AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಲ್ಪಾ ಶೆಟ್ಟಿ- ರಾಜ್ ಕುಂದ್ರಾಗೆ ಹೊಸ ಸಂಕಷ್ಟ; 41 ಲಕ್ಷ ರೂ ವಂಚಿಸಿದ್ದಾರೆಂದು ದೂರು ನೀಡಿದ ದೆಹಲಿ ಮೂಲದ ಉದ್ಯಮಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾಗೆ ಹೊಸ ಸಂಕಷ್ಟ ಎದುರಾಗಿದೆ. ದೆಹಲಿ ಮೂಲದ ಉದ್ಯಮಿಯೊಬ್ಬರು ದಂಪತಿಯ ವಿರುದ್ಧ ವಂಚನೆಯ ಪ್ರಕರಣವನ್ನು ದಾಖಲಿಸಿದ್ದಾರೆ.

ಶಿಲ್ಪಾ ಶೆಟ್ಟಿ- ರಾಜ್ ಕುಂದ್ರಾಗೆ ಹೊಸ ಸಂಕಷ್ಟ; 41 ಲಕ್ಷ ರೂ ವಂಚಿಸಿದ್ದಾರೆಂದು ದೂರು ನೀಡಿದ ದೆಹಲಿ ಮೂಲದ ಉದ್ಯಮಿ
ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ
TV9 Web
| Edited By: |

Updated on: Sep 02, 2021 | 7:30 PM

Share

ನವದೆಹಲಿ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ(Shilpa Shetty) ಹಾಗೂ ಅವರ ಪತಿ ಉದ್ಯಮಿ ರಾಜ್ ಕುಂದ್ರಾಗೆ(Raj Kundra) ಸಂಕಷ್ಟಗಳು ಮುಗಿಯುವ ಲಕ್ಷಣ ಕಾಣುತ್ತಿಲ್ಲ.  ನ್ಯಾಯಾಂಗ ಬಂಧನದಲ್ಲಿರುವ ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿ ವಿರುದ್ಧ ದೆಹಲಿ ಮೂಲದ ಉದ್ಯಮಿಯೊಬ್ಬರು ವಂಚನೆ ಮಾಡಿದ್ದಾರೆ ಎಂದು ದೂರು ನೀಡಿದ್ದು, ಪೊಲೀಸರಲ್ಲಿ ಎಫ್​ಐಆರ್​ ದಾಖಲಿಸುವಂತೆ ಕೋರಿಕೊಂಡಿದ್ದಾರೆ. ದೂರಿನ ಪ್ರಕಾರ ರಾಜ್ ಕುಂದ್ರಾ ಅವರು ಮುಂಬೈ ಮೂಲದ ಕಂಪನಿಯೊಂದರಲ್ಲಿ ಉದ್ಯಮಿಗೆ ಹಣ ಹೂಡಲು ಮನವೊಲಿಸಿದ್ದರು. ಅದರ ಪ್ರಕಾರ 41 ಲಕ್ಷ ರೂಗಳನ್ನು ಹೂಡಿದ ಉದ್ಯಮಿಯ ಹಣವನ್ನು ದುರುದ್ದೇಶಕ್ಕೆ ಬಳಸಲಾಗಿದೆ ಎಂದು ದೂರಲಾಗಿದೆ.

ಟೈಮ್ಸ್ ಆಫ್ ಇಂಡಿಯಾ ಪ್ರಕಾರ, “ಆರೋಪಿತರು(ರಾಜ್ ಕುಂದ್ರಾ, ಶಿಲ್ಪಾ ಶೆಟ್ಟಿ) ಉದ್ದೇಶಪೂರ್ವಕವಾಗಿ ದೂರುದಾರರನ್ನು(ಉದ್ಯಮಿ) 41,33,782 ರೂ.ಗಳನ್ನು ಹೂಡಿಕೆ ಮಾಡಲು ಪ್ರೇರೇಪಿಸಿ ನಂತರ ದುರುಪಯೋಗಪಡಿಸಿಕೊಂಡಿದ್ದಾರೆ. ಹಾಗೂ ಅದನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಸಿದ್ದಾರೆ ಮತ್ತು ಅದರಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಿದ್ದಾರೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹಣವನ್ನು ಗೇಮಿಂಗ್, ಅನಿಮೇಷನ್ ಮತ್ತು ಸೌಂದರ್ಯ ಉತ್ಪನ್ನಗಳಿಗೆ ಬಳಸುವುದಾಗಿ ರಾಜ್ ಹೇಳಿಕೊಂಡಿದ್ದರು. ಆದರೆ ಅವರು ಹಣವನ್ನು ಡಿಜಿಟಲ್ ಅಪ್ಲಿಕೇಶನ್‌ಗಳ ಮೂಲಕ ವಯಸ್ಕರ ವಿಷಯವನ್ನು ಸೃಷ್ಟಿಸಲು ಮತ್ತು ಪ್ರಕಟಿಸಲು ಹೂಡಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ ಎಂದು ಉದ್ಯಮಿ ದೂರಿನಲ್ಲಿ ತಿಳಿಸಿದ್ದಾರೆ. ಸ್ವಾರ್ಥ ಹಾಗೂ ವಂಚನೆಯ ಉದ್ದೇಶದಿಂದ ಹಣವನ್ನು ಹೂಡಿಕೆ ಮಾಡಲು ತಿಳಿಸಿದ್ದಕ್ಕಾಗಿ ಹಾಗೂ ಕೆಟ್ಟ ಉದ್ದೇಶಗಳಿಗೆ ಹಣವನ್ನು ಬಳಸಿದ್ದಕ್ಕಾಗಿ ದೆಹಲಿಯ ಉದ್ಯಮಿ ದೂರು ನೀಡಿದ್ದಾರೆ.

ರಾಜ್ ಕುಂದ್ರಾ, ಶಿಲ್ಪಾ ಶೆಟ್ಟಿ ಹಾಗೂ ಇತರ ಆರು ಜನರ ವಿರುದ್ಧ ವಂಚನೆ, ಮಾಹಿತಿ ತಂತ್ರಜ್ಞಾನ ಕಾಯ್ದೆ, ಮಹಿಳೆಯರ ಅಸಭ್ಯ ಪ್ರಾತಿನಿಧ್ಯ(ನಿಷೇಧ) ಕಾಯ್ದೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲು ಉದ್ಯಮಿ ಕೋರಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದ ಕುರಿತು ದೆಹಲಿಯ ನ್ಯಾಯಾಲಯವು ನವೆಂಬರ್ 9ರ ಒಳಗೆ ವರದಿಯನ್ನು ನೀಡುವಂತೆ ಪೊಲೀಸರಿಗೆ ತಿಳಿಸಿದೆ.

ಇದನ್ನೂ ಓದಿ:

‘ಈಗಾಗಲೇ ಸಾಮಾನ್ಯ ಜನರು ಬಡತನ, ನಿರುದ್ಯೋಗದ ಕಾರಣ 3ನೇ ಅಲೆಯನ್ನು ಅನುಭವಿಸುತ್ತಿದ್ದಾರೆ’: ಸೋನು ಸೂದ್

ಕಿಚ್ಚ ಸುದೀಪ್​ ಜನ್ಮದಿನ: ಬರಬೇಡಿ ಎಂದರೂ ಮನೆ ಬಾಗಿಲಿಗೆ ಬಂದು ಕಾದ ಫ್ಯಾನ್ಸ್​

(Delhi based entrepreneur accused and file a complaint against Shilpa Shetty and Raj Kundra for fraud)

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್