AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivek Oberoi: ‘ನೀವೆಲ್ಲ ಭಾರತದವರೇ ತಾನೆ?’: ಬಾಲಿವುಡ್​ ಮಂದಿಗೆ ವಿವೇಕ್​ ಒಬೆರಾಯ್​ ಖಡಕ್​ ಪ್ರಶ್ನೆ

Dharavi Bank | Vivek Oberoi: ‘ಕೆಲವರ ಸ್ಕ್ರಿಪ್ಟ್​ ನೋಡಿ ನನಗೆ ಆಶ್ಚರ್ಯ ಆಗುತ್ತದೆ. ನೀವೆಲ್ಲ ಭಾರತದವರು ಹೌದಲ್ಲವೇ ಅಂತ ಕೇಳಬೇಕು ಎನಿಸುತ್ತದೆ’ ಎಂದು ವಿವೇಕ್​ ಒಬೆರಾ​ಯ್​ ಹೇಳಿದ್ದಾರೆ.

Vivek Oberoi: ‘ನೀವೆಲ್ಲ ಭಾರತದವರೇ ತಾನೆ?’: ಬಾಲಿವುಡ್​ ಮಂದಿಗೆ ವಿವೇಕ್​ ಒಬೆರಾಯ್​ ಖಡಕ್​ ಪ್ರಶ್ನೆ
ವಿವೇಕ್ ಒಬೆರಾಯ್
TV9 Web
| Edited By: |

Updated on: Nov 28, 2022 | 1:11 PM

Share

ನಟ ವಿವೇಕ್​ ಒಬೆರಾಯ್​ (Vivek Oberoi) ಅವರು ಹಲವು ಬಗೆಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀರೋ-ವಿಲನ್​ ಎಂಬ ಭೇದ ಇಲ್ಲದೇ ಎಲ್ಲ ರೀತಿಯಲ್ಲೂ ಅವರು ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಅವರಿಗೆ ಸಖತ್​ ಬೇಡಿಕೆ ಇದೆ. ಸದ್ಯ ಅವರು ನಟಿಸಿರುವ ‘ಧಾರಾವಿ ಬ್ಯಾಂಕ್​’ (Dharavi Bank) ವೆಬ್​ ಸಿರೀಸ್​ ಬಿಡುಗಡೆ ಆಗಿದೆ. ಎಂಎಕ್ಸ್​ ಪ್ಲೇಯರ್​ ಒಟಿಟಿಯಲ್ಲಿ ಇದು ಪ್ರಸಾರವಾಗುತ್ತಿದೆ. ಇತ್ತೀಚೆಗೆ ಈ ವೆಬ್​ ಸರಣಿಯ ಪ್ರಚಾರದ ವೇಳೆ ಅವರು ಬಾಲಿವುಡ್​ (Bollywood) ಸಿನಿಮಾಗಳ ಸೋಲಿನ ಕುರಿತು ಮಾತನಾಡಿದರು. ಹಿಂದಿ ಸಿನಿಮಾ ಮಂದಿ ಹಾಲಿವುಡ್​ ಚಿತ್ರಗಳನ್ನು ಅನುಕರಿಸುವ ಬಗ್ಗೆ ವಿವೇಕ್​ ಒಬೆರಾಯ್​ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಹಿಂದಿ ಚಿತ್ರರಂಗಕ್ಕೆ 2022ರ ವರ್ಷ ನಿರಾಶಾದಾಯಕ ಆಗಿದೆ. ಬಾಲಿವುಡ್​ನಲ್ಲಿ ಬೆರಳೆಣಿಕೆಯ ಸಿನಿಮಾಗಳು ಗೆದ್ದಿದ್ದು ಬಿಟ್ಟರೆ ಹೆಚ್ಚಿನ ಸಿನಿಮಾಗಳು ಹೀನಾಯವಾಗಿ ಸೋತವು. ಸ್ಟಾರ್​ ನಟರ ಚಿತ್ರಗಳು ಕೂಡ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲು ಸಾಧ್ಯವಾಗದೇ ಕಾಲ್ಕಿತ್ತವು. ಈ ಬೆಳವಣಿಗೆ ಬಗ್ಗೆ ಎಲ್ಲೆಡೆ ಚರ್ಚೆ ಆಗುತ್ತಿದೆ. ಈ ಕುರಿತು ವಿವೇಕ್​ ಒಬೆರಾಯ್​ ಕೂಡ ಮಾತನಾಡಿದ್ದಾರೆ.

‘ಇನ್​ಸೈಡ್​ ಎಡ್ಜ್​ ಗೆಲುವಿನ ಬಳಿಕ ನನಗೆ ಪ್ರತಿ 10 ದಿನಕ್ಕೊಮ್ಮೆ ಹೊಸ ಆಫರ್​ ಬರಲು ಶುರುವಾಯಿತು. ಇಷ್ಟು ಪ್ಯಾಕೇಜ್​ ಇದೆ, ಈ ಶೋ ಅನ್ನು ನಾವು ಹೀಗೆ ಮಾಡುತ್ತೇವೆ ಎಂದೆಲ್ಲ ಹೇಳುತ್ತಾರೆ. ಆದರೆ ನಾನು ಅವುಗಳ ಬೆನ್ನು ಹತ್ತಿ ಹೋಗಿಲ್ಲ. ಈ ಮಾಧ್ಯಮದ ಬಗ್ಗೆ ನನಗೆ ಸಾಕಷ್ಟು ಗೌರವ ಇದೆ. ಪ್ರತಿಭೆ ಇದ್ದವರು ಮಾತ್ರ ಇಲ್ಲಿ ಮಿಂಚುತ್ತಾರೆ’ ಎಂದು ವಿವೇಕ್​ ಒಬೆರಾಯ್​ ಹೇಳಿದ್ದಾರೆ.

ಇದನ್ನೂ ಓದಿ
Image
ಬಾಲಿವುಡ್​ನವರೂ ಕೆಟ್ಟ ಸಿನಿಮಾ ಮಾಡ್ತಾರೆ, ನಾವ್ಯಾಕೆ ಅವರಿಗೆ ರೇಂಜ್​ ಕೊಡಬೇಕು? ಸುದೀಪ್ ನೇರ ಪ್ರಶ್ನೆ
Image
ಬಾಲಿವುಡ್​ಗಿತ್ತು ಅಂಡರ್​​ವರ್ಲ್ಡ್​​ ಸಂಪರ್ಕ; ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ನಟಿ
Image
ಬಾಲಿವುಡ್​ vs ಸೌತ್ ಎಂದರೆ ನನಗೆ ಸಿಟ್ಟೇ ಬರುತ್ತದೆ; ಅಕ್ಷಯ್ ಕುಮಾರ್ ನೇರ ನುಡಿ
Image
ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

‘ಕಂಟೆಂಟ್​ ಚೆನ್ನಾಗಿ ಇಲ್ಲ ಅಂದರೆ ದೊಡ್ಡ ಸ್ಟಾರ್​ ನಟರ ಸಿನಿಮಾವನ್ನೂ ಜನರು ತಿರಸ್ಕರಿಸುತ್ತಾರೆ. ಒಳ್ಳೆಯ ಕೆಲಸ ಮಾಡಿದ್ದಕ್ಕೆ ಹೊಸ ನಟರು ಕೂಡ ಭಾರಿ ಗೆಲುವು ಪಡೆಯಬಹುದು. ‘ಇನ್​ಸೈಡ್​ ಎಡ್ಜ್​’ ಬಳಿಕ ನಾನು ಸಹಿ ಮಾಡಿದ್ದು ‘ಧಾರಾವಿ ಬ್ಯಾಂಕ್​’ ಮತ್ತು ‘ಇಂಡಿಯನ್​ ಪೊಲೀಸ್​ ಫೋರ್ಸ್​’ಗೆ ಮಾತ್ರ. ಇವುಗಳ ಸ್ಕ್ರಿಪ್ಟ್​ ಚೆನ್ನಾಗಿತ್ತು ಎಂಬುದೇ ಅದಕ್ಕೆ ಕಾರಣ. ಕೆಲವರ ಸ್ಕ್ರಿಪ್ಟ್​ ನೋಡಿ ನನಗೆ ಆಶ್ಚರ್ಯ ಆಗುತ್ತದೆ. ನೀವೆಲ್ಲ ಭಾರತದವರು ಹೌದಲ್ಲವೇ ಅಂತ ಕೇಳಬೇಕು ಎನಿಸುತ್ತದೆ. ಅಮೆರಿಕಾ ಅಥವಾ ಕೊರಿಯಾದಿಂದ ಸ್ಫೂರ್ತಿ ಪಡೆದು ಕಥೆ ಬರೆಯುತ್ತಾರೆ’ ಎಂದಿದ್ದಾರೆ ವಿವೇಕ್​ ಒಬೆರಾಯ್​.

ಇತ್ತೀಚೆಗೆ ನಟ ರಿಷಬ್​ ಶೆಟ್ಟಿ ಅವರು ಕೂಡ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದುಂಟು. ನಮ್ಮ ನೆಲೆದ ಕಥೆಯನ್ನು ಇಟ್ಟುಕೊಂಡು ಸಿನಿಮಾ ಮಾಡಿದರೆ ಪ್ರೇಕ್ಷಕರಿಗೆ ಹೆಚ್ಚು ಇಷ್ಟ ಆಗುತ್ತದೆ ಎಂಬುದು ರಿಷಬ್​ ಶೆಟ್ಟಿ ಅಭಿಪ್ರಾಯ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು