AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀನಾಯ ಸೋಲು ಕಂಡ ಕಂಗನಾ ರಣಾವತ್; 50 ಲಕ್ಷ ರೂ. ದಾಟಲಿಲ್ಲ ‘ಧಾಕಡ್’ ಸಿನಿಮಾ ಗಳಿಕೆ

‘ಧಾಕಡ್​’ ಸಿನಿಮಾ ಬಗ್ಗೆ ಕಂಗನಾಗೆ ಸಾಕಷ್ಟು ನಿರೀಕ್ಷೆ ಇತ್ತು. ಈ ಕಾರಣಕ್ಕೆ ಅವರು ಈ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿದ್ದರು. ಆದರೆ, ಕಂಗನಾ ಸಿನಿಮಾ 50 ಲಕ್ಷ ರೂಪಾಯಿ ಗಳಿಸಿ ಮೊದಲ ದಿನದ ಆಟ ಮುಗಿಸಿದೆ.

ಹೀನಾಯ ಸೋಲು ಕಂಡ ಕಂಗನಾ ರಣಾವತ್; 50 ಲಕ್ಷ ರೂ. ದಾಟಲಿಲ್ಲ ‘ಧಾಕಡ್’ ಸಿನಿಮಾ ಗಳಿಕೆ
ಕಂಗನಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 21, 2022 | 5:43 PM

ಕಂಗನಾ ರಣಾವತ್ (Kangana Ranaut) ಬಾಲಿವುಡ್​ನಲ್ಲಿ ವಿವಾದಗಳ ಮೂಲಕವೇ ಗುರುತಿಸಿಕೊಂಡಿದ್ದಾರೆ. ಬಾಲಿವುಡ್​ನ ಅನೇಕ ಸ್ಟಾರ್​ಗಳ ಬಗ್ಗೆ  ಅವರಿಗೆ ಅಸಮಾಧಾನ ಇದೆ. ಕಂಗನಾ ಅವರ ಮಾತುಗಳು ಅನೇಕರಿಗೆ ಇಷ್ಟ ಆಗುವುದಿಲ್ಲ. ಅವರ ಜತೆ ಸ್ನೇಹಕ್ಕಿಂತಲೂ ವಿರೋಧ ಕಟ್ಟಿಕೊಂಡವರೇ ಜಾಸ್ತಿ. ಈಗ ಅವರ ನಟನೆಯ ‘ಧಾಕಡ್’ ಸಿನಿಮಾ (Dhaakad Movie) ಹೀನಾಯವಾಗಿ ಸೋತಿದೆ. ಈ ಸೋಲಿನಿಂದ ಚೇತರಿಸಿಕೊಳ್ಳಲು ಅವರಿಗೆ ಸಾಕಷ್ಟು ಸಮಯ ಬೇಕಾಗಬಹುದು. ಸ್ಟಾರ್ ಪಾತ್ರವರ್ಗ ಇದೆ ಎಂದಾದರೆ ಬಾಲಿವುಡ್​ ಸಿನಿಮಾ ಮೊದಲ ದಿನ ಒಂದು ಕೋಟಿ ರೂಪಾಯಿ ಆದರೂ ಗಳಿಕೆ ಮಾಡುತ್ತದೆ. ಆದರೆ, ಕಂಗನಾ ಸಿನಿಮಾ 50 ಲಕ್ಷ ರೂಪಾಯಿ ಗಳಿಸಲು ಒದ್ದಾಡಿದೆ.

‘ಧಾಕಡ್​’ ಸಿನಿಮಾ ಬಗ್ಗೆ ಕಂಗನಾಗೆ ಸಾಕಷ್ಟು ನಿರೀಕ್ಷೆ ಇತ್ತು. ಈ ಕಾರಣಕ್ಕೆ ಅವರು ಈ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿದ್ದರು. ಬಾಲಿವುಡ್​ನಲ್ಲಿ ಸಿನಿಮಾಗಳು ಸತತ ಸೋಲು ಕಾಣುತ್ತಿವೆ. ಇಂಥ ಸಂದರ್ಭದಲ್ಲಿ ಕ್ರಾಂತಿ ಮಾಡುವ ಉದ್ದೇಶ ಅವರದ್ದಾಗಿತ್ತು. ಆದರೆ, ಅವರು ಕಂಡಿದ್ದು ಮಾತ್ರ ಹೀನಾಯ ಸೋಲು.

ಬಾಲಿವುಡ್​ನಲ್ಲಿ ‘ಭೂಲ್​ ಭುಲಯ್ಯ 2’ ಹಾಗೂ ‘ಧಾಕಡ್​’ ಸಿನಿಮಾ ಮೇ 20ರಂದು ಬಿಡುಗಡೆ ಆದವು. ‘ಭೂಲ್ ಭುಲಯ್ಯ 2’ ಮೊದಲ ದಿನ ಗಳಿಸಿದ್ದು ಬರೋಬ್ಬರಿ 14 ಕೋಟಿ ರೂಪಾಯಿ. ಆದರೆ, ಕಂಗನಾ ಸಿನಿಮಾ 50 ಲಕ್ಷ ರೂಪಾಯಿ ಗಳಿಸಿ ಮೊದಲ ದಿನದ ಆಟ ಮುಗಿಸಿದೆ.

ಇದನ್ನೂ ಓದಿ
Image
ದೀಪಿಕಾ, ಪ್ರಿಯಾಂಕಾ ರೀತಿ ಹಾಲಿವುಡ್​ಗೆ ಹೋಗ್ತಾರಾ ಕಂಗನಾ? ಖಡಕ್​ ಉತ್ತರ ನೀಡಿದ ‘ಧಾಕಡ್​’ ನಟಿ
Image
Kangana Ranaut: ಯೋಗಿ ಆದಿತ್ಯನಾಥ್​ ಭೇಟಿ ಮಾಡಿದ ನಟಿ ಕಂಗನಾ ರಣಾವತ್​; ಈ ಮೀಟಿಂಗ್​ ಉದ್ದೇಶ ಏನು?
Image
‘ಅಜಯ್​ ದೇವಗನ್​ ಹೇಳಿದ್ರಲ್ಲಿ ತಪ್ಪಿಲ್ಲ, ಆದ್ರೆ ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ’: ಕಂಗನಾ ಹೊಸ ಟ್ವಿಸ್ಟ್​
Image
Kangana Ranaut Photos: ಕಂಗನಾ ರಣಾವತ್ ಹಾಟ್ ಅವತಾರ ನೋಡಿ ಅಭಿಮಾನಿಗಳೇ ದಂಗು

ಇದನ್ನೂ ಓದಿ: ಕಂಗನಾ ರಣಾವತ್​ ಯಾಕಿನ್ನೂ ಮದುವೆ ಆಗಿಲ್ಲ? ಅದಕ್ಕೆ ಕಾರಣ ಆಗಿದ್ದು ಒಂದೇ ಒಂದು ಗಾಸಿಪ್​; ಏನದು?

‘ಧಾಕಡ್​’ ಚಿತ್ರದ ಬಗ್ಗೆ ಪ್ರೇಕ್ಷಕರಿಗೆ ಹೆಚ್ಚಿನ ನಿರೀಕ್ಷೆ ಇರಲಿಲ್ಲ. ಈ ಮಧ್ಯೆ ವಿಮರ್ಶಕರು ಚಿತ್ರವನ್ನು ತೆಗಳಿದರು. ಇದರಿಂದ ಸಿನಿಮಾದ ಕಲೆಕ್ಷನ್ ಕುಗ್ಗಿದೆ. ಇಂದು (ಮೇ 21) ಹಾಗೂ ನಾಳೆ (ಮೇ 22) ಚಿತ್ರ ಒಂದು ಹಂತದವರೆಗೆ ಕಲೆಕ್ಷನ್ ಮಾಡಬಹುದು. ಆ ಬಳಿಕ ಸಿನಿಮಾ ಚಿತ್ರಮಂದಿರದಿಂದ ಕಾಲ್ಕೀಳುವುದು ಪಕ್ಕಾ ಎನ್ನಲಾಗುತ್ತಿದೆ. ಈ ಚಿತ್ರದಿಂದ ನಿರ್ಮಾಪಕರು ಕೈ ಸುಟ್ಟುಕೊಂಡಂತಾಗಿದೆ.

ಇದನ್ನೂ ಓದಿ: ‘ಧಾಕಡ್​’ ರಿಲೀಸ್​ಗೂ ಮುನ್ನ ತಿರುಮಲಕ್ಕೆ ಬಂದು ವೆಂಕಟೇಶ್ವರನ ದರ್ಶನ ಪಡೆದ ಕಂಗನಾ ರಣಾವತ್​

ಸಿನಿಮಾ ಸೋತರೂ ಕಂಗನಾ ಬಾಲಿವುಡ್​​ನ ಒಳಿತಿನ ಬಗ್ಗೆ ಚಿಂತೆ ಮಾಡಿದಂತಿದೆ. ‘ಭೂಲ್​ ಭುಲಯ್ಯ 2’ ಗೆದ್ದಿರುವುದು ಮಂಕಾದ ಬಾಲಿವುಡ್​ಗೆ ಹೊಸ ಚೈತನ್ಯ ತಂದುಕೊಟ್ಟಿದೆ. ಈ ಕಾರಣಕ್ಕೆ ಕಂಗನಾ ‘ಭೂಲ್​ ಭುಲಯ್ಯ 2’ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಅವರ ಈ ನಡೆ ಬಗ್ಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅನೇಕರು ಕಂಗನಾಗೆ ಒಳ್ಳೆಯ ಸ್ಕ್ರಿಪ್ಟ್​ ಆಯ್ಕೆ ಮಾಡಿಕೊಳ್ಳುವಂತೆ ಕಿವಿಮಾತು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ