AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ ಗಾಂಧಿಯ ತಿರುಚಿದ ಫೋಟೋ ಹಂಚಿಕೊಂಡ ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್

ಜಾತಿ ಗಣತಿ ಬಗ್ಗೆ ರಾಹುಲ್​ ಗಾಂಧಿ ಮಾತಾಡಿದ್ದನ್ನು ಟೀಕಿಸುವುದು ಕಂಗನಾ ರಣಾವತ್​ ಉದ್ದೇಶ ಆಗಿತ್ತು. ಆದರೆ ಅದಕ್ಕಾಗಿ ಎಡಿಟೆಡ್​ ಫೋಟೋವನ್ನು ಬಳಸಿದ್ದರಿಂದ ರಾಹುಲ್​ ಗಾಂಧಿಗೆ ಅವಮಾನ ಮಾಡಲಾಗಿದೆ ಎಂದು ವಕೀಲರೊಬ್ಬರು ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ವರದಿ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ..

ರಾಹುಲ್​ ಗಾಂಧಿಯ ತಿರುಚಿದ ಫೋಟೋ ಹಂಚಿಕೊಂಡ ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್
ರಾಹುಲ್​ ಗಾಂಧಿ, ಕಂಗನಾ ರಣಾವತ್​
Follow us
ಮದನ್​ ಕುಮಾರ್​
|

Updated on: Aug 08, 2024 | 9:17 PM

ನಟಿ ಕಂಗನಾ ರಣಾವತ್​ ಅವರು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾಗ ಮಾಡಿಕೊಂಡ ವಿವಾದಗಳಿಗೆ ಲೆಕ್ಕವೇ ಇಲ್ಲ. ಈಗ ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ರಾಜಕೀಯದಲ್ಲೂ ವಿವಾದಗಳ ಸರಣಿಯನ್ನು ಅವರು ಮುಂದುವರಿಸಿದ್ದಾರೆ. ಬಿಜೆಪಿ ಪಕ್ಷದಿಂದ ಸಂಸದೆಯಾಗಿ ಆಯ್ಕೆ ಆಗಿರುವ ಕಂಗನಾ ರಣಾವತ್​ ಅವರು ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಬಗ್ಗೆ ಟೀಕೆ ಮಾಡುವ ಭರದಲ್ಲಿ ಒಂದು ತಿರುಚಿದ ಫೋಟೋವನ್ನು ಹಂಚಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ನಟಿಯ ವಿರುದ್ಧ 40 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.

ಸಂಸತ್ತಿನಲ್ಲಿ ರಾಹುಲ್​ ಗಾಂಧಿ ಅವರು ಜಾತಿ ಗಣತಿ ಬಗ್ಗೆ ಮಾತನಾಡಿದ್ದರು. ಅದನ್ನು ವಿರೋಧಿಸುವ ಸಲುವಾಗಿ ಕಂಗನಾ ಅವರು ಒಂದು ಎಡಿಟೆಡ್​ ಫೋಟೋವನ್ನು ಹಂಚಿಕೊಂಡರು. ಆ ಫೋಟೋದಲ್ಲಿ ರಾಹುಲ್​ ಗಾಂಧಿ ತಲೆಗೆ ಮುಸ್ಲಿಂ ಟೋಪಿ, ಕ್ರಿಸ್ಚಿಯನ್​ ಕ್ರಾಸ್​, ಹಿಂದೂಗಳ ತಿಲಕ ಮುಂತಾದ್ದನ್ನು ಎಡಿಟ್​ ಮಾಡಲಾಗಿತ್ತು. ಇದರಿಂದ ರಾಹುಲ್​ ಗಾಂಧಿ ಅವರಿಗೆ ಅವಮಾನ ಆಗಿದೆ ನೆಟ್ಟಿಗರು ಗರಂ ಆಗಿದ್ದರು.

ಇದನ್ನೂ ಓದಿ: ಸಂಸದೆ, ನಟಿ ಕಂಗನಾ ರಣಾವತ್​ ಮನೆ ಮಾರಿಕೊಳ್ಳುವ ಸ್ಥಿತಿ ಬಂತಾ? ಎಲ್ಲರಿಗೂ ಅಚ್ಚರಿ

ಈ ವಿಚಾರಕ್ಕೆ ಸಂಬಂಧಿಸಿ ಕಂಗನಾ ರಣಾವತ್​ ವಿರುದ್ಧ ಸುಪ್ರೀಂ ಕೋರ್ಟ್​ ಲಾಯರ್​ ನರೇಂದ್ರ ಮಿಶ್ರಾ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಯಾವುದೇ ವ್ಯಕ್ತಿಯ ಪೋಟೋವನ್ನು ತಿರುಚಿ, ಅದನ್ನು ಆನ್​ಲೈನ್​ನಲ್ಲಿ ಶೇರ್​ ಮಾಡುವುದು ಮಾಹಿತಿ-ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಅಪರಾಧ ಆಗುತ್ತದೆ. ಇದರಿಂದ ರಾಹುಲ್ ಗಾಂಧಿ ಅವರನ್ನು ಸಾರ್ವಜನಿಕವಾಗಿ ಅವಮಾನಿಸಿದಂತೆ ಆಗಿದೆ ಎಂದು ನರೇಂದ್ರ ಮಿಶ್ರಾ ಹೇಳಿದ್ದಾರೆ.

ಕಂಗನಾ ಶೇರ್​ ಮಾಡಿದ್ದ ಎಡಿಟೆಡ್​ ಫೋಟೋ

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಕಂಗನಾ ರಣಾವತ್​ ಅವರು ಆಯ್ಕೆ ಆಗಿದ್ದಾರೆ. ಸಿನಿಮಾ ಕೆಲಸಗಳನ್ನು ಬದಿಗೊತ್ತಿ ಅವರು ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಿರ್ದೇಶನ, ನಿರ್ಮಾಣ ಮಾಡಿ, ನಟಿಸಿರುವ ‘ಎಮರ್ಜೆನ್ಸಿ’ ಸಿನಿಮಾ ಸೆಪ್ಟೆಂಬರ್ 6ರಂದು ಬಿಡುಗಡೆ ಆಗಲಿದೆ. ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ಈ ಸಿನಿಮಾ ಸಿದ್ಧವಾಗಿದೆ. ಎಲ್ಲವೂ ಪ್ಲ್ಯಾನ್​ ಪ್ರಕಾರ ನಡೆದಿದ್ದರೆ ಈಗಾಗಲೇ ಈ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ರಿಲೀಸ್​ ವಿಳಂಬ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ