Dhaakad Collection: ‘ಧಾಕಡ್’​ ಡಿಸಾಸ್ಟರ್; ಕಂಗನಾ ನಂಬಿ ನೂರಾರು ಕೋಟಿ ರೂಪಾಯಿ ಲಾಸ್​ ಮಾಡಿಕೊಂಡ ನಿರ್ಮಾಪಕರು ಕಂಗಾಲು

Dhaakad Box office Collection: ಗಲ್ಲಾಪೆಟ್ಟಿಗೆಯಲ್ಲಿ ‘ಧಾಕಡ್​’ ಸಿನಿಮಾ ಅಕ್ಷರಶಃ ಡಿಸಾಸ್ಟರ್​ ಆಗಿದೆ. ಕಂಗನಾ ರಣಾವತ್​ ಅವರಿಗೆ ತೀವ್ರ ಮುಖಭಂಗ ಆಗಿದೆ.

Dhaakad Collection: ‘ಧಾಕಡ್’​ ಡಿಸಾಸ್ಟರ್; ಕಂಗನಾ ನಂಬಿ ನೂರಾರು ಕೋಟಿ ರೂಪಾಯಿ ಲಾಸ್​ ಮಾಡಿಕೊಂಡ ನಿರ್ಮಾಪಕರು ಕಂಗಾಲು
ಕಂಗನಾ ರಣಾವತ್
Follow us
| Updated By: ಮದನ್​ ಕುಮಾರ್​

Updated on:May 22, 2022 | 1:00 PM

ನಟಿ ಕಂಗನಾ ರಣಾವತ್​ (Kangana Ranaut) ಅವರು ಸಿನಿಮಾ ಮಾಡಿದ್ದಕ್ಕಿಂತ ವಿವಾದ ಮಾಡಿದಕೊಂಡಿದ್ದೇ ಹೆಚ್ಚು. ತಮ್ಮನ್ನು ತಾವು ಲೇಡಿ ಸೂಪರ್​ ಸ್ಟಾರ್​ ಎಂಬಂತೆ ಬಿಂಬಿಸಿಕೊಂಡು, ಬಾಲಿವುಡ್​ನ ಇತರೆ ಸ್ಟಾರ್​ ಹೀರೋಗಳ ಬಗ್ಗೆ ಟೀಕೆ ಮಾಡುತ್ತಿದ್ದ ಅವರು ಈಗ ಹೀನಾಯವಾಗಿ ಸೋತಿದ್ದಾರೆ. ಕಂಗನಾ ರಣಾವತ್​ ನಟಿಸಿರುವ ‘ಧಾಕಡ್​’ ಸಿನಿಮಾ (Dhaakad Movie) ಮೇ 20ರಂದು ತೆರೆಕಂಡಿತು. ಈ ಚಿತ್ರದ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಉತ್ತಮ ಗುಣಮಟ್ಟದ ಮೇಕಿಂಗ್​, ಭಾರಿ ಪ್ರಚಾರ ಹಾಗೂ ಕಂಗನಾ ಅವರ ಇಮೇಜ್​ನಿಂದಾಗಿ ಈ ಚಿತ್ರ ಸೂಪರ್ ಹಿಟ್​ ಆಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈ ಸಿನಿಮಾ ಹೀನಾಯವಾಗಿ ಸೋತಿದೆ. ‘ಧಾಕಡ್​’ ಸಿನಿಮಾ ಮೇಲೆ ನೂರಾರು ಕೋಟಿ ರೂಪಾಯಿ ಬಂಡವಾಳ ಹೂಡಿದ ನಿರ್ಮಾಪಕರು ಕೈ ಸುಟ್ಟುಕೊಂಡಿದಾರೆ. ಗಲ್ಲಾಪೆಟ್ಟಿಗೆಯಲ್ಲಿ ಆಗುತ್ತಿರುವ ಚಿಲ್ಲರೆ ಕಲೆಕ್ಷನ್ (Box Office Collection)​ ಕಂಡು ಅವರು ಕಂಗಾಲಾಗಿದ್ದಾರೆ. ಮೊದಲ ದಿನ ಕಂಗನಾ ರಣಾವತ್​ ಸಿನಿಮಾ ನಿರೀಕ್ಷಿತ ಮಟ್ಟದ ಓಪನಿಂಗ್​ ಪಡೆದುಕೊಳ್ಳಲಿಲ್ಲ. ಕನಿಷ್ಠ ಪಕ್ಷ ವೀಕೆಂಡ್​ನಲ್ಲಾದರೂ ಜನರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಬಹುದು ಎಂದುಕೊಂಡರೆ ಆ ಭರವಸೆ ಕೂಡ ಸುಳ್ಳಾಗಿದೆ.

ಬಿಗ್​ ಬಜೆಟ್​ ಸಿನಿಮಾ ಹೀನಾಯವಾಗಿ ಸೋತರೆ ಅದನ್ನು ಡಿಸಾಸ್ಟರ್​ ಅಂತ ಹೇಳಲಾಗುತ್ತದೆ. ಅದು ‘ಧಾಕಡ್​’ ಚಿತ್ರದ ವಿಚಾರದಲ್ಲಿ ಅಕ್ಷರಶಃ ನಿಜವಾಗಿದೆ. ವಿಶ್ವಾದ್ಯಂತ ರಿಲೀಸ್​ ಆದ ಈ ಸಿನಿಮಾ ಮೊದಲ ದಿನ (ಮೇ 20) ಗಳಿಸಿದ್ದು ಕೇವಲ 50 ಲಕ್ಷ ರೂಪಾಯಿ. ಎರಡನೇ ದಿನವಾದ ಶನಿವಾರವಾದರೂ ಕಲೆಕ್ಷನ್​ ಹೆಚ್ಚಬಹುದು ಎಂದು ನಿರೀಕ್ಷಿಸಲಾಗಿತ್ತು. ಅಂದು ಕೂಡ ಬರೀ 50 ಲಕ್ಷ ರೂಪಾಯಿ ಗಳಿಸುವಲ್ಲಿಗೆ ಈ ಚಿತ್ರ ಸುಸ್ತು ಹೊಡೆದಿದೆ. ಅಲ್ಲಿಗೆ ಎಲ್ಲ ಭರವಸೆಗಳು ಕಮರಿಹೋಗಿವೆ.

ಇದನ್ನೂ ಓದಿ: ‘ಧಾಕಡ್​’ ರಿಲೀಸ್​ಗೂ ಮುನ್ನ ತಿರುಮಲಕ್ಕೆ ಬಂದು ವೆಂಕಟೇಶ್ವರನ ದರ್ಶನ ಪಡೆದ ಕಂಗನಾ ರಣಾವತ್​

ಇದನ್ನೂ ಓದಿ
Image
ಪಾರ್ಟಿಯಲ್ಲಿ ಈ ವ್ಯಕ್ತಿಗೆ ಪದೇಪದೇ ಕಿಸ್ ಮಾಡಿದ ಕಂಗನಾ; ಫ್ಯಾನ್ಸ್​ಗೆ ಮೂಡಿತು ಅನುಮಾನ
Image
ಬಾಲಿವುಡ್​ನ ಯಾರೊಬ್ಬರಿಗೂ ನನ್ನ ಮನೆಗೆ ಬರುವ ಅರ್ಹತೆ ಇಲ್ಲ; ಕಂಗನಾ ನೇರ ನುಡಿ
Image
‘ಇನ್ಮುಂದೆ ನಾನು ಒಂಟಿ ಅಲ್ಲ’ ಎಂದು ಸಲ್ಮಾನ್​ ಖಾನ್​ ಕಡೆ ಕೈ ತೋರಿಸಿ ಹೇಳಿದ ಕಂಗನಾ; ಫ್ಯಾನ್ಸ್​ ಫುಲ್​ ಖುಷ್​​
Image
Kangana Ranaut: ಯೋಗಿ ಆದಿತ್ಯನಾಥ್​ ಭೇಟಿ ಮಾಡಿದ ನಟಿ ಕಂಗನಾ ರಣಾವತ್​; ಈ ಮೀಟಿಂಗ್​ ಉದ್ದೇಶ ಏನು?

ಕಂಗನಾ ರಣಾವತ್​ ಸೇರಿದಂತೆ ಎಲ್ಲ ಕಲಾವಿದರ ಸಂಭಾವನೆಗೆ ನಿರ್ಮಾಪಕರು ಬಹುಕೋಟಿ ರೂಪಾಯಿ ಸುರಿದಿದ್ದಾರೆ. ಅನೇಕ ವಿದೇಶಿ ತಂತ್ರಜ್ಞರನ್ನು ಕರೆಸಿ ಕೆಲಸ ಮಾಡಿಸಲಾಗಿದ್ದು, ಅವರಿಗೂ ದೊಡ್ಡ ಮೊತ್ತದ ಸಂಬಳ ನೀಡಲಾಗಿದೆ. ಅದರ ಜೊತೆಗೆ ಶೂಟಿಂಗ್​ ಮತ್ತು ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಿಗೆ ಸಿಕ್ಕಾಪಟ್ಟೆ ಖರ್ಚಾಗಿದೆ. ಒಬ್ಬ ಸ್ಟಾರ್​ ನಟನ ಆ್ಯಕ್ಷನ್​ ಸಿನಿಮಾಗೆ ಹಾಕುವಷ್ಟೇ ಹಣವನ್ನು ‘ಧಾಕಡ್​’ ಚಿತ್ರಕ್ಕೂ ಸುರಿಯಲಾಗಿದೆ. ಪ್ರಚಾರದ ಖರ್ಚು ಕೂಡ ಸೇರಿದರೆ ಇದರ ಬಜೆಟ್​ 100 ಕೋಟಿ ರೂಪಾಯಿ ಮುಟ್ಟಬಹುದು. ಆದರೆ ಈ ಸಿನಿಮಾ 2 ದಿನಕ್ಕೆ ಗಳಿಸಿರುವುದು ಕೇವಲ 1 ಕೋಟಿ ರೂಪಾಯಿ ಮಾತ್ರ. ಡಿಸಾಸ್ಟರ್​ ಎಂಬ ಪದಕ್ಕೆ ಸೂಕ್ತ ಉದಾಹರಣೆಯಾಗಿ ಈ ಚಿತ್ರ ಜನರ ಕಣ್ಣೆದುರಿಗಿದೆ.

ಇದನ್ನೂ ಓದಿ: ಕಂಗನಾ ರಣಾವತ್​ ಯಾಕಿನ್ನೂ ಮದುವೆ ಆಗಿಲ್ಲ? ಅದಕ್ಕೆ ಕಾರಣ ಆಗಿದ್ದು ಒಂದೇ ಒಂದು ಗಾಸಿಪ್​; ಏನದು?

ದಕ್ಷಿಣ ಭಾರತದ ಸಿನಿಮಾಗಳ ಅಬ್ಬರದ ಎದುರು ಹಿಂದಿ ಚಿತ್ರರಂಗ ಮಂಕಾಗಿದೆ. ‘ಧಾಕಡ್​’ ಚಿತ್ರದಿಂದ ಬಾಲಿವುಡ್​ ಬಿಸ್ನೆಸ್​ ಚೇತರಿಸಿಕೊಳ್ಳಬಹುದು ಎಂದು ಊಹಿಸಲಾಗಿತ್ತು. ಆದರೆ ಅದು ನಿಜವಾಗಿಲ್ಲ. ‘ಧಾಕಡ್​’ ಬದಲಿಗೆ ಜನರು ‘ಭೂಲ್ ಭುಲಯ್ಯ 2’ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ. ಕಾರ್ತಿಕ್​ ಆರ್ಯನ್​ ನಟನೆಯ ಈ ಸಿನಿಮಾ ಭರ್ಜರಿ ಕಲೆಕ್ಷನ್​ ಮಾಡುತ್ತಿದೆ. ಈ ಚಿತ್ರದಲ್ಲಿ ಹಾರರ್​ ಕಾಮಿಡಿ ಅಂಶವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಮೊದಲ ದಿನ ‘ಭೂಲ್ ಭುಲಯ್ಯ 2’ ಸಿನಿಮಾ 14.11 ಕೋಟಿ ರೂಪಾಯಿ ಗಳಿಸಿತು. 2ನೇ ದಿನ 18.34 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:00 pm, Sun, 22 May 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ