AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಯೋಗಿ ಆದಿತ್ಯನಾಥ್​ ಭೇಟಿ ಮಾಡಿದ ನಟಿ ಕಂಗನಾ ರಣಾವತ್​; ಈ ಮೀಟಿಂಗ್​ ಉದ್ದೇಶ ಏನು?

Kangana Ranaut Yogi Adityanath: ಹತ್ತು ಹಲವು ಕಾರಣಗಳಿಂದಾಗಿ ಕಂಗನಾ ರಣಾವತ್​ ಅವರು ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಯೋಗಿ ಆದಿತ್ಯನಾಥ್ ಅವರನ್ನು ಕಂಗನಾ ಭೇಟಿ ಮಾಡಿದ ಫೋಟೋ ವೈರಲ್​ ಆಗಿದೆ.

Kangana Ranaut: ಯೋಗಿ ಆದಿತ್ಯನಾಥ್​ ಭೇಟಿ ಮಾಡಿದ ನಟಿ ಕಂಗನಾ ರಣಾವತ್​; ಈ ಮೀಟಿಂಗ್​ ಉದ್ದೇಶ ಏನು?
ಕಂಗನಾ ರಣಾವತ್, ಯೋಗಿ ಆದಿತ್ಯನಾಥ್
TV9 Web
| Edited By: |

Updated on: May 02, 2022 | 8:31 AM

Share

ಒಂದಲ್ಲಾ ಒಂದು ದಿನ ಕಂಗನಾ ರಣಾವತ್​ (Kangana Ranaut) ಅವರು ರಾಜಕೀಯಕ್ಕೆ ನೇರವಾಗಿ ಎಂಟ್ರಿ ನೀಡುತ್ತಾರೆ ಎಂಬುದು ಅನೇಕರ ಊಹೆ. ಅದಕ್ಕೆ ಪೂರಕ ಆಗುವಂತಹ ಘಟನೆಗಳು ಆಗಾಗ ನಡೆಯುತ್ತಲೇ ಇವೆ. ಬಿಜೆಪಿ ಪಕ್ಷದ ಜೊತೆ ಅವರು ಗುರುತಿಸಿಕೊಂಡಿದ್ದಾರೆ. ನರೇಂದ್ರ ಮೋದಿ ಸರ್ಕಾರವನ್ನು ಕಂಗನಾ ರಣಾವತ್​ ಆಗಾಗ ಕೊಂಡಾಡುತ್ತಾರೆ. ಅದೇ ರೀತಿ ಈಗ ಅವರು ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ. ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಈ ಸಂದರ್ಭದ ಫೋಟೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಯೋಗಿ ಆದಿತ್ಯನಾಥ್​ (Yogi Adityanath) ಅವರಿಗೆ ಕಂಗನಾ ಹೂಗುಚ್ಛ ನೀಡಿದ್ದಾರೆ. ಬದಲಿಗೆ ಮುಖ್ಯಮಂತ್ರಿ ಕಡೆಯಿಂದ ಕಂಗನಾಗೆ ನೆನಪಿನ ಕಾಣಿಕೆ ಸಿಕ್ಕಿದೆ. ಈ ಫೋಟೋಗಳು ಕಂಗನಾ ಮತ್ತು ಯೋಗಿ ಆದಿತ್ಯನಾಥ್​ ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗುತ್ತಿದೆ. ಅಷ್ಟಕ್ಕೂ ಕಂಗನಾ ಅವರ ಈ ಭೇಟಿಗೆ ಕಾರಣ ಏನು ಎಂದು ಜನರು ಊಹಿಸುತ್ತಿದ್ದಾರೆ. ಅವರು ನಟಿಸಿರುವ ಹೊಸ ಸಿನಿಮಾ ‘ಧಾಕಡ್​’  (Dhaakad Movie) ಬಿಡುಗಡೆಗೆ ಸಜ್ಜಾಗಿದೆ. ಅದರ ಪ್ರಚಾರ ಕಾರ್ಯದಲ್ಲೂ ಕಂಗನಾ ರಣಾವತ್​ ಬ್ಯುಸಿ ಆಗಿದ್ದಾರೆ.

ಉತ್ತರ ಪ್ರದೇಶ ಸರ್ಕಾರದ ಜೊತೆ ಕಂಗನಾ ರಣಾವತ್​ ಅವರು ಕೈ ಜೋಡಿಸಿದ್ದಾರೆ. ಆ ರಾಜ್ಯದ ‘ಒಂದು ಜಿಲ್ಲೆ ಒಂದು ಉತ್ಪನ್ನ’ ಎಂಬ ಯೋಜನೆಗೆ ಕಂಗನಾ ಪ್ರಚಾರ ರಾಯಭಾರಿ. ಈ ವಿಷಯವನ್ನು ಕಳೆದ ವರ್ಷ ಅಕ್ಟೋಬರ್​ನಲ್ಲಿ ಘೋಷಿಸಲಾಯಿತು. ಈಗ ಅದೇ ಕಾರಣಕ್ಕಾಗಿ ಕಂಗನಾ ಅವರು ಯೋಗಿ ಆದಿತ್ಯನಾಥ್​ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಕಂಗನಾಗೆ ಯೋಗಿ ಆದಿತ್ಯನಾಥ್​ ನೀಡಿರುವ ಸ್ಮರಣಿಕೆಯಲ್ಲಿ ‘ಒಂದು ಜಿಲ್ಲೆ ಒಂದು ಉತ್ಪನ್ನ’ ಯೋಜನೆಯ ಲೋಗೋ ಕಾಣಿಸಿದೆ. ಹಾಗಾಗಿ ಅವರ ಭೇಟಿಯ ಉದ್ದೇಶ ಇದು ಎಂದು ಅಭಿಮಾನಿಗಳು ಊಹಿಸಿದ್ದಾರೆ.

ಹತ್ತು ಹಲವು ಕಾರಣಗಳಿಂದಾಗಿ ಕಂಗನಾ ರಣಾವತ್​ ಅವರು ಸುದ್ದಿ ಆಗುತ್ತಲೇ ಇರುತ್ತಾರೆ. ಅವರು ‘ಧಾಕಡ್​’ ಸಿನಿಮಾ ಮೇ 20ರಂದು ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಅವರು ಆ್ಯಕ್ಷನ್​ ಅವತಾರ ಎತ್ತಿದ್ದಾರೆ. ‘ಧಾಕಡ್​’ ಸಿನಿಮಾದ ಟ್ರೇಲರ್​ ಲಾಂಚ್​ ಇತ್ತೀಚೆಗೆ ನಡೆಯಿತು. ಆಗ ಅವರಿಗೆ ರಾಷ್ಟ್ರ ಭಾಷೆ ವಿವಾದದ ಬಗ್ಗೆ ಪ್ರಶ್ನೆ ಕೇಳಲಾಯಿತು. ಆಗ ಅವರು ಅಜಯ್​ ದೇವಗನ್​ ಪರ ಬ್ಯಾಟ್​ ಬೀಸಿದರು.

ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ ಎಂದ ಕಂಗನಾ:

‘ಬೇರೆ ಬೇರೆ ದೇಶಗಳಿಗೆ ಹೋಗಿ ನೋಡಿ. ಜರ್ಮನಿ, ಫ್ರಾನ್ಸ್​, ಸ್ಪೇನ್​ ಮುಂತಾದ ಕಡೆಗಳಲ್ಲಿ ಅವರ ಭಾಷೆಯ ಬಗ್ಗೆ ಅವರಿಗೆ ಸಖತ್​ ಹೆಮ್ಮೆ ಇದೆ. ಬ್ರಿಟಿಷ್​ ಆಡಳಿತದ ಪ್ರಭಾವ ಎಷ್ಟು ಗಾಢವಾಗಿದೆ ಎಂಬುದು ಮುಖ್ಯವಲ್ಲ. ಅದೃಷ್ಟವೋ ದುರದೃಷ್ಟವೋ ಇಂಗ್ಲಿಷ್​ ಸಂಪರ್ಕ ಭಾಷೆ ಆಗಿದೆ. ದೇಶದ ಒಳಗೆ ಕೂಡ ನಾವು ಸಂವಹನಕ್ಕೆ ಇಂಗ್ಲಿಷ್​ ಬಳಸುತ್ತೇವೆ. ಅದೇ ನಮಗೆ ಸಂಪರ್ಕ​ ಭಾಷೆ ಆಗಬೇಕಾ? ಹಿಂದಿ, ತಮಿಳು ಅಥವಾ ಸಂಸ್ಕೃತ ಆಗಬಹುದಾ? ಈ ಬಗ್ಗೆ ನಾವು ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಕಂಗನಾ ರಣಾವತ್​ ಹೇಳಿದರು.

‘ನಮ್ಮ ಸಂವಿಧಾನದ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆ. ಅದನ್ನೇ ಅಜಯ್​ ದೇವಗನ್​ ಅವರು ಹೇಳಿದ್ದರಲ್ಲಿ ತಪ್ಪೇನೂ ಇಲ್ಲ. ಆದರೆ ಸಂಸ್ಕೃತ ನಮ್ಮ ರಾಷ್ಟ್ರ ಭಾಷೆ ಆಗಬೇಕು ಅಂತ ನಾನು ಹೇಳುತ್ತೇನೆ. ಹಿಂದಿ, ಜರ್ಮನಿ, ಇಂಗ್ಲಿಷ್​, ಫ್ರೆಂಚ್​ ಮುಂತಾದ ಭಾಷೆಗಳು ಬಂದಿರುವುದೇ ಸಂಸ್ಕೃತದಿಂದ. ಹಾಗಾಗಿ ನಾವೇಕೆ ಸಂಸ್ಕೃತವನ್ನು ರಾಷ್ಟ್ರೀಯ ಭಾಷೆಯಾಗಿ ಇಟ್ಟುಕೊಳ್ಳಬಾರದು? ಶಾಲೆಗಳಲ್ಲಿ ಇದನ್ನು ಯಾಕೆ ಕಡ್ಡಾಯವಾಗಿ ಮಾಡಬಾರದು? ನನಗೆ ಗೊತ್ತಿಲ್ಲ’ ಎಂದು ಕಂಗನಾ ರಣಾವತ್​ ಅನಿಸಿಕೆ ಹಂಚಿಕೊಂಡರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

ಡೈರೆಕ್ಟರ್ ಜತೆ ಖ್ಯಾತ ನಟಿಯ ಸೀಕ್ರೆಟ್​ ಅಫೇರ್ ಬಯಲು​; ಪ್ರೆಗ್ನೆನ್ಸಿ ವಿಷಯ ಕೇಳಿ ಕಣ್ಣೀರು ಹಾಕಿದ ಕಂಗನಾ

ಆಸ್ಕರ್​ ಮತ್ತು ಗ್ರ್ಯಾಮಿ ಪ್ರಶಸ್ತಿ ಬಹಿಷ್ಕಾರ ಮಾಡುವಂತೆ ಕಂಗನಾ ಒತ್ತಾಯ; ಗಂಭೀರ ಆರೋಪ ಮಾಡಿದ ನಟಿ

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​