AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲಿ ರವೀನಾ ಟಂಡನ್​ಗೆ ಥಳಿಸಿದ ಜನರು; ಗಲಾಟೆ ಶುರು ಆಗಿದ್ದು ಹೇಗೆ?

‘ದಯವಿಟ್ಟು ನನಗೆ ಹೊಡೆಯಬೇಡಿ. ನನ್ನನ್ನು ತಳ್ಳಬೇಡಿ..’ ಎಂದು ಖ್ಯಾತ ನಟಿ ರವೀನಾ ಟಂಡನ್​ ಅವರು ಬೇಡಿಕೊಂಡಿದ್ದಾರೆ. ತುಂಬ ಗಾಬರಿಯಲ್ಲಿದ್ದ ಅವರನ್ನು ಜನರು ತಳ್ಳಾಡಿದ್ದಾರೆ. ಕೂದಲು ಹಿಡಿದು ಎಳೆದಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ‘ರವೀನಾ ಟಂಡನ್​ ಅವರೇ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಮೊಹಮ್ಮದ್​ ಎಂಬ ವ್ಯಕ್ತಿಯು ವೈರಲ್​ ವಿಡಿಯೋದಲ್ಲಿ ಆರೋಪ ಮಾಡಿದ್ದಾರೆ.

ನಡುರಸ್ತೆಯಲ್ಲಿ ರವೀನಾ ಟಂಡನ್​ಗೆ ಥಳಿಸಿದ ಜನರು; ಗಲಾಟೆ ಶುರು ಆಗಿದ್ದು ಹೇಗೆ?
ರವೀನಾ ಟಂಡನ್​
ಮದನ್​ ಕುಮಾರ್​
|

Updated on: Jun 02, 2024 | 4:23 PM

Share

ಬಾಲಿವುಡ್​ನ ಖ್ಯಾತ ನಟಿ ರವೀನಾ ಟಂಡನ್​ (Raveena Tandon) ಅವರು ಶನಿವಾರ ರಾತ್ರಿ ಹಲ್ಲೆಗೆ ಒಳಗಾಗಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅವರ ಮೇಲೆ ಕೆಲವರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ರವೀನಾ ಟಂಡನ್​ ಅವರ ಕಾರು ಚಾಲಕನ ಮೇಲೂ ಜನರು ಹಲ್ಲೆ (Assault) ಮಾಡಿದ್ದಾರೆ. ಈ ಗಲಾಟೆಯಲ್ಲಿ ರವೀನಾ ಟಂಡನ್​ ಕೂಡ ಮಹಿಳೆಯರ ಮೇಲೆ ಕೈ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಘಟನೆಯ ವಿಡಿಯೋ (Raveena Tandon Viral Video) ವೈರಲ್​ ಆಗಿದೆ. ರವೀನಾ ಟಂಡನ್​ ಅವರ ಕಾರು ಚಾಲಕ ರಿವರ್ಸ್​ ತೆಗೆಯುವ ವೇಳೆ ಪಾದಚಾರಿಗಳ ಜೊತೆ ಕಿರಿಕ್​ ಆಗಿದೆ ಎನ್ನಲಾಗಿದೆ.

‘ದಯವಿಟ್ಟು ನನಗೆ ಹೊಡೆಯಬೇಡಿ. ನನ್ನನ್ನು ತಳ್ಳಬೇಡಿ..’ ಎಂದು ರವೀನಾ ಟಂಡನ್​ ಅವರು ಬೇಡಿಕೊಂಡಿದ್ದಾರೆ. ತುಂಬ ಗಾಬರಿಯಲ್ಲಿದ್ದ ಅವರನ್ನು ಜನರು ತಳ್ಳಾಡಿದ್ದಾರೆ. ಕೂದಲು ಹಿಡಿದು ಎಳೆದಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಘಟನೆಗೆ ಸಂಬಂಧಿಸಿದಂತೆ ಇನ್ನೂ ದೂರು ದಾಖಲಾಗಿಲ್ಲ ಎಂದು ವರದಿ ಆಗಿದೆ. ಈ ಬಗ್ಗೆ ಸರಿಯಾದ ಚಿತ್ರಣ ಸಿಗುವುದು ಬಾಕಿಯಿದೆ. ನಟಿಯ ಕಡೆಯಿಂದ ಸ್ಪಷ್ಟನೆ ಹೊರ ಬರಬೇಕಿದೆ.

ಇದನ್ನೂ ಓದಿ: ಮಹಿಳೆ ಮೇಲೆ ರವೀನಾ ಟಂಡನ್ ಹಲ್ಲೆ ಆರೋಪ: ವಿಡಿಯೋ ವೈರಲ್

ವೈರಲ್​ ವಿಡಿಯೋದಲ್ಲಿ ಮೊಹಮ್ಮದ್ ಎಂಬ ವ್ಯಕ್ತಿಯು ರವೀನಾ ಟಂಡನ್​ ಮೇಲೆ ಆರೋಪ ಹೊರಿಸಿದ್ದಾರೆ. ‘ನನ್ನ ಹೆಸರು ಮೊಹಮ್ಮದ್​. ನಾನು ಬಾಂದ್ರಾ ನಿವಾಸಿ. ನನ್ನ ತಾಯಿ, ಸಹೋದರಿ ಮುಂತಾದವರ ಜೊತೆ ನಾವು ಹೊರಗೆ ಹೋಗಿದ್ದೆವು. ಅಲ್ಲಿಂದ ವಾಪಸ್​ ಬರುವಾಗ, ರವೀನಾ ಟಂಡನ್​ ಮನೆಯ ಬಳಿ ನನ್ನ ತಾಯಿ ಮೇಲೆ ಅವರ ಚಾಲಕ ಕಾರು ಹತ್ತಿಸಿದ್ದಾನೆ. ಅದನ್ನು ಪ್ರಶ್ನಿಸಿದ್ದಕ್ಕೆ ಆತ ನಮ್ಮ ಮೇಲೆ ಹಲ್ಲೆ ಮಾಡಿದ’ ಎಂದು ಮೊಹಮ್ಮದ್​ ಹೇಳಿದ್ದಾರೆ.

ಹಲ್ಲೆಯ ವೈರಲ್​ ವಿಡಿಯೋ:

‘ರವೀನಾ ಟಂಡನ್​ ಅವರ ಕಾರು ಚಾಲಕ ನನ್ನ ತಾಯಿಗೆ ಹೊಡೆದಿದ್ದಾನೆ. ಅದಾದ ಬಳಿಕ ಕುಡಿದ ನಶೆಯಲ್ಲಿದ್ದ ರವೀನಾ ಟಂಡನ್​ ಅವರು ಕೂಡ ಹೊರಬಂದು ನನ್ನ ತಾಯಿ ಮೇಲೆ ಹಲ್ಲೆ ಮಾಡಿದರು. ತಾಯಿ ತಲೆಗೆ ಪೆಟ್ಟಾಗಿದೆ. ನಾವು ಇಲ್ಲಿ ಪೊಲೀಸ್​ ಠಾಣೆ ಎದುರು ನಾಲ್ಕು ಗಂಟೆಯಿಂದ ನಿಂತಿದ್ದೇವೆ. ನನ್ನನ್ನು ಯಾರೂ ಕೇಳುತ್ತಿಲ್ಲ. ನಮ್ಮ ದೂರನ್ನು ಯಾರೂ ಪಡೆಯುತ್ತಿಲ್ಲ. ರಾಜಿ ಮಾಡಿಕೊಳ್ಳಿ ಎಂದು ಹೇಳುತ್ತಿದ್ದಾರೆ. ನಾವು ಯಾಕೆ ರಾಜಿ ಮಾಡಿಕೊಳ್ಳಬೇಕು? ನಮಗೆ ನ್ಯಾಯ ಬೇಕು’ ಎಂದು ವೈರಲ್​ ವಿಡಿಯೋದಲ್ಲಿ ಮೊಹಮ್ಮದ್​ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್