AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌: 24 ಗಂಟೆಯಲ್ಲಿ 8 ಕೋಟಿ ರೂ. ಬೆಲೆಯ ಟಿಕೆಟ್ ಸೇಲ್

ಮಾರ್ಚ್ 18ರಂದು ‘ಧುರಂಧರ್ 2’ ಸಿನಿಮಾದ ಪ್ರೇಯ್ಡ್ ಪ್ರೀಮಿಯರ್ ಶೋಗಳು ನಡೆಯಲಿದೆ. ಅಡ್ವಾನ್ಸ್ ಟಿಕೆಟ್ ಬುಕಿಂಗ್ ಶುರುವಾಗಿದ್ದು, ಜನರು ಮುಗಿಬಿದ್ದು ಟಿಕೆಟ್ ಖರೀದಿ ಮಾಡುತ್ತಿದ್ದಾರೆ. ಕೇವಲ 24 ಗಂಟೆಯಲ್ಲಿ ಪೇಯ್ಡ್ ಪ್ರೀಮಿಯರ್ ಟಿಕೆಟ್ ಬುಕಿಂಗ್​​ನಿಂದ 8 ಕೋಟಿ ರೂ. ಕಲೆಕ್ಷನ್ ಆಗಿದೆ.

‘ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌: 24 ಗಂಟೆಯಲ್ಲಿ 8 ಕೋಟಿ ರೂ. ಬೆಲೆಯ ಟಿಕೆಟ್ ಸೇಲ್
Dhurandhar 2
ಮದನ್​ ಕುಮಾರ್​
|

Updated on: Mar 08, 2026 | 9:32 AM

Share

ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧಾರ್ ಕಾಂಬಿನೇಶನ್‌ನ ಬಹುನಿರೀಕ್ಷಿತ ‘ಧುರಂಧರ್ 2’ (Dhurandhar: The Revenge) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಲು ಸಿದ್ಧವಾಗಿದೆ. ಮಾರ್ಚ್ 19ರಂದು ಚಿತ್ರ ವಿಶ್ವದಾದ್ಯಂತ ಬಿಡುಗಡೆ ಆಗಲಿದ್ದು, ಮಾರ್ಚ್ 18ರಂದೇ ಪೇಯ್ಡ್ ಪ್ರೀಮಿಯರ್ ಶೋಗಳು (Dhurandhar 2 Paid Premiere) ನಡೆಯಲಿವೆ. ಶನಿವಾರ (ಮಾರ್ಚ್ 7) ಚಿತ್ರದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಆರಂಭವಾದ ಮುಂಗಡ ಟಿಕೆಟ್ ಬುಕ್ಕಿಂಗ್‌ನಲ್ಲಿ ಈ ಸಿನಿಮಾ ಅಬ್ಬರದ ಸಾಧನೆ ಮಾಡಿದೆ. ಬುಕ್ಕಿಂಗ್ ಆರಂಭವಾದ ಕೇವಲ 24 ಗಂಟೆಗಳಲ್ಲಿ 87,000 ಟಿಕೆಟ್‌ಗಳು ಮಾರಾಟವಾಗಿವೆ.

ಪ್ರಮುಖ ಟಿಕೆಟ್ ಬುಕಿಂಗ್ ಪ್ಲಾಟ್‌ಫಾರ್ಮ್ ಆದ ‘ಬುಕ್‌ ಮೈ ಶೋ’ ಒಂದರಲ್ಲೇ 87.81 ಸಾವಿರ ಟಿಕೆಟ್‌ಗಳು ಮಾರಾಟ ಆಗಿರುವುದು ಚಿತ್ರದ ಮೇಲಿರುವ ನಿರೀಕ್ಷೆಯನ್ನು ತೋರಿಸುತ್ತದೆ. ಟ್ರೇಡ್ ವಿಶ್ಲೇಷಕ ತರಣ್ ಆದರ್ಶ್ ಅವರ ಪ್ರಕಾರ, ಪ್ರತಿ ಗಂಟೆಗೆ ಸರಾಸರಿ 7,500 ಟಿಕೆಟ್‌ಗಳು ಮಾರಾಟವಾಗುತ್ತಿವೆ. ಇದರಿಂದಾಗಿ ಬುಕಿಂಗ್ ಶುರುವಾದ ಮೊದಲ ಎರಡು ಗಂಟೆಯಲ್ಲೇ 4 ಕೋಟಿ ಕಲೆಕ್ಷನ್ ಆಗಿದೆ.

Sacnilk ವರದಿಯ ಪ್ರಕಾರ, ಬುಕ್ಕಿಂಗ್ ಆರಂಭವಾದ ಕೇವಲ ಎರಡು ಗಂಟೆಗಳಲ್ಲಿ ಚಿತ್ರವು ವಿಶ್ವದಾದ್ಯಂತ 4 ಕೋಟಿ ರೂಪಾಯಿ ಗಳಿಸಿದೆ. ಇದರಲ್ಲಿ ಪಿವಿಆರ್, ಐನಾಕ್ಸ್ ಮತ್ತು ಸಿನಿಪೊಲಿಸ್‌ನಂತಹ ದೊಡ್ಡ ಮಲ್ಟಿಪ್ಲೆಕ್ಸ್ಗಳಿಂದಲೇ 2.50 ಕೋಟಿ ರೂಪಾಯಿ ಹರಿದುಬಂದಿದೆ. ದೆಹಲಿ-ಎನ್‌ಸಿಆರ್‌ನಂತಹ ನಗರಗಳಲ್ಲಿ ‘ಸೂಪರ್ ಬ್ಲಾಕ್‌ಬಸ್ಟರ್ ಪ್ಲಸ್’ ಎಂಬ ಹೊಸ ಪ್ರೀಮಿಯಂ ಕೆಟಗರಿ ಪರಿಚಯಿಸಲಾಗಿದ್ದು, ಅಲ್ಲಿ ಟಿಕೆಟ್ ದರ 2,500 ರೂಪಾಯಿ ವರೆಗೂ ಇದೆ.

ಮಾರ್ಚ್ 18ರಂದು ನಡೆಯಲಿರುವ ಪೇಯ್ಡ್ ಪ್ರೀಮಿಯರ್ ಶೋಗಳಿಂದ ಈಗಾಗಲೇ ಚಿತ್ರವು 8.06 ಕೋಟಿ ರೂಪಾಯಿ ಸಂಗ್ರಹಿಸಿದೆ. ಹಿಂದಿ ವರ್ಷನ್​ನಿಂದ 7 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ. ತೆಲುಗಿನಿಂದ 5 ಲಕ್ಷ ರೂ., ತಮಿಳಿನಿಂದ 4 ಲಕ್ಷ ರೂ. ಹಾಗೂ ಕನ್ನಡದಿಂದ 28,000 ರೂಪಾಯಿ ಕಲೆಕ್ಷನ್ ಆಗಿದೆ. ಇದು ಪೇಯ್ಡ್ ಪ್ರೀಮಿಯರ್​ಗೆ ಈವರೆಗೂ ಆಗಿರುವ ಕಲೆಕ್ಷನ್ ಲೆಕ್ಕ ಮಾತ್ರ. ಮೊದಲ ದಿನದ ಕಲೆಕ್ಷನ್ ಇನ್ನೂ ಜಾಸ್ತಿ ಆಗಲಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರಕ್ಕೆ ಮಾತ್ರ ಯುದ್ಧದ ಬಿಸಿ: ‘ಧುರಂಧರ್ 2’ ಸಿನಿಮಾಗೆ ಚಿಂತೆ ಇಲ್ಲ ಯಾಕೆ?

‘ಧುರಂಧರ್’ ಮೊದಲ ಭಾಗವು ಭಾರತದಲ್ಲಿ 28 ಕೋಟಿ ರೂಪಾಯಿಗಳ ಭರ್ಜರಿ ಓಪನಿಂಗ್ ಪಡೆದಿತ್ತು ಮತ್ತು ಒಟ್ಟಾರೆ ವಿಶ್ವದಾದ್ಯಂತ 1303.35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಇತಿಹಾಸ ನಿರ್ಮಿಸಿತ್ತು. ಈಗ ಎರಡನೇ ಭಾಗವು ಆ ಎಲ್ಲಾ ದಾಖಲೆಗಳನ್ನು ಅಳಿಸಿಹಾಕುವ ಮುನ್ಸೂಚನೆ ನೀಡಿದೆ. ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಸಂಜಯ್ ದತ್, ಅರ್ಜುನ್ ರಾಮ್​ಪಾಲ್, ಸಾರಾ ಅರ್ಜುನ್ ಮತ್ತು ರಾಕೇಶ್ ಬೇಡಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು