AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ಮಾಡಿದ ‘ಎಮರ್ಜೆನ್ಸಿ’ ಸಿನಿಮಾ 2 ದಿನ ಓಡಲಿಲ್ಲ: ಖಾರವಾಗಿ ಹೇಳಿದ ‘ಧುರಂಧರ್ 2’ ನಟ

‘ಧುರಂಧರ್ 2’ ಸಿನಿಮಾದ ನಟ ರಾಕೇಶ್ ಬೇಡಿ ಅವರು ‘ಎಮರ್ಜೆನ್ಸಿ’ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಕಂಗನಾ ರಣಾವತ್ ಅವರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ಆ ಸಿನಿಮಾ ಅಟ್ಟರ್ ಫ್ಲಾಪ್ ಆಗಿತ್ತು. ಈಗ ರಾಕೇಶ್ ಬೇಡಿ ಅವರು ಆ ಚಿತ್ರದ ಬಗ್ಗೆ ಮಾತನಾಡಲು ಕಾರಣ ಕೂಡ ಇದೆ. ಆ ಕುರಿತು ಮಾಹಿತಿ ಇಲ್ಲಿದೆ.

ಕಂಗನಾ ಮಾಡಿದ ‘ಎಮರ್ಜೆನ್ಸಿ’ ಸಿನಿಮಾ 2 ದಿನ ಓಡಲಿಲ್ಲ: ಖಾರವಾಗಿ ಹೇಳಿದ ‘ಧುರಂಧರ್ 2’ ನಟ
Emergency Movie Poster, Rakesh Bedi
ಮದನ್​ ಕುಮಾರ್​
|

Updated on: Mar 20, 2026 | 5:12 PM

Share

ಬಾಲಿವುಡ್‌ನ ಹಿರಿಯ ನಟ ರಾಕೇಶ್ ಬೇಡಿ ಅವರು ‘ಧುರಂಧರ್ 2’ (Dhurandhar 2) ಸಿನಿಮಾದಲ್ಲಿ ಮಾಡಿದ ಪಾತ್ರ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಪಾಕಿಸ್ತಾನದ ರಾಜಕಾರಣಿಯಾಗಿ ಅವರು ಕಾಣಿಸಿಕೊಂಡಿದ್ದಾರೆ. ಸದ್ಯ ಈ ಸಿನಿಮಾದ ಯಶಸ್ಸಿನ ಅಲೆಯಲ್ಲಿ ರಾಕೇಶ್ ಬೇಡಿ (Rakesh Bedi) ಅವರು ತೇಲುತ್ತಿದ್ದಾರೆ. ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದರೂ, ಒಂದು ವರ್ಗದ ಜನರು ಇದನ್ನು ಪ್ರೊಪಗಾಂಡಾ ಎಂದು ಕರೆಯುತ್ತಿದ್ದಾರೆ. ಈ ಟೀಕೆಗಳಿಗೆ ರಾಕೇಶ್ ಬೇಡಿ ಅವರು ಖಡಕ್ ಉತ್ತರ ನೀಡಿದ್ದು, ಇದೇ ವೇಳೆ ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿದ ‘ಎಮರ್ಜೆನ್ಸಿ’ (Emergency Movie) ಚಿತ್ರದ ಸೋಲನ್ನು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಕೇಶ್ ಬೇಡಿ, ‘ನಾನು ರಾಜಕೀಯವನ್ನು ನಂಬುವುದಿಲ್ಲ. ಕೇವಲ ಸಿನಿಮಾವನ್ನು ನಂಬುತ್ತೇನೆ. ಪ್ರತಿಯೊಬ್ಬರಿಗೂ ಒಂದು ಚಿತ್ರವನ್ನು ಇಷ್ಟಪಡುವ ಅಥವಾ ಇಷ್ಟಪಡದಿರುವ ಹಕ್ಕಿದೆ. ಆದರೆ ಒಂದು ಚಿತ್ರವನ್ನು ಸರ್ಕಾರದ ಪರ ಅಥವಾ ಸರ್ಕಾರದ ವಿರೋಧಿ ಎಂಬ ಹಣೆಪಟ್ಟಿಯ ಅಡಿಯಲ್ಲಿ ವರ್ಗೀಕರಿಸುವುದು ಸರಿಯಲ್ಲ. ಜನರು ಈ ಚಿತ್ರವನ್ನು ಪ್ರೀತಿಸುತ್ತಿದ್ದಾರೆ ಎನ್ನುವುದೇ ಅಂತಿಮ ತೀರ್ಪು’ ಎಂದು ಹೇಳಿದ್ದಾರೆ.

‘ಧುರಂಧರ್ 2’ ಚಿತ್ರದ ಯಶಸ್ಸಿನ ಬಗ್ಗೆ ಮಾತನಾಡಿದ ರಾಕೇಶ್ ಬೇಡಿ ಅವರು ರಾಜಕೀಯ ವ್ಯಕ್ತಿಗಳ ಬಯೋಪಿಕ್‌ಗಳ ಬಗ್ಗೆ ಪ್ರಸ್ತಾಪಿಸಿದರು. ‘ಇತ್ತೀಚೆಗೆ ಇಂದಿರಾ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಚಿತ್ರಗಳು ಬಂದವು. ಆದರೆ ಆ ಚಿತ್ರಗಳು ಕನಿಷ್ಠ ಎರಡು ದಿನವೂ ಚಿತ್ರಮಂದಿರದಲ್ಲಿ ಓಡಲಿಲ್ಲ. ಆದರೆ ಧುರಂಧರ್ ಚಿತ್ರದ ಬರವಣಿಗೆ ಮತ್ತು ಮೇಕಿಂಗ್ ಅತ್ಯಂತ ಪ್ರಬಲವಾಗಿದೆ. ಇಷ್ಟು ದೊಡ್ಡ ಮಟ್ಟದ ಸಿನಿಮಾವನ್ನು ಪ್ರೇಕ್ಷಕರು ಈ ಹಿಂದೆ ನೋಡಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಕೇಶ್ ಬೇಡಿ ಅವರ ಈ ಮಾತುಗಳು ನೇರವಾಗಿ ನಟಿ ಕಂಗನಾ ರಣಾವತ್ ಅವರಿಗೆ ನೀಡಿದ ಟಾಂಗ್ ಎನ್ನಲಾಗುತ್ತಿದೆ. ಕಂಗನಾ ನಿರ್ದೇಶಿಸಿ, ನಟಿಸಿದ್ದ ‘ಎಮರ್ಜೆನ್ಸಿ’ ಸಿನಿಮಾ 2025ರಲ್ಲಿ ಬಿಡುಗಡೆಯಾಗಿತ್ತು. ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯ ಕುರಿತಾದ ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಭಾರೀ ಹಿನ್ನಡೆ ಅನುಭವಿಸಿತ್ತು. ವಿಶ್ವದಾದ್ಯಂತ ಕೇವಲ 18.40 ಕೋಟಿ ರೂಪಾಯಿ ಗಳಿಸುವಲ್ಲಿ ಮಾತ್ರ ಯಶಸ್ವಿಯಾಗಿತ್ತು.

ಇದನ್ನೂ ಓದಿ: ‘ಧುರಂಧರ್ 2’ ಸಿನಿಮಾ ಒಟಿಟಿ ರಿಲೀಸ್ ಯಾವಾಗ? ಇಲ್ಲಿದೆ ವಿವರ

ಸಾಮಾಜಿಕ ಜಾಲತಾಣಗಳಲ್ಲಿ ‘ಧುರಂಧರ್ 2’ ಚಿತ್ರದ ಕಥಾಹಂದರದ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ, ಬಾಕ್ಸ್ ಆಫೀಸ್‌ನಲ್ಲಿ ಉತ್ತಮವಾಗಿ ಕಮಾಯಿ ಮಾಡುತ್ತಿದೆ. ಗಟ್ಟಿಯಾದ ಚಿತ್ರಕಥೆ ಮತ್ತು ಅದ್ದೂರಿ ಮೇಕಿಂಗ್‌ನಿಂದಾಗಿ ಪ್ರೇಕ್ಷಕರು ಈ ಸಿನಿಮಾವನ್ನು ಇಷ್ಟಪಡುತ್ತಿದ್ದಾರೆ. ಧುರಂಧರ್ ಮೊದಲ ಪಾರ್ಟ್ ಹಿಟ್ ಆಗಿದ್ದರಿಂದ 2ನೇ ಪಾರ್ಟ್ ಹೆಚ್ಚು ಹೈಪ್ ಪಡೆದುಕೊಂಡಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್