AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಾಲಿವುಡ್​​ಗೆ ಹಾರಿದ ಧನುಶ್, ಆನಂದ್ ಜೊತೆ ನಾಲ್ಕನೇ ಸಿನಿಮಾ

Dhanush in Bollywood: ಧನುಶ್ ಅವರು ದಕ್ಷಿಣದಲ್ಲಿ ಮಾತ್ರವಲ್ಲ ಹಿಂದಿ ಭಾಷಿಕ ಪ್ರದೇಶದಲ್ಲೂ ದೊಡ್ಡ ಅಭಿಮಾನಿ ವರ್ಗ ಹೊಂದಿದ್ದಾರೆ. ಅದಕ್ಕೆ ಮುಖ್ಯ ಕಾರಣ ಅವರ ನಟನೆಯ ‘ರಾಂಝನಾ’ ಸಿನಿಮಾ. 2013 ರಲ್ಲಿ ಬಿಡುಗಡೆ ಆಗಿದ್ದ ಹಿಂದಿ ಸಿನಿಮಾ ‘ರಾಂಝನಾ’ ಹಿಂದಿಯ ಕಲ್ಟ್ ಕ್ಲಾಸಿಕ್​​ಗಳಲ್ಲಿ ಒಂದು. ಅದಾದ ಬಳಿಕ ಸತತವಾಗಿ ಧನುಶ್ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಲೇ ಬರುತ್ತಿದ್ದಾರೆ.

ಮತ್ತೆ ಬಾಲಿವುಡ್​​ಗೆ ಹಾರಿದ ಧನುಶ್, ಆನಂದ್ ಜೊತೆ ನಾಲ್ಕನೇ ಸಿನಿಮಾ
Dhanush
ಮಂಜುನಾಥ ಸಿ.
|

Updated on:Apr 08, 2026 | 6:16 PM

Share

ಧನುಶ್ (Dhanush), ತಮಿಳು ಚಿತ್ರರಂಗದ ಸ್ಟಾರ್ ನಟ, ತೆಲುಗು ರಾಜ್ಯಗಳಲ್ಲಿಯೂ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಧನುಶ್ ಅವರು ದಕ್ಷಿಣದಲ್ಲಿ ಮಾತ್ರವಲ್ಲ ಹಿಂದಿ ಭಾಷಿಕ ಪ್ರದೇಶದಲ್ಲೂ ದೊಡ್ಡ ಅಭಿಮಾನಿ ವರ್ಗ ಹೊಂದಿದ್ದಾರೆ. ಅದಕ್ಕೆ ಮುಖ್ಯ ಕಾರಣ ಅವರ ನಟನೆಯ ‘ರಾಂಝನಾ’ ಸಿನಿಮಾ. 2013 ರಲ್ಲಿ ಬಿಡುಗಡೆ ಆಗಿದ್ದ ಹಿಂದಿ ಸಿನಿಮಾ ‘ರಾಂಝನಾ’ ಹಿಂದಿಯ ಕಲ್ಟ್ ಕ್ಲಾಸಿಕ್​​ಗಳಲ್ಲಿ ಒಂದು. ಅದಾದ ಬಳಿಕ ಸತತವಾಗಿ ಧನುಶ್ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಲೇ ಬರುತ್ತಿದ್ದಾರೆ.

ಧನುಶ್ ಮತ್ತು ಬಾಲಿವುಡ್ ನಿರ್ದೇಶಕ ಆನಂದ್ ಎಲ್ ರಾಯ್ ಅವರದ್ದು ಜೋಡಿಯೇ ಆಗಿಬಿಟ್ಟಿದೆ. ಇತ್ತೀಚೆಗಷ್ಟೆ ಧನುಶ್, ಕೃತಿ ಸನೋನ್ ನಟಿಸಿದ್ದ ‘ತೇರೆ ಇಷ್ಕ್ ಮೇ’ ಸಿನಿಮಾವನ್ನು ಆನಂದ್ ಎಲ್ ರಾಯ್ ನಿರ್ದೇಶಿಸಿದ್ದು, ಸಿನಿಮಾ ಸಾಧಾರಣ ಹಿಟ್ ಅಷ್ಟೇ ಆಯ್ತಾದರೂ ಸಿನಿಮಾದ ಬಗ್ಗೆ ಒಳ್ಳೆಯ ಅಭಿಪ್ರಾಯಗಳೇ ವ್ಯಕ್ತವಾಗಿದ್ದವು. ಇದೀಗ ಧನುಶ್ ಅವರು ಮತ್ತೊಮ್ಮೆ ಹಿಂದಿ ಸಿನಿಮಾನಲ್ಲಿ ನಟಿಸಲು ಸಜ್ಜಾಗಿದ್ದಾರೆ. ಮತ್ತೊಮ್ಮೆ ಆನಂದ್ ಅವರೇ ಧನುಶ್ ಅವರ ಸಿನಿಮಾ ನಿರ್ದೇಶಿಸುತ್ತಿದ್ದಾರೆ.

ಈ ವರೆಗೆ ಆನಂದ್ ಅವರು, ಧನುಶ್ ಅನ್ನು ಸ್ಟ್ರೀಟ ಲವ್ವರ್, ಠಪೋರಿ ರೀತಿಯ ಪಾತ್ರಗಳಲ್ಲೇ ತೋರಿಸಿದ್ದರು. ಆದರೆ ಮೊದಲ ಬಾರಿಗೆ ಧನುಶ್ ಅವರಿಗಾಗಿ ಐತಿಹಾಸಿಕ ಕತೆಯನ್ನು ಆನಂದ್ ಅವರು ಹೆಣೆದಿದ್ದಾರೆ. ಆನಂದ್ ಅವರು ಪೀರಿಯಡ್ ಲವ್ ಸ್ಟೋರಿ ಒಂದನ್ನು ಹೆಣೆದಿದ್ದು, ಸಿನಿಮಾನಲ್ಲಿ ಧನುಶ್ ಜೊತೆಗೆ ಕೃತಿ ಸನೋನ್ ನಾಯಕಿಯಾಗಿ ನಟಿಸಲಿದ್ದಾರೆ. ‘ತೇರೆ ಇಷ್ಕ್ ಮೇ’ ಸಿನಿಮಾನಲ್ಲಿಯೂ ಕೃತಿ ಸನೋನ್ ನಾಯಕಿ ಆಗಿದ್ದರು. ಧನುಶ್ ಅಂಥಹಾ ನಟನ ಮುಂದೆ ಸಹ ಅದ್ಭುತವಾಗಿ ನಟಿಸಿ ಸೈ ಎನಿಸಿಕೊಂಡಿದ್ದರು. ಹಾಗಾಗಿ ಇದೇ ಜೋಡಿಯನ್ನು ಆನಂದ್ ಅವರು ತಮ್ಮ ಹೊಸ ಸಿನಿಮಾಕ್ಕೂ ಮುಂದುವರೆಸಿದ್ದಾರೆ.

ಇದನ್ನೂ ಓದಿ:ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ

‘ರಾಂಝನಾ’, ‘ಅತರಂಗಿ ರೇ’, ‘ತೇರೆ ಇಷ್ಕ್ ಮೇ’ ಸಿನಿಮಾಗಳು ಧನುಶ್ ಮತ್ತು ಆನಂದ್ ಎಲ್ ರಾಯ್ ಅವರ ಕಾಂಬಿನೇಷನ್​​ನಲ್ಲಿ ಈ ವರೆಗೆ ಮೂಡಿ ಬಂದಿದ್ದು, ಈ ಮೂರು ಸಿನಿಮಾಗಳು ಅದ್ಭುತ ಪ್ರೇಮಕತೆಯನ್ನು ಒಳಗೊಂಡಿವೆ. ಇದೀಗ ಮೊದಲ ಬಾರಿಗೆ ಆನಂದ್ ಅವರು ಐತಿಹಾಸಿಕ ಹಿನ್ನೆಲೆಯುಳ್ಳ ಪ್ರೇಮಕತೆ ನಿರ್ದೇಶಿಸಲು ಕೈ ಹಾಕಿದ್ದಾರೆ. ಧನುಶ್ ಅವರೂ ಸಹ ಐತಿಹಾಸಿಕ ರೀತಿಯ ಪಾತ್ರಗಳಲ್ಲಿ ನಟಿಸಿರುವುದು ಕಡಿಮೆಯೇ. ಹಾಗಾಗಿ ಸಹಜವಾಗಿಯೇ ಈ ಸಿನಿಮಾದ ಬಗ್ಗೆ ಸಿನಿಮಾ ಪ್ರೇಮಿಗಳಿಗೆ ಕುತೂಹಲ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:16 pm, Wed, 8 April 26

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ