AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲಿ ರವೀನಾ ಟಂಡನ್​ಗೆ ಥಳಿಸಿದ ಜನರು; ಗಲಾಟೆ ಶುರು ಆಗಿದ್ದು ಹೇಗೆ?

‘ದಯವಿಟ್ಟು ನನಗೆ ಹೊಡೆಯಬೇಡಿ. ನನ್ನನ್ನು ತಳ್ಳಬೇಡಿ..’ ಎಂದು ಖ್ಯಾತ ನಟಿ ರವೀನಾ ಟಂಡನ್​ ಅವರು ಬೇಡಿಕೊಂಡಿದ್ದಾರೆ. ತುಂಬ ಗಾಬರಿಯಲ್ಲಿದ್ದ ಅವರನ್ನು ಜನರು ತಳ್ಳಾಡಿದ್ದಾರೆ. ಕೂದಲು ಹಿಡಿದು ಎಳೆದಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ‘ರವೀನಾ ಟಂಡನ್​ ಅವರೇ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಮೊಹಮ್ಮದ್​ ಎಂಬ ವ್ಯಕ್ತಿಯು ವೈರಲ್​ ವಿಡಿಯೋದಲ್ಲಿ ಆರೋಪ ಮಾಡಿದ್ದಾರೆ.

ನಡುರಸ್ತೆಯಲ್ಲಿ ರವೀನಾ ಟಂಡನ್​ಗೆ ಥಳಿಸಿದ ಜನರು; ಗಲಾಟೆ ಶುರು ಆಗಿದ್ದು ಹೇಗೆ?
ರವೀನಾ ಟಂಡನ್​
ಮದನ್​ ಕುಮಾರ್​
|

Updated on: Jun 02, 2024 | 4:23 PM

Share

ಬಾಲಿವುಡ್​ನ ಖ್ಯಾತ ನಟಿ ರವೀನಾ ಟಂಡನ್​ (Raveena Tandon) ಅವರು ಶನಿವಾರ ರಾತ್ರಿ ಹಲ್ಲೆಗೆ ಒಳಗಾಗಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅವರ ಮೇಲೆ ಕೆಲವರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ರವೀನಾ ಟಂಡನ್​ ಅವರ ಕಾರು ಚಾಲಕನ ಮೇಲೂ ಜನರು ಹಲ್ಲೆ (Assault) ಮಾಡಿದ್ದಾರೆ. ಈ ಗಲಾಟೆಯಲ್ಲಿ ರವೀನಾ ಟಂಡನ್​ ಕೂಡ ಮಹಿಳೆಯರ ಮೇಲೆ ಕೈ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಘಟನೆಯ ವಿಡಿಯೋ (Raveena Tandon Viral Video) ವೈರಲ್​ ಆಗಿದೆ. ರವೀನಾ ಟಂಡನ್​ ಅವರ ಕಾರು ಚಾಲಕ ರಿವರ್ಸ್​ ತೆಗೆಯುವ ವೇಳೆ ಪಾದಚಾರಿಗಳ ಜೊತೆ ಕಿರಿಕ್​ ಆಗಿದೆ ಎನ್ನಲಾಗಿದೆ.

‘ದಯವಿಟ್ಟು ನನಗೆ ಹೊಡೆಯಬೇಡಿ. ನನ್ನನ್ನು ತಳ್ಳಬೇಡಿ..’ ಎಂದು ರವೀನಾ ಟಂಡನ್​ ಅವರು ಬೇಡಿಕೊಂಡಿದ್ದಾರೆ. ತುಂಬ ಗಾಬರಿಯಲ್ಲಿದ್ದ ಅವರನ್ನು ಜನರು ತಳ್ಳಾಡಿದ್ದಾರೆ. ಕೂದಲು ಹಿಡಿದು ಎಳೆದಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಘಟನೆಗೆ ಸಂಬಂಧಿಸಿದಂತೆ ಇನ್ನೂ ದೂರು ದಾಖಲಾಗಿಲ್ಲ ಎಂದು ವರದಿ ಆಗಿದೆ. ಈ ಬಗ್ಗೆ ಸರಿಯಾದ ಚಿತ್ರಣ ಸಿಗುವುದು ಬಾಕಿಯಿದೆ. ನಟಿಯ ಕಡೆಯಿಂದ ಸ್ಪಷ್ಟನೆ ಹೊರ ಬರಬೇಕಿದೆ.

ಇದನ್ನೂ ಓದಿ: ಮಹಿಳೆ ಮೇಲೆ ರವೀನಾ ಟಂಡನ್ ಹಲ್ಲೆ ಆರೋಪ: ವಿಡಿಯೋ ವೈರಲ್

ವೈರಲ್​ ವಿಡಿಯೋದಲ್ಲಿ ಮೊಹಮ್ಮದ್ ಎಂಬ ವ್ಯಕ್ತಿಯು ರವೀನಾ ಟಂಡನ್​ ಮೇಲೆ ಆರೋಪ ಹೊರಿಸಿದ್ದಾರೆ. ‘ನನ್ನ ಹೆಸರು ಮೊಹಮ್ಮದ್​. ನಾನು ಬಾಂದ್ರಾ ನಿವಾಸಿ. ನನ್ನ ತಾಯಿ, ಸಹೋದರಿ ಮುಂತಾದವರ ಜೊತೆ ನಾವು ಹೊರಗೆ ಹೋಗಿದ್ದೆವು. ಅಲ್ಲಿಂದ ವಾಪಸ್​ ಬರುವಾಗ, ರವೀನಾ ಟಂಡನ್​ ಮನೆಯ ಬಳಿ ನನ್ನ ತಾಯಿ ಮೇಲೆ ಅವರ ಚಾಲಕ ಕಾರು ಹತ್ತಿಸಿದ್ದಾನೆ. ಅದನ್ನು ಪ್ರಶ್ನಿಸಿದ್ದಕ್ಕೆ ಆತ ನಮ್ಮ ಮೇಲೆ ಹಲ್ಲೆ ಮಾಡಿದ’ ಎಂದು ಮೊಹಮ್ಮದ್​ ಹೇಳಿದ್ದಾರೆ.

ಹಲ್ಲೆಯ ವೈರಲ್​ ವಿಡಿಯೋ:

‘ರವೀನಾ ಟಂಡನ್​ ಅವರ ಕಾರು ಚಾಲಕ ನನ್ನ ತಾಯಿಗೆ ಹೊಡೆದಿದ್ದಾನೆ. ಅದಾದ ಬಳಿಕ ಕುಡಿದ ನಶೆಯಲ್ಲಿದ್ದ ರವೀನಾ ಟಂಡನ್​ ಅವರು ಕೂಡ ಹೊರಬಂದು ನನ್ನ ತಾಯಿ ಮೇಲೆ ಹಲ್ಲೆ ಮಾಡಿದರು. ತಾಯಿ ತಲೆಗೆ ಪೆಟ್ಟಾಗಿದೆ. ನಾವು ಇಲ್ಲಿ ಪೊಲೀಸ್​ ಠಾಣೆ ಎದುರು ನಾಲ್ಕು ಗಂಟೆಯಿಂದ ನಿಂತಿದ್ದೇವೆ. ನನ್ನನ್ನು ಯಾರೂ ಕೇಳುತ್ತಿಲ್ಲ. ನಮ್ಮ ದೂರನ್ನು ಯಾರೂ ಪಡೆಯುತ್ತಿಲ್ಲ. ರಾಜಿ ಮಾಡಿಕೊಳ್ಳಿ ಎಂದು ಹೇಳುತ್ತಿದ್ದಾರೆ. ನಾವು ಯಾಕೆ ರಾಜಿ ಮಾಡಿಕೊಳ್ಳಬೇಕು? ನಮಗೆ ನ್ಯಾಯ ಬೇಕು’ ಎಂದು ವೈರಲ್​ ವಿಡಿಯೋದಲ್ಲಿ ಮೊಹಮ್ಮದ್​ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ