AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಧರ್ಮೇಂದ್ರ; ಮನೆಯಲ್ಲಿ ಮುಂದುವರಿಯಲಿದೆ ಚಿಕಿತ್ಸೆ  

Dharmendra Health: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಹದಗೆಟ್ಟು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ನಿಧನದ ವದಂತಿಗಳು ಹರಡಿದ್ದವು. ಆದರೆ, ಕುಟುಂಬವು ಸ್ಪಷ್ಟಪಡಿಸಿ, ಈಗ ಧರ್ಮೇಂದ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಮನೆಯಲ್ಲೇ ಅವರಿಗೆ ಚಿಕಿತ್ಸೆ ಮುಂದುವರಿಯಲಿದೆ ಎಂದು ಕುಟುಂಬ ತಿಳಿಸಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಧರ್ಮೇಂದ್ರ; ಮನೆಯಲ್ಲಿ ಮುಂದುವರಿಯಲಿದೆ ಚಿಕಿತ್ಸೆ  
ಧರ್ಮೇಂದ್ರ
ರಾಜೇಶ್ ದುಗ್ಗುಮನೆ
|

Updated on: Nov 12, 2025 | 9:49 AM

Share

ಕೆಲ ದಿನಗಳ ಹಿಂದೆ ಆಸ್ಪತ್ರೆ ಸೇರಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (Dharmendra Health) ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಅವರನ್ನು ವೆಂಟಿಲೇಟರ್​ನಲ್ಲಿಯೇ ಇಡಲಾಗಿತ್ತು. ಅವರು ನಿಧನ ಹೊಂದಿದ್ದಾರೆ ಎಂಬ ವದಂತಿಯೂ ಹಬ್ಬಿತ್ತು. ಆದರೆ, ಕುಟುಂಬದವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಈಗ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಮನೆಗೆ ಕರೆದುಕೊಂಡು ಹೊಗಲಾಗಿದೆ. ಮನೆಯಲ್ಲಿ ಚಿಕಿತ್ಸೆ ಮುಂದುವರಿಯಲಿದೆಯಂತೆ.

ಧರ್ಮೇಂದ್ರ ಆರೋಗ್ಯ ತೀವ್ರ ತರದಲ್ಲಿ ಹದಗೆಟ್ಟಿದೆ ಎಂಬ ಸುದ್ದಿ ಹರಡುತ್ತಿದ್ದಂತೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸಲ್ಮಾನ್ ಖಾನ್, ಶಾರುಖ್ ಖಾನ್, ಗೋವಿಂದ, ಧರ್ಮೇಂದ್ರ ಅವರ ಕುಟುಂಬದವರಾದ ಇಶಾ, ಬಾಬಿ, ಸನ್ನಿ, ಹೇಮಾ ಮಾಲಿನಿ ಭೇಟಿ ನೀಡಿದರು. ಧರ್ಮೇಂದ್ರ ನಿಧನ ಹೊಂದಿದ್ದಾರೆ ಎಂಬ ಸುದ್ದಿ ಆತಂಕ ಮೂಡಿಸಿತ್ತು. ಆದರೆ, ಹೇಮಾ ಮಾಲಿನಿ ಈ ವಿಚಾರವನ್ನು ತಳ್ಳಿ ಹಾಕಿದ್ದರು. ಈಗ ಕುಟುಂಬದ ಕಡೆಯಿಂದ ಅಭಿಮಾನಿಗಳಿಗೆ ಖುಷಿ ಸುದ್ದಿ ಸಿಕ್ಕಿದೆ.

ಸದ್ಯ ಧರ್ಮೇಂದ್ರ ಅವರನ್ನು ಮನೆಗೆ ಕರೆದುಕೊಂಡು ಹೋಗಲಾಗಿದೆ. ಮನೆಯಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರಿಯಲಿದೆ.  ‘ಧರ್ಮೇಂದ್ರ ಅವರು ಇಂದು (ನವೆಂಬರ್ 12) ಬೆಳಿಗ್ಗೆ 7.30ಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರಿಗೆ ಮನೆಯಲ್ಲೇ ಟ್ರೀಟ್​ಮೆಂಟ್ ನೀಡಲು ಕುಟುಂಬ ನಿರ್ಧರಿಸಿದೆ ಎಂದು ಡಾಕ್ಟರ್ ಪ್ರತೀತ್ ಮಾಹಿತಿ ನೀಡಿದ್ದಾರೆ.

‘ಧರ್ಮೇಂದ್ರ ಅವರು ಚೇತರಿಕೆ ಕಾಣಲಿ ಹಾಗೂ ಆರೋಗ್ಯ ವೃದ್ಧಿಸಲಿ ಎಂದು ಪ್ರಾರ್ಥಿಸಿದ ಎಲ್ಲರಿಗೂ ನಾವು ಕೃತಜ್ಞರಾಗಿರುತ್ತೇವೆ. ಕುಟುಂಬದ ಖಾಸಗಿತನವನ್ನು ಗೌರವಿಸಿ’ ಎಂದು ವೈದ್ಯರು ಕೋರಿದ್ದಾರೆ.

ಇದನ್ನೂ ಓದಿ: ಧರ್ಮೇಂದ್ರ ಹಾಗೂ ಹೇಮಾ ಮಾಲಿನ ನಡುವಿನ ವಯಸ್ಸಿನ ಅಂತರ ಇಷ್ಟೊಂದಾ?

ಧರ್ಮೇಂದ್ರ ಸಾವಿನ ಬಗ್ಗೆ ವದಂತಿ ಹಬ್ಬಿತ್ತು. ಅನೇಕ ರಾಜಕಾರಣಿಗಳು ಈ ಬಗ್ಗೆ ಪೋಸ್ಟ್ ಕೂಡ ಮಾಡಿದ್ದರು. ಆ ಬಳಿಕ ಹೇಮಾ ಮಾಲಿನಿ ಈ ಬಗ್ಗೆ ಸ್ಪಷ್ಟನೆ ನೀಡಿದರು. ಪತಿ ವೈದ್ಯಕೀಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?