AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಗೆಟಿವ್ ವಿಮರ್ಶೆಗಳ ನಡುವೆಯೂ 100 ಕೋಟಿ ದಾಟಿದ ಅಕ್ಷಯ್ ಕುಮಾರ್ ಸಿನಿಮಾ

Housefull 5: ಒಳ್ಳೆಯ ಸಿನಿಮಾ ವಿಮರ್ಶೆಗಳು ಬಂದ ಸಿನಿಮಾಗಳೇ ಬಾಕ್ಸ್ ಆಫೀಸ್​ನಲ್ಲಿ ಸೋಲು ಕಾಣುತ್ತವೆ. ಆದರೆ ಇಲ್ಲೊಂದು ಸಿನಿಮಾಕ್ಕೆ ಕೇವಲ ನೆಗಟಿವ್ ವಿಮರ್ಶೆಗಳು ಬಂದರೂ ಸಹ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿದೆ. ಬಿಡುಗಡೆ ಆದ ಕೇವಲ ನಾಲ್ಕೇ ದಿನದಲ್ಲಿ 100 ಕೋಟಿ ಕಲೆಕ್ಷನ್ ಅನ್ನು ದಾಟಿದ್ದು, ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಯಾವುದು ಆ ಸಿನಿಮಾ? ಇಲ್ಲಿದೆ ಮಾಹಿತಿ...

ನೆಗೆಟಿವ್ ವಿಮರ್ಶೆಗಳ ನಡುವೆಯೂ 100 ಕೋಟಿ ದಾಟಿದ ಅಕ್ಷಯ್ ಕುಮಾರ್ ಸಿನಿಮಾ
Housefull 5
ಮಂಜುನಾಥ ಸಿ.
|

Updated on: Jun 10, 2025 | 11:15 AM

Share

ಕಳೆದ ಕೆಲ ವರ್ಷಗಳಿಂದ ಸಂದೇಶ ಹೊಂದಿದ, ದೇಶಪ್ರೇಮ ಬಡಿದೆಬ್ಬಿಸುವ ಸಿನಿಮಾಗಳನ್ನು ಮಾಡುತ್ತಲೇ ಬರುತ್ತಿದ್ದ ಅಕ್ಷಯ್ ಕುಮಾರ್ (Akshay Kumar) ದೊಡ್ಡ ಯಶಸ್ಸು ಕಂಡಿರಲಿಲ್ಲ. ಕೆಲವು ಸಿನಿಮಾಗಳಂತೂ ಬಾಕ್ಸ್ ಆಫೀಸ್​​ನಲ್ಲಿ ಅಟ್ಟರ್ ಫ್ಲಾಪ್ ಆಗಿದ್ದವು. ಆದರೆ ಇದೀಗ ಅಕ್ಷಯ್ ಕಾಮಿಡಿ ಸಿನಿಮಾ ಒಂದರಲ್ಲಿ ನಟಿಸಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ನೆಗೆಟಿವ್ ವಿಮರ್ಶೆಗಳು ಬಂದ ಹೊರತಾಗಿಯೂ ಸಿನಿಮಾ ನಾಲ್ಕೇ ದಿನಗಳಲ್ಲಿ 100 ಕೋಟಿಗೂ ಹೆಚ್ಚು ಹಣ ಗಳಿಸಿಕೊಂಡಿದೆ.

ಅಕ್ಷಯ್ ಕುಮಾರ್, ಅಭಿಷೇಕ್ ಬಚ್ಚನ್, ರಿತೇಶ್ ದೇಶ್​ಮುಖ್, ಸಂಜಯ್ ದತ್, ಟೈಗರ್ ಶ್ರಾಫ್, ಜಾಕ್ವೆಲಿನ್ ಫರ್ನಾಂಡೀಸ್, ನಾನಾ ಪಾಟೇಕರ್, ಡಿನೊ ಮರಿಯೋ ಇನ್ನೂ ಹಲವಾರು ಮಂದಿ ಸ್ಟಾರ್ ನಟ-ನಟಿಯರು ಒಟ್ಟಿಗೆ ನಟಿಸಿರುವ ‘ಹೌಸ್​ಫುಲ್ 5’ ಸಿನಿಮಾ ಜೂನ್ 6 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ‘ಹೌಸ್​ಫುಲ್’ ಹಾಸ್ಯ ಸಿನಿಮಾ ಸರಣಿಯ ಐದನೇ ಸಿನಿಮಾ ಇದು. ಸಿನಿಮಾಕ್ಕೆ ಅಕ್ಷಯ್ ಕುಮಾರ್ ಅವರೇ ಬಂಡವಾಳ ಸಹ ತೊಡಗಿಸಿದ್ದರು.

ಸಿನಿಮಾ ಬಿಡುಗಡೆ ಆದ ದಿನ ಬಹುತೇಕ ಮಾಧ್ಯಮಗಳು ಸಿನಿಮಾದ ಬಗ್ಗೆ ನೆಗೆಟಿವ್ ವಿಮರ್ಶೆಗಳನ್ನು ಬರೆದಿದ್ದವು. ಸಿನಿಮಾದ ಮೈಂಡ್​ಲೆಸ್ ಕಾಮಿಡಿ, ಅಶ್ಲೀಲ ಸಂಭಾಷಣೆ, ಅರ್ಥವೇ ಇಲ್ಲದ ಸನ್ನಿವೇಶಗಳು, ಲಾಜಿಕ್ ಇರದ ದೃಶ್ಯಗಳ ಬಗ್ಗೆ ಆಡಿಕೊಂಡಿದ್ದವು. ಆದರೆ ಸಿನಿಮಾ ಹೇಗೆಯೇ ಇರಲಿ ಪ್ರೇಕ್ಷಕನನ್ನು ನಗಿಸಲು ಯಶಸ್ವಿಯಾಗಿದೆ. ಇದೇ ಕಾರಣಕ್ಕೆ ಸಿನಿಮಾ ಕೇವಲ ನಾಲ್ಕು ದಿನದಲ್ಲಿ 100 ಕೋಟಿ ಕಲೆಕ್ಷನ್ ದಾಟಿದೆ.

ಇದನ್ನೂ ಓದಿ:ಒಂದೇ ವರ್ಷ, ಮೂರು ಖ್ಯಾತ ನಿರ್ದೇಶಕರು ಮತ್ತು ನಾಲ್ಕು ಡಿಸಾಸ್ಟರ್ ಸಿನಿಮಾಗಳು

ಸಿನಿಮಾ ಕೇವಲ ನಾಲ್ಕು ದಿನಕ್ಕೆ 140 ಕೋಟಿಗೂ ಹೆಚ್ಚು ಹಣ ಕಲೆಕ್ಷನ್ ಮಾಡಿದೆ. ಆದರೆ ಸಿನಿಮಾಕ್ಕೆ ಹಾಕಲಾಗಿರುವ ಬಜೆಟ್ ಮರಳಿ ಬರಬೇಕೆಂದರೆ ಇದರ ದುಪ್ಪಟ್ಟು ಹಣ ಗಳಿಕೆ ಆಗಬೇಕಿದೆ. ಸಿನಿಮಾದ ನಿರ್ಮಾಪರಾದ ಸಾಜಿದ್ ನಾಡಿಯಾವಾಲ ಮತ್ತು ಅಕ್ಷಯ್ ಕುಮಾರ್ ಅವರುಗಳು ಈ ಸಿನಿಮಾಕ್ಕೆ 225 ಕೋಟಿ ಬಜೆಟ್ ಹಾಕಿದ್ದಾರಂತೆ. ಸಿನಿಮಾದಲ್ಲಿ ಹಲವಾರು ಮಂದಿ ಸ್ಟಾರ್​ಗಳಿದ್ದು, ಎಲ್ಲರಿಗೂ ಭರ್ಜರಿ ಸಂಭಾವನೆ, ಅದ್ಧೂರಿ ಚಿತ್ರೀಕರಣವನ್ನು ಮಾಡಲಾಗಿದೆ.

ಒಂದು ದೊಡ್ಡ ಕ್ರೂಸ್ ಶಿಪ್​​ನಲ್ಲಿ ನಡೆಯುವ ಪಾರ್ಟಿ, ಆ ಕ್ರೂಸ್ ಶಿಫ್​​ನಲ್ಲಿ ನಡೆಯುವ ಭಾರಿ ಶ್ರೀಮಂತನ ಕೊಲೆ ಹಾಗೂ ಆ ಕೊಲೆ ಮಾಡಿದ ವ್ಯಕ್ತಿಗಾಗಿ ಹುಡುಕಾಟ ಇದು ‘ಹೌಸ್​ಫುಲ್ 5’ ಸಿನಿಮಾದ ಕತೆ. ವಿಶೇಷವೆಂದರೆ ಈ ಸಿನಿಮಾಕ್ಕೆ ಎರಡು ಕ್ಲೈಮ್ಯಾಕ್ಸ್ ನೀಡಲಾಗಿದೆ. ಪ್ರೇಕ್ಷಕರು ಯಾವ ಕ್ಲೈಮ್ಯಾಕ್ಸ್ ಅನ್ನು ಬೇಕಾದರೂ ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು