AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ಮಾಡಿದ ‘ಎಮರ್ಜೆನ್ಸಿ’ ಸಿನಿಮಾ 2 ದಿನ ಓಡಲಿಲ್ಲ: ಖಾರವಾಗಿ ಹೇಳಿದ ‘ಧುರಂಧರ್ 2’ ನಟ

‘ಧುರಂಧರ್ 2’ ಸಿನಿಮಾದ ನಟ ರಾಕೇಶ್ ಬೇಡಿ ಅವರು ‘ಎಮರ್ಜೆನ್ಸಿ’ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಕಂಗನಾ ರಣಾವತ್ ಅವರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ಆ ಸಿನಿಮಾ ಅಟ್ಟರ್ ಫ್ಲಾಪ್ ಆಗಿತ್ತು. ಈಗ ರಾಕೇಶ್ ಬೇಡಿ ಅವರು ಆ ಚಿತ್ರದ ಬಗ್ಗೆ ಮಾತನಾಡಲು ಕಾರಣ ಕೂಡ ಇದೆ. ಆ ಕುರಿತು ಮಾಹಿತಿ ಇಲ್ಲಿದೆ.

ಕಂಗನಾ ಮಾಡಿದ ‘ಎಮರ್ಜೆನ್ಸಿ’ ಸಿನಿಮಾ 2 ದಿನ ಓಡಲಿಲ್ಲ: ಖಾರವಾಗಿ ಹೇಳಿದ ‘ಧುರಂಧರ್ 2’ ನಟ
Emergency Movie Poster, Rakesh Bedi
ಮದನ್​ ಕುಮಾರ್​
|

Updated on: Mar 20, 2026 | 5:12 PM

Share

ಬಾಲಿವುಡ್‌ನ ಹಿರಿಯ ನಟ ರಾಕೇಶ್ ಬೇಡಿ ಅವರು ‘ಧುರಂಧರ್ 2’ (Dhurandhar 2) ಸಿನಿಮಾದಲ್ಲಿ ಮಾಡಿದ ಪಾತ್ರ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಪಾಕಿಸ್ತಾನದ ರಾಜಕಾರಣಿಯಾಗಿ ಅವರು ಕಾಣಿಸಿಕೊಂಡಿದ್ದಾರೆ. ಸದ್ಯ ಈ ಸಿನಿಮಾದ ಯಶಸ್ಸಿನ ಅಲೆಯಲ್ಲಿ ರಾಕೇಶ್ ಬೇಡಿ (Rakesh Bedi) ಅವರು ತೇಲುತ್ತಿದ್ದಾರೆ. ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದರೂ, ಒಂದು ವರ್ಗದ ಜನರು ಇದನ್ನು ಪ್ರೊಪಗಾಂಡಾ ಎಂದು ಕರೆಯುತ್ತಿದ್ದಾರೆ. ಈ ಟೀಕೆಗಳಿಗೆ ರಾಕೇಶ್ ಬೇಡಿ ಅವರು ಖಡಕ್ ಉತ್ತರ ನೀಡಿದ್ದು, ಇದೇ ವೇಳೆ ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿದ ‘ಎಮರ್ಜೆನ್ಸಿ’ (Emergency Movie) ಚಿತ್ರದ ಸೋಲನ್ನು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಕೇಶ್ ಬೇಡಿ, ‘ನಾನು ರಾಜಕೀಯವನ್ನು ನಂಬುವುದಿಲ್ಲ. ಕೇವಲ ಸಿನಿಮಾವನ್ನು ನಂಬುತ್ತೇನೆ. ಪ್ರತಿಯೊಬ್ಬರಿಗೂ ಒಂದು ಚಿತ್ರವನ್ನು ಇಷ್ಟಪಡುವ ಅಥವಾ ಇಷ್ಟಪಡದಿರುವ ಹಕ್ಕಿದೆ. ಆದರೆ ಒಂದು ಚಿತ್ರವನ್ನು ಸರ್ಕಾರದ ಪರ ಅಥವಾ ಸರ್ಕಾರದ ವಿರೋಧಿ ಎಂಬ ಹಣೆಪಟ್ಟಿಯ ಅಡಿಯಲ್ಲಿ ವರ್ಗೀಕರಿಸುವುದು ಸರಿಯಲ್ಲ. ಜನರು ಈ ಚಿತ್ರವನ್ನು ಪ್ರೀತಿಸುತ್ತಿದ್ದಾರೆ ಎನ್ನುವುದೇ ಅಂತಿಮ ತೀರ್ಪು’ ಎಂದು ಹೇಳಿದ್ದಾರೆ.

‘ಧುರಂಧರ್ 2’ ಚಿತ್ರದ ಯಶಸ್ಸಿನ ಬಗ್ಗೆ ಮಾತನಾಡಿದ ರಾಕೇಶ್ ಬೇಡಿ ಅವರು ರಾಜಕೀಯ ವ್ಯಕ್ತಿಗಳ ಬಯೋಪಿಕ್‌ಗಳ ಬಗ್ಗೆ ಪ್ರಸ್ತಾಪಿಸಿದರು. ‘ಇತ್ತೀಚೆಗೆ ಇಂದಿರಾ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಚಿತ್ರಗಳು ಬಂದವು. ಆದರೆ ಆ ಚಿತ್ರಗಳು ಕನಿಷ್ಠ ಎರಡು ದಿನವೂ ಚಿತ್ರಮಂದಿರದಲ್ಲಿ ಓಡಲಿಲ್ಲ. ಆದರೆ ಧುರಂಧರ್ ಚಿತ್ರದ ಬರವಣಿಗೆ ಮತ್ತು ಮೇಕಿಂಗ್ ಅತ್ಯಂತ ಪ್ರಬಲವಾಗಿದೆ. ಇಷ್ಟು ದೊಡ್ಡ ಮಟ್ಟದ ಸಿನಿಮಾವನ್ನು ಪ್ರೇಕ್ಷಕರು ಈ ಹಿಂದೆ ನೋಡಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಕೇಶ್ ಬೇಡಿ ಅವರ ಈ ಮಾತುಗಳು ನೇರವಾಗಿ ನಟಿ ಕಂಗನಾ ರಣಾವತ್ ಅವರಿಗೆ ನೀಡಿದ ಟಾಂಗ್ ಎನ್ನಲಾಗುತ್ತಿದೆ. ಕಂಗನಾ ನಿರ್ದೇಶಿಸಿ, ನಟಿಸಿದ್ದ ‘ಎಮರ್ಜೆನ್ಸಿ’ ಸಿನಿಮಾ 2025ರಲ್ಲಿ ಬಿಡುಗಡೆಯಾಗಿತ್ತು. ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯ ಕುರಿತಾದ ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಭಾರೀ ಹಿನ್ನಡೆ ಅನುಭವಿಸಿತ್ತು. ವಿಶ್ವದಾದ್ಯಂತ ಕೇವಲ 18.40 ಕೋಟಿ ರೂಪಾಯಿ ಗಳಿಸುವಲ್ಲಿ ಮಾತ್ರ ಯಶಸ್ವಿಯಾಗಿತ್ತು.

ಇದನ್ನೂ ಓದಿ: ‘ಧುರಂಧರ್ 2’ ಸಿನಿಮಾ ಒಟಿಟಿ ರಿಲೀಸ್ ಯಾವಾಗ? ಇಲ್ಲಿದೆ ವಿವರ

ಸಾಮಾಜಿಕ ಜಾಲತಾಣಗಳಲ್ಲಿ ‘ಧುರಂಧರ್ 2’ ಚಿತ್ರದ ಕಥಾಹಂದರದ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ, ಬಾಕ್ಸ್ ಆಫೀಸ್‌ನಲ್ಲಿ ಉತ್ತಮವಾಗಿ ಕಮಾಯಿ ಮಾಡುತ್ತಿದೆ. ಗಟ್ಟಿಯಾದ ಚಿತ್ರಕಥೆ ಮತ್ತು ಅದ್ದೂರಿ ಮೇಕಿಂಗ್‌ನಿಂದಾಗಿ ಪ್ರೇಕ್ಷಕರು ಈ ಸಿನಿಮಾವನ್ನು ಇಷ್ಟಪಡುತ್ತಿದ್ದಾರೆ. ಧುರಂಧರ್ ಮೊದಲ ಪಾರ್ಟ್ ಹಿಟ್ ಆಗಿದ್ದರಿಂದ 2ನೇ ಪಾರ್ಟ್ ಹೆಚ್ಚು ಹೈಪ್ ಪಡೆದುಕೊಂಡಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ