ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಯಾವುದೇ ವ್ಯಕ್ತಿಯ ಪೋಟೋವನ್ನು ತಿರುಚಿ, ಅದನ್ನು ಆನ್​ಲೈನ್​ನಲ್ಲಿ ಶೇರ್​ ಮಾಡುವುದು ಮಾಹಿತಿ-ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಅಪರಾಧ ಆಗುತ್ತದೆ. ಇದರಿಂದ ರಾಹುಲ್ ಗಾಂಧಿ ಅವರನ್ನು ಸಾರ್ವಜನಿಕವಾಗಿ ಅವಮಾನಿಸಿದಂತೆ ಆಗಿದೆ ಎಂದು ನರೇಂದ್ರ ಮಿಶ್ರಾ ಹೇಳಿದ್ದಾರೆ.

ಕಂಗನಾ ಶೇರ್​ ಮಾಡಿದ್ದ ಎಡಿಟೆಡ್​ ಫೋಟೋ

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಕಂಗನಾ ರಣಾವತ್​ ಅವರು ಆಯ್ಕೆ ಆಗಿದ್ದಾರೆ. ಸಿನಿಮಾ ಕೆಲಸಗಳನ್ನು ಬದಿಗೊತ್ತಿ ಅವರು ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಿರ್ದೇಶನ, ನಿರ್ಮಾಣ ಮಾಡಿ, ನಟಿಸಿರುವ ‘ಎಮರ್ಜೆನ್ಸಿ’ ಸಿನಿಮಾ ಸೆಪ್ಟೆಂಬರ್ 6ರಂದು ಬಿಡುಗಡೆ ಆಗಲಿದೆ. ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ಈ ಸಿನಿಮಾ ಸಿದ್ಧವಾಗಿದೆ. ಎಲ್ಲವೂ ಪ್ಲ್ಯಾನ್​ ಪ್ರಕಾರ ನಡೆದಿದ್ದರೆ ಈಗಾಗಲೇ ಈ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ರಿಲೀಸ್​ ವಿಳಂಬ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್