AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಸಂಭಾಷಣೆ, ಹದ್ದು ಮೀರಿದ ಗ್ಲಾಮರ್ ಆದರೂ ‘ಯು/ಎ’

Housefull 5: ಅಕ್ಷಯ್ ಕುಮಾರ್, ಅಭಿಷೇಕ್ ಬಚ್ಚನ್, ರಿತೇಶ್ ದೇಶ್​ಮುಖ್ ನಟನೆಯ ‘ಹೌಸ್​ಫುಲ್ 5’ ಸಿನಿಮಾ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ಸಿನಿಮಾ ನೋಡಿದ ಮಂದಿ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿನಿಮಾನಲ್ಲಿ ಸಾಕಷ್ಟು ಅಶ್ಲೀಲತೆ, ಅನವಶ್ಯಕ ಗ್ಲಾಮರ್ ಎಲ್ಲವೂ ಇದೆ. ಹಾಗಿದ್ದರೂ ಸಹ ಸಿನಿಮಾಕ್ಕೆ 'ಯು/ಎ' ಪ್ರಮಾಣ ಪತ್ರ ನೀಡಲಾಗಿದೆ.

ಅಶ್ಲೀಲ ಸಂಭಾಷಣೆ, ಹದ್ದು ಮೀರಿದ ಗ್ಲಾಮರ್ ಆದರೂ ‘ಯು/ಎ’
Housefull5
ಮಂಜುನಾಥ ಸಿ.
|

Updated on: Jun 10, 2025 | 1:48 PM

Share

ಸಿನಿಮಾಗಳು ಸಾರ್ವಜನಿಕ ವೀಕ್ಷಣೆ ಕಂಟೆಂಟ್, ಯೂಟ್ಯೂಬ್ ಅಥವಾ ವೆಬ್​ಸೈಟ್​ಗಳ ರೀತಿ ಖಾಸಗಿ ವೀಕ್ಷಣೆಗಾಗಿ ನಿರ್ಮಾಣವಾಗಿಲ್ಲ. ಹಾಗಾಗಿ ಸಿನಿಮಾಗಳಿಗೆ ಪ್ರಮಾಣ ಪತ್ರ ಅಥವಾ ರೇಟಿಂಗ್ ನೀಡಲಾಗುತ್ತದೆ. ಯಾವ ವಯೋಮಾನದವರು ಯಾವ ರೀತಿಯ ಸಿನಿಮಾಗಳನ್ನು ನೋಡಬಹುದು, ಯಾವ ರೀತಿಯ ಸಿನಿಮಾಗಳನ್ನು ನೋಡಬಾರದು ಎಂದು ನಿಯಮಗಳನ್ನು ರೂಪಿಸಿ ಅದಕ್ಕೆ ಅನುಸಾರವಾಗಿ ‘ಯು’, ‘ಎ’, ‘ಯು/ಎ’ ಇನ್ನೂ ಕೆಲವು ಪ್ರಮಾಣ ಪತ್ರಗಳನ್ನು ನೀಡಲಾಗುತ್ತದೆ. ಆದರೆ ಕೆಲವು ನಿರ್ಮಾಪಕರು, ನಟರು ತಮ್ಮ ಪ್ರಭಾವ ಬಳಸಿ ಈ ರೇಟಿಂಗ್​ಗಳನ್ನು ಬದಲಾಯಿಸಿರುವ ಉದಾಹರಣೆ ಸಾಕಷ್ಟಿದೆ. ಇದೀಗ ಹೊಸ ಸಿನಿಮಾ ಒಂದರ ಮೇಲೆ ಇದೇ ಆರೋಪ ಬಂದಿದೆ.

ಕಳೆದ ವಾರವಷ್ಟೆ (ಜೂನ್ 06) ಅಕ್ಷಯ್ ಕುಮಾರ್, ರಿತೇಶ್ ದೇಶ್​ಮುಖ್, ಅಭಿಷೇಕ್ ಬಚ್ಚನ್ ಇನ್ನೂ ಹಲವಾರು ಸ್ಟಾರ್ ನಟ, ನಟಿಯರು ನಟಿಸಿರುವ ‘ಹೌಸ್​ಫುಲ್ 5’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಲಾಗಿದೆ. ಅಂದರೆ 18 ವರ್ಷದ ಒಳಗಿರುವವರು ತಮ್ಮ ಪೋಷಕರ ನಿಗಾವಣೆಯಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ. ಹೆಚ್ಚು ಅಶ್ಲೀಲತೆ ಇಲ್ಲದ ಸಿನಿಮಾಗಳಿಗೆ, ಅತಿಯಾದ ಹಿಂಸೆ ಇಲ್ಲದ ಸಿನಿಮಾಗಳಿಗೆ ಈ ಪ್ರಮಾಣ ಪತ್ರ ನೀಡಲಾಗುತ್ತದೆ. ಆದರೆ ‘ಹೌಸ್​ಫುಲ್ 5’ ಸಿನಿಮಾ ನೋಡಿದವರು ಈ ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಿರುವುದಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

‘ಹೌಸ್​ಫುಲ್ 5’ ಸಿನಿಮಾನಲ್ಲಿ ವಿಪರೀತ ಡಬಲ್ ಮೀನಿಂಗ್ ಡೈಲಾಗ್​ಗಳು, ಲೈಂಗಿಕತೆಗೆ ಸಂಬಂಧಿಸಿದ ಸಂಭಾಷಣೆಗಳು, ಅತಿಯಾದ ಗ್ಲಾಮರ್, ಬಿಕಿನಿ ಡ್ಯಾನ್ಸ್​ ಎಲ್ಲವೂ ಇದೆಯಂತೆ. ಆದರೂ ಸಹ ಈ ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ದೊರೆತಿದೆ. ಈ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ ನೀಡಬೇಕಿತ್ತು ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಸಿನಿಮಾದ ಟ್ರೈಲರ್​ನಲ್ಲಿಯೂ ಸಹ ಡಬಲ್ ಮೀನಿಂಗ್ ಡೈಲಾಗ್, ಗ್ಲಾಮರ್​ನ ಝಲಕ್ ಅನ್ನು ತೋರಿಸಲಾಗಿದೆ.

ಇದನ್ನೂ ಓದಿ:ನೆಗೆಟಿವ್ ವಿಮರ್ಶೆಗಳ ನಡುವೆಯೂ 100 ಕೋಟಿ ದಾಟಿದ ಅಕ್ಷಯ್ ಕುಮಾರ್ ಸಿನಿಮಾ

‘ಹೌಸ್​ಫುಲ್ 5’ ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡುವಲ್ಲಿ ನಿರ್ಮಾಪಕ ಅಥವಾ ನಟರ ಪ್ರಭಾವ ಬಳಕೆ ಆಗಿರಬಹುದು ಎಂದು ಕೆಲ ನೆಟ್ಟಿಗರು ಅನುಮಾನ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಯರು ಅಥವಾ ಸಹ ಡ್ಯಾನ್ಸರ್​ಗಳು ಬಿಕಿನಿ ಧರಿಸಿದರೆ ಸಹ ‘ಯು/ಎ’ ಕೆಲವೊಮ್ಮೆ ‘ಎ’ ಪ್ರಮಾಣ ಕೊಟ್ಟ ಉದಾಹರಣೆಯೂ ಇದೆ. ಆದರೆ ಇಷ್ಟೆಲ್ಲ ಅಶ್ಲೀಲತೆ, ಡಬಲ್ ಮೀನಿಂಗ್ ಡೈಲಾಗ್​ಗಳ ಹೊರತಾಗಿಯೂ ಸಿನಿಮಾಕ್ಕೆ ಕೇವಲ ‘ಯು/ಎ’ ಕೊಟ್ಟಿರುವುದು ಆಶ್ಚರ್ಯವೇ ಸರಿ.

ಏನೇ ಆಗಲಿ, ‘ಹೌಸ್​ಫುಲ್ 5’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆ ಆದ ಕೇವಲ ನಾಲ್ಕು ದಿನಕ್ಕೆ 140 ಕೋಟಿಗೂ ಹೆಚ್ಚು ಹಣ ಗಳಿಕೆ ಮಾಡಿದೆ. ಸಿನಿಮಾಕ್ಕೆ ಅಕ್ಷಯ್ ಕುಮಾರ್ ಅವರ ಆತ್ಮೀಯ ಗೆಳೆಯ ಸಾಜಿದ್ ನಾಡಿಯಾವಾಲ ಬಂಡವಾಳ ತೊಡಗಿಸಿದ್ದಾರೆ. ಕತೆ, ಚಿತ್ರಕತೆಯೂ ಅವರದ್ದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!