ಕಂಗನಾ ರಣಾವತ್​ ಯಾಕಿನ್ನೂ ಮದುವೆ ಆಗಿಲ್ಲ? ಅದಕ್ಕೆ ಕಾರಣ ಆಗಿದ್ದು ಒಂದೇ ಒಂದು ಗಾಸಿಪ್​; ಏನದು?

Kangana Ranaut: ಕಂಗನಾ ರಣಾವತ್​ ಅವರದ್ದು ಕೊಂಚ ಸಿಡುಕಿನ ವ್ಯಕ್ತಿತ್ವ ಎಂಬುದು ಗೊತ್ತಿರುವ ವಿಚಾರ. ಆದರೆ ಅದಕ್ಕೂ ಮಿಗಿಲಾಗಿ ಕೆಲವು ಗಾಸಿಪ್​ಗಳು ಅವರ ಬದುಕಿನ ಬಗ್ಗೆ ಹಬ್ಬಿವೆ.

ಕಂಗನಾ ರಣಾವತ್​ ಯಾಕಿನ್ನೂ ಮದುವೆ ಆಗಿಲ್ಲ? ಅದಕ್ಕೆ ಕಾರಣ ಆಗಿದ್ದು ಒಂದೇ ಒಂದು ಗಾಸಿಪ್​; ಏನದು?
ಕಂಗನಾ ರಣಾವತ್
Follow us
| Updated By: ಮದನ್​ ಕುಮಾರ್​

Updated on:May 12, 2022 | 8:14 AM

ಖ್ಯಾತ ನಟಿ ಕಂಗನಾ ರಣಾವತ್ (Kangana Ranaut)​ ಅವರಿಗೆ ಈಗ 35 ವರ್ಷ ವಯಸ್ಸು. ಬಾಲಿವುಡ್​ನಲ್ಲಿ ಅವರು ಯಶಸ್ಸು ಕಂಡಿದ್ದಾರೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಇರುವ ಅವರಿಗೆ ಅಲ್ಲಿನ ಆಳ-ಅಗಲ ಚೆನ್ನಾಗಿ ತಿಳಿದಿದೆ. ಸೂಪರ್​ ಹಿಟ್​ ಸಿನಿಮಾಗಳನ್ನು ಅವರು ನೀಡಿದ್ದಾರೆ. ಅನೇಕ ಏಳು-ಬೀಳುಗಳನ್ನು ಕೂಡ ಕಂಡಿದ್ದಾರೆ. ಅವರಂತೆಯೇ ಹಲವು ವರ್ಷಗಳಿಂದ ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡಿರುವ ಬೇರೆ ನಟಿಯರು ಈಗಾಗಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಕಂಗನಾ ರಣಾವತ್​ ಅವರು ಇನ್ನೂ ಮದುವೆ (Kangana Ranaut Marriage) ಬಗ್ಗೆ ಆಲೋಚನೆ ಮಾಡಿಲ್ಲ. ಅವರು ಯಾಕೆ ಇನ್ನೂ ವಿವಾಹ ಆಗಿಲ್ಲ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಕಂಗನಾ ರಣಾವತ್​ ಅವರು ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಮಾತನಾಡಿದ್ದಾರೆ. ಅವರು ನಟಿಸಿರುವ ‘ಧಾಕಡ್​’ ಸಿನಿಮಾ (Dhaakad Movie) ಬಿಡುಗಡೆಗೆ ಸಜ್ಜಾಗಿದೆ. ಆ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಅವರು ಅನೇಕ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರ ಖಾಸಗಿ ಬದುಕಿನ ಬಗ್ಗೆಯೂ ಕೆಲವು ಪ್ರಶ್ನೆಗಳು ಎದುರಾಗಿವೆ. ಅವುಗಳಿಗೆ ಕಂಗನಾ ರಣಾವತ್​ ಉತ್ತರಿಸಿದ್ದಾರೆ.

ಮೇ 20ರಂದು ‘ಧಾಕಡ್​’ ಸಿನಿಮಾ ರಿಲೀಸ್​ ಆಗಲಿದೆ. ಈಗಾಗಲೇ ಟ್ರೇಲರ್​ ಮೂಲಕ ಈ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಏಜೆಂಟ್​ ಅಗ್ನಿ ಎಂಬ ಸ್ಪೈ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳಲ್ಲೂ ಅವರು ನಟಿಸಿದ್ದಾರೆ. ರಿಯಲ್​ ಲೈಫ್​ನಲ್ಲಿಯೂ ಕಂಗನಾ ಅವರದ್ದು ಕೊಂಚ ಸಿಡುಕಿನ ವ್ಯಕ್ತಿತ್ವ ಎಂಬುದು ಗೊತ್ತಿರುವ ವಿಚಾರ. ಆದರೆ ಅದಕ್ಕೂ ಮಿಗಿಲಾಗಿ ಕೆಲವು ಗಾಸಿಪ್​ಗಳು ಕಂಗನಾ ಬದುಕಿನ ಬಗ್ಗೆ ಹಬ್ಬಿವೆ. ಅದೇ ಕಾರಣದಿಂದಾಗಿ ತಾವು ಮದುವೆ ಆಗಿಲ್ಲ ಎಂದು ಅವರು ಹೇಳಿದ್ದಾರೆ.

‘ಈ ಸಿನಿಮಾದ ಪಾತ್ರದ ರೀತಿಯೇ ನಿಮ್ಮ ರಿಯಲ್​ ಲೈಫ್​ ವ್ಯಕ್ತಿತ್ವ ಕೂಡ ಇದೆಯೇ’ ಎಂದು ಕೇಳಿದ ಪ್ರಶ್ನೆಗೆ ಕಂಗನಾ ಈ ರೀತಿ ಉತ್ತರಿಸಿದ್ದಾರೆ. ‘ಹಾಗೆಲ್ಲ ಏನಿಲ್ಲ. ನಾನು ನಿಜ ಜೀವನದಲ್ಲಿ ಯಾರಿಗೆ ಹೊಡೆಯುತ್ತೇನೆ? ನಿಮ್ಮಂಥವರು ಈ ರೀತಿ ಗಾಸಿಪ್​ ಹಬ್ಬಿಸಿದ್ದಕ್ಕಾಗಿಯೇ ನನಗೆ ಇನ್ನೂ ಮದುವೆ ಆಗಿಲ್ಲ. ನಾನು ಹುಡುಗರಿಗೆ ಹೊಡೆಯುತ್ತೇನೆ ಎಂದೆಲ್ಲ ಗಾಸಿಪ್​ ಹಬ್ಬಿಸಲಾಗಿದೆ’ ಎಂದು ಕಂಗನಾ ಹೇಳಿದ್ದಾರೆ.

ಇದನ್ನೂ ಓದಿ
Image
Kangana Ranaut: ಯೋಗಿ ಆದಿತ್ಯನಾಥ್​ ಭೇಟಿ ಮಾಡಿದ ನಟಿ ಕಂಗನಾ ರಣಾವತ್​; ಈ ಮೀಟಿಂಗ್​ ಉದ್ದೇಶ ಏನು?
Image
‘ಅಜಯ್​ ದೇವಗನ್​ ಹೇಳಿದ್ರಲ್ಲಿ ತಪ್ಪಿಲ್ಲ, ಆದ್ರೆ ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ’: ಕಂಗನಾ ಹೊಸ ಟ್ವಿಸ್ಟ್​
Image
‘ಆ ಹುಡುಗ ಕೆಟ್ಟದಾಗಿ ಮುಟ್ಟುತ್ತಿದ್ದ, ನಮ್ಮ ಬಟ್ಟೆ ಕಳಚುತ್ತಿದ್ದ’; ಭಯಾನಕ ಅನುಭವ ಬಿಚ್ಚಿಟ್ಟ ಕಂಗನಾ ರಣಾವತ್
Image
ಬೋಲ್ಡ್ ಲುಕ್​ನಲ್ಲಿ ಮಿಂಚುತ್ತಿದ್ದಾರೆ ಕಂಗನಾ; ಇಲ್ಲಿದೆ ಅವರ ಹಾಟ್​ ಫೋಟೋಗಳು

‘ಧಾಕಡ್​’ ಸಿನಿಮಾದಲ್ಲಿ ಅರ್ಜುನ್​ ರಾಮ್​ಪಾಲ್​ ಕೂಡ ನಟಿಸಿದ್ದಾರೆ. ಅವರು ಕಂಗನಾ ಬಗ್ಗೆ ಮಾತನಾಡಿದ್ದಾರೆ. ‘ರಿಯಲ್​ ಲೈಫ್​ನಲ್ಲಿ ಕಂಗನಾ ಆ ರೀತಿ ಇಲ್ಲ. ಅವರು ಅತ್ಯುತ್ತಮ ನಟಿ. ಎಲ್ಲವನ್ನೂ ಮಾಡುವುದು ಪಾತ್ರಕ್ಕಾಗಿ ಮಾತ್ರ. ಅವರು ತುಂಬ ಒಳ್ಳೆಯ ವ್ಯಕ್ತಿ. ದೇವರ ಬಗ್ಗೆ ಭಯ-ಭಕ್ತಿ ಇಟ್ಟುಕೊಂಡಿದ್ದಾರೆ. ಪ್ರತಿ ದಿನ ಪೂಜೆ, ಯೋಗ ಮಾಡುತ್ತಾರೆ. ಅವರದ್ದು ತುಂಬ ನಾರ್ಮಲ್​ ವ್ಯಕ್ತಿತ್ವ’ ಎಂದು ಅರ್ಜುನ್​ ರಾಮ್​ಪಾಲ್​ ಹೇಳಿದ್ದಾರೆ.

ನಟಿಯಾಗಿ ಮಾತ್ರವಲ್ಲದೇ ನಿರೂಪಕಿ ಆಗಿಯೂ ಕಂಗನಾ ಯಶಸ್ವಿ ಆಗಿದ್ದಾರೆ. ಅವರು ನಡೆಸಿಕೊಡುತ್ತಿದ್ದ ‘ಲಾಕಪ್​’ ಶೋ ಯಶಸ್ವಿಯಾಗಿ ಮುಕ್ತಾಯ ಆಗಿದೆ. ಈ ಮೂಲಕ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ‘ಧಾಕಡ್’ ಸಿನಿಮಾ ಮೇಲೆ ಅವರ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳ ಎದುರು ಅನೇಕ ಬಾಲಿವುಡ್​ ಸಿನಿಮಾಗಳು ನೆಲಕಚ್ಚಿವೆ. ಈಗ ‘ಧಾಕಡ್​’ ಯಾವ ರೀತಿ ಕಲೆಕ್ಷನ್​ ಮಾಡಲಿದೆ ಎಂಬ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:14 am, Thu, 12 May 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ