AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟದಲ್ಲಿ ಎಆರ್ ರೆಹಮಾನ್, 2 ಕೋಟಿ ದಂಡ ವಿಧಿಸಿದ ದೆಹಲಿ ಹೈಕೋರ್ಟ್

AR Rahman: ಭಾರತದ ನಂಬರ್ 1 ಸಂಗೀತ ನಿರ್ದೇಶಕ ಎನಿಸಿಕೊಂಡಿರುವ ಎಆರ್ ರೆಹಮಾನ್ ಅವರ ಒಂದು ಹಾಡು ಈಗ ವಿವಾದಕ್ಕೆ ಕಾರಣವಾಗಿದೆ. ರೆಹಮಾನ್ ಕಂಪೋಸ್ ಮಾಡಿರುವ ಹಾಡಿನ ಮೇಲೆ ಕೃತಿಚೌರ್ಯ ಆರೋಪ ಮಾಡಲಾಗಿತ್ತು. ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಎಆರ್ ರೆಹಮಾನ್ ವಿರುದ್ಧ ಆದೇಶ ಹೊರಡಿಸಿದ್ದು, ಎರಡು ಕೋಟಿ ದಂಡ ವಿಧಿಸಿದೆ.

ಸಂಕಷ್ಟದಲ್ಲಿ ಎಆರ್ ರೆಹಮಾನ್, 2 ಕೋಟಿ ದಂಡ ವಿಧಿಸಿದ ದೆಹಲಿ ಹೈಕೋರ್ಟ್
Ps2
ಮಂಜುನಾಥ ಸಿ.
|

Updated on: Apr 26, 2025 | 3:41 PM

Share

ಮಣಿರತ್ನಂ (Mani Ratnam) ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾದ ನಿರ್ಮಾಪಕರು ಮತ್ತು ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾದ ಹಾಡೊಂದರ ಬಗ್ಗೆ ಹೂಡಲಾಗಿದ್ದ ದಾವೆಯಲ್ಲಿ ಸಿನಿಮಾ ನಿರ್ಮಾಪಕರಿಗೆ ಮತ್ತು ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರಿಗೆ ಹಿನ್ನಡೆ ಉಂಟಾಗಿದೆ. ಎಆರ್ ರೆಹಮಾನ್, ಬೇರೆ ಹಾಡೊಂದರ ರಾಗ, ಸಂಗೀತವನ್ನು ಕೃತಿಚೌರ್ಯ ಮಾಡಿರುವ ಆರೋಪ ಸಾಬೀತಾಗಿದ್ದು ಎರಡು ಕೋಟಿ ರೂಪಾಯಿ ದಂಡವನ್ನು ಹೈಕೋರ್ಟ್ ವಿಧಿಸಿದೆ.

‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾದಲ್ಲಿ ಜಯಂ ರವಿ ಮತ್ತು ಶೋಭಿತಾ ಧುಲಿಪಾಲ ನಡುವೆ ‘ವೀರ ರಾಜ ವೀರ’ ಎಂಬ ಹಾಡೊಂದು ಇದೆ. ಈ ಹಾಡಿನ ವಿರುದ್ಧ ಉಸ್ತಾದ್ ಫಯಾಜ್ ಡಾಗರ್ ಎಂಬುವರು ಹಾಡಿನ ವಿರುದ್ಧ ಕೃತಿಚೌರ್ಯದ ಆರೋಪದ ಮಾಡಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ‘ವೀರ ರಾಜ ವೀರ’ ಹಾಡನ್ನು ಶಿವ ಸ್ತುತಿಯಿಂದ ಕದ್ದಿದ್ದು, ಶಿವ ಸ್ತುತಿಯನ್ನು ತಮ್ಮ ತಂದೆ ಮತ್ತು ತಮ್ಮ ಚಿಕ್ಕಪ್ಪನವರು ಕಂಪೋಸ್ ಮಾಡಿದ್ದರು, ಅದರ ರಾಗ, ಸಂಗೀತ, ಬೀಟ್​ಗಳನ್ನು ಸಹ ಯಾವುದೇ ಬದಲಾವಣೆ ಇಲ್ಲದೆ ಬಳಸಿಕೊಂಡಿದ್ದಾರೆ’ ಎಂದು ಉಸ್ತಾದ್ ಫಯಾಜ್ ಆರೋಪಿಸಿದ್ದಾರೆ.

ದೂರಿನ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಎಆರ್ ರೆಹಮಾನ್ ಅವರಿಗೆ ಎರಡು ಕೋಟಿ ರೂಪಾಯಿ ದಂಡವನ್ನು ಹೇರಿದೆ ಅದರ ಜೊತೆಗೆ ಕೋರ್ಟ್ ಕಪಾಲದ ಖರ್ಚಿಗೆ ಎರಡು ಲಕ್ಷ ರೂಪಾಯಿಯನ್ನು ಹೆಚ್ಚುವರಿಯಾಗಿ ಡಾಗರ್ ಕುಟುಂಬಕ್ಕೆ ನೀಡಬೇಕು ಎಂದಿದೆ. ಇದರ ಜೊತೆಗೆ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ಯಾವೆಲ್ಲ ವೇದಿಕೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆಯೋ ಅಲ್ಲೆಲ್ಲ ಮೂಲ ಹಾಡಿನ ಸಂಗೀತ ನಿರ್ದೇಶಕರ ಹೆಸರುಗಳನ್ನು ಸೇರಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.

ಇದನ್ನೂ ಓದಿ:ಎಆರ್ ರೆಹಮಾನ್ ಹಾಗೂ ಸೈರಾ ಬಾನು ವಿಚ್ಛೇದನಕ್ಕೆ ಕೊನೆಗೂ ಸಿಕ್ಕಿತು ಕಾರಣ

ಶಿವಸ್ತುತಿಯನ್ನು ಉಸ್ತಾದ್ ಫೈಯಾಜುದ್ದೀನ್ ಮತ್ತು ಉಸ್ತಾದ್ ಜಹೀರುದ್ಧೀನ್ ಅವರುಗಳು ಕಂಪೋಸ್ ಮಾಡಿದ್ದರು. ಮೂಲ ಹಾಡಿನ ಸಂಗೀತ, ಬೀಟ್, ರಾಗ, ಹಿನ್ನೆಲೆ ಸಂಗೀತವನ್ನು ಎಆರ್ ರೆಹಮಾನ್, ತಮ್ಮ ಹಾಡಿನಲ್ಲಿ ಯಥಾವತ್ತಾಗಿ ಬಳಸಿಕೊಂಡಿದ್ದಾರೆ. ಮೂಲ ರಾಗ ಸಂಯೋಜಕರ ಹೆಸರನ್ನು ಸಹ ಉಲ್ಲೇಖಿಸಿಲ್ಲ. ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ಅನ್ನು ಮಣಿರತ್ನಂ ನಿರ್ದೇಶನ ಮಾಡಿದ್ದು, ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದರು. ಎರಡೂ ಭಾಗಗಳಿಗೆ ಅವರೇ ಸಂಗೀತ ನೀಡಿದ್ದು ಎರಡು ಭಾಗಗಳಲ್ಲಿ ಹಲವು ಹಾಡುಗಳನ್ನು ಅವರು ಕಂಪೋಸ್ ಮಾಡಿದ್ದರು. ಅದರಲ್ಲಿ ಒಂದು ಹಾಡಿನ ಮೇಲೆ ಕೃತಿ ಚೌರ್ಯದ ಆರೋಪ ಹೊರಿಸಲಾಗಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಲಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ