AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮೇಂದ್ರ ಆಸ್ಪತ್ರೆಯಲ್ಲಿದ್ದಾಗ ನಮಗೆ ಕಿರುಕುಳ ಆಗಿದೆ; ಹೇಮಾ ಮಾಲಿನಿ ಆರೋಪ

ನಟ ಧರ್ಮೇಂದ್ರ ನಿಧನದ ಹಿನ್ನೆಲೆಯಲ್ಲಿ, ಹೇಮಾ ಮಾಲಿನಿ ಪಾಪರಾಜಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮತ್ತು ಮನೆಗೆ ಕರೆತಂದಾಗಲೂ ಮಾಧ್ಯಮಗಳು ಕುಟುಂಬವನ್ನು ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡಿದವು. ಸನ್ನಿ ಡಿಯೋಲ್ ಕೂಡ ಇದರಿಂದ ಆಕ್ರೋಶಗೊಂಡಿದ್ದರು. ಇದು ಕುಟುಂಬಕ್ಕೆ ಅಪಾರ ದುಃಖ ಮತ್ತು ಭಾವನಾತ್ಮಕ ನೋವು ತಂದಿದೆ ಎಂದು ಹೇಮಾ ಮಾಲಿನಿ ಹೇಳಿದ್ದಾರೆ.

ಧರ್ಮೇಂದ್ರ ಆಸ್ಪತ್ರೆಯಲ್ಲಿದ್ದಾಗ ನಮಗೆ ಕಿರುಕುಳ ಆಗಿದೆ; ಹೇಮಾ ಮಾಲಿನಿ ಆರೋಪ
ಹೇಮಾ ಮಾಲಿನಿ-ಧರ್ಮೇಂದ್ರ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 09, 2026 | 7:40 PM

Share

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ನವೆಂಬರ್ 24 ರಂದು ನಿಧನರಾದರು. ಅದಕ್ಕೂ ಮೊದಲು ಅವರ ಸ್ಥಿತಿ ತುಂಬಾ ಗಂಭೀರವಾಗಿತ್ತು. ಆಸ್ಪತ್ರೆಯ ಹೊರಗೆ ಪಾಪರಾಜಿಗಳು ನಿರಂತರವಾಗಿ ಇದ್ದ ಕಾರಣ, ಡಿಯೋಲ್ ಕುಟುಂಬವು ಅಂತಿಮವಾಗಿ ಅವರ ಚಿಕಿತ್ಸೆಯನ್ನು ಮನೆಯಲ್ಲಿಯೇ ಮುಂದುವರಿಸಲು ನಿರ್ಧರಿಸಿತು. ಧರ್ಮೇಂದ್ರ ಅವರನ್ನು ಮನೆಗೆ ಕರೆತಂದ ನಂತರವೂ, ಪಾಪರಾಜಿಗಳು ಮನೆಯ ಹೊರಗೆ ನಿಲ್ಲುತ್ತಿದ್ದರು. ಇದರಿಂದ ಕಿರುಕುಳ ಉಂಟಾಗಿದೆ ಎಂದು ಹೇಮಾ ಮಾಲಿನಿ ಹೇಳಿದ್ದಾರೆ.

ಧರ್ಮೇಂದ್ರ ಅವರಿಗೆ ಅನಾರೋಗ್ಯ ಉಂಟಾಗಿತ್ತು. ಈ ವೇಳೆ ಆಸ್ಪತ್ರೆ ಹೊರಗೆ ಹಾಗೂ ಡಿಯೋಲ್ ಕುಟುಂಬದ ಹಿಂದೆ ಪಾಪರಾಜಿಗಳು ಇದ್ದರು. ಇದು ಸನ್ನಿ ಡಿಯೋಲ್​​ಗೆ ಕೋಪ ತರಿಸಿತ್ತು. ಅವರು ಕೂಗಾಡಿದ್ದರು. ಈ ಬಗ್ಗೆ ಸನ್ನಿ ಡಿಯೋಲ್ ಮಲತಾಯಿ ಹೇಮಾ ಮಾಲಿನಿ ಮಾತನಾಡಿದರು.

‘ಸನ್ನಿ ತುಂಬಾ ಅಸಮಾಧಾನಗೊಂಡಿದ್ದರು ಮತ್ತು ಅವರು ತುಂಬಾ ಕೋಪಗೊಂಡಿದ್ದರು. ಏಕೆಂದರೆ ಆ ಸಮಯದಲ್ಲಿ ನಾವೆಲ್ಲರೂ ತುಂಬಾ ಭಾವನಾತ್ಮಕ ಹಂತದ ಮೂಲಕ ಸಾಗುತ್ತಿದ್ದೆವು. ಆ ಸ್ಥಿತಿಯಲ್ಲಿಯೂ ಸಹ, ಮಾಧ್ಯಮಗಳು ಮತ್ತು ಪಾಪರಾಜಿಗಳು ನಮ್ಮನ್ನು ಮತ್ತು ನಮ್ಮ ಕಾರುಗಳನ್ನು ನಿರಂತರವಾಗಿ ಹಿಂಬಾಲಿಸುತ್ತಿದ್ದರು. ಆ ಸಮಯದಲ್ಲಿ ನಮಗೆ ಸಾಕಷ್ಟು ಕಿರುಕುಳ ನೀಡಲಾಯಿತು’ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಧರ್ಮೇಂದ್ರ ಕುಟುಂಬ ಹೇಮಾ ಮಾಲಿನಿಯನ್ನು ಒಂಟಿ ಮಾಡಿದೆ; ಕೇಳಿ ಬಂತು ಆರೋಪ

‘ಧರ್ಮೇಂದ್ರ ಅವರ ನಿಧನದಿಂದ ಎಲ್ಲರೂ ದುಃಖಿತರಾಗಿದ್ದಾರೆ. ಏಕೆಂದರೆ ನಾವೆಲ್ಲರೂ ಸುಮಾರು ಒಂದು ತಿಂಗಳಿನಿಂದ ಕಷ್ಟಪಡುತ್ತಿದ್ದೆವು. ಆಸ್ಪತ್ರೆಯಲ್ಲಿ ನಡೆಯುತ್ತಿರುವ ಎಲ್ಲವನ್ನೂ ನಿಭಾಯಿಸಲು ನಾವು ಪ್ರಯತ್ನಿಸುತ್ತಿದ್ದೆವು. ನಾವೆಲ್ಲರೂ ಅಲ್ಲಿದ್ದೆವು. ಧರ್ಮೇಂದ್ರ ಅವರನ್ನು ಈ ಮೊದಲು ಹಲವು ಬಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರತಿ ಬಾರಿ ಅವರು ಚೇತರಿಸಿಕೊಂಡು ಮನೆಗೆ ಮರಳುತ್ತಿದ್ದರು. ಅವರು ಈ ಬಾರಿಯೂ ಚೇತರಿಸಿಕೊಳ್ಳುತ್ತಾರೆ ಎಂದು ನಾವು ಆಶಿಸಿದ್ದೆವು’ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗಷ್ಟೇ ಧರ್ಮೇಂದ್ರ ಅವರು ಆಸ್ಪತ್ರೆಗೆ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದರು. ಆ ಬಳಿಕ ಕೆಲವೇ ದಿನಗಳಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ನವೆಂಬರ್ 10 ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದು ತಿಳಿದು ಅಭಿಮಾನಿಗಳಿಗೆ ಆತಂಕ ಆಗಿತ್ತು. ನಂತರ ಅವರನ್ನು ಕುಟುಂಬದವರು ಮನೆಗೆ ಕರೆತಂದಿದ್ದರು.

ಭಾರತೀಯ ಚಿತ್ರರಂಗಕ್ಕೆ ಧರ್ಮೇಂದ್ರ ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ಮಾಪಕನಾಗಿ ಚಿತ್ರರಂಗದಲ್ಲಿ ಅವರು 6 ದಶಕಗಳ ಕಾಲ ಸಕ್ರಿಯರಾಗಿದ್ದರು. ಇಳಿ ವಯಸ್ಸಿನಲ್ಲಿ ಕೂಡ ಅವರು ನಟಿಸುವುದು ನಿಲ್ಲಿಸಿರಲಿಲ್ಲ. ಇತ್ತೀಚಿನ ವರ್ಷಗಳಲ್ಲಿ ಸಹ ಅವರು ಚಿಕ್ಕ-ಪುಟ್ಟ ಪಾತ್ರಗಳನ್ನು ಮಾಡುತ್ತಿದ್ದರು. ಅವರ ನಿಧನದಿಂದ ಕೋಟ್ಯಂತರ ಅಭಿಮಾನಿಗಳಿಗೆ ನೋವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:21 am, Tue, 6 January 26

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?