AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಸುನಾಮಿ: 1 ಟಿಕೆಟ್ ಬೆಲೆ 3100 ರೂಪಾಯಿ

ಮಾರ್ಚ್ 18ರ ಸಂಜೆಯಿಂದಲೇ ‘ಧುರಂಧರ್ 2’ ಸಿನಿಮಾದ ಪ್ರಿವ್ಯೂ ಶೋಗಳು ಆರಂಭವಾಗಲಿದೆ. ಅಡ್ವಾನ್ಸ್ ಟಿಕೆಟ್ ಬುಕಿಂಗ್​ನಿಂದ 15 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ. ಟಿಕೆಟ್ ಬೆಲೆ ಗಗನಕ್ಕೆ ಏರಿದ್ದರೂ ಕೂಡ ಜನರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ಇದರಿಂದ ಬಾಕ್ಸ್ ಆಫೀಸ್​​ನಲ್ಲಿ ಹಣದ ಹೊಳೆ ಹರಿಯುತ್ತಿದೆ.

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಸುನಾಮಿ: 1 ಟಿಕೆಟ್ ಬೆಲೆ 3100 ರೂಪಾಯಿ
Ranveer Singh
ಮದನ್​ ಕುಮಾರ್​
|

Updated on: Mar 10, 2026 | 9:01 PM

Share

ಬಾಲಿವುಡ್‌ನ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ‘ಧುರಂಧರ್: ದಿ ರಿವೇಂಜ್’ (Dhurandhar 2) ಬಿಡುಗಡೆಗೆ ಕೆಲವೇ ದಿನಗಳ ಬಾಕಿ ಇರುವಾಗ ದೇಶಾದ್ಯಂತ ಟಿಕೆಟ್ ಬುಕಿಂಗ್‌ನಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಮಾರ್ಚ್ 18ರಂದು ಆಯ್ದ ಚಿತ್ರಮಂದಿರಗಳಲ್ಲಿ ಪೇಯ್ಡ್ ಪ್ರಿವ್ಯೂ (Dhurandhar 2 Paid Previews) ಆರಂಭವಾಗಲಿದ್ದು, ಟಿಕೆಟ್ ಬೆಲೆಗಳು ಗಗನಕ್ಕೇರಿದೆ. ಹಾಗಿದ್ದರೂ ಕೂಡ ಪ್ರೇಕ್ಷಕರು ಮುಗಿಬಿದ್ದು ಬುಕ್ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಈ ಸಿನಿಮಾದ ಟಿಕೆಟ್​ಗಳು ಬರೋಬ್ಬರಿ 3100 ರೂಪಾಯಿಗೆ ಮಾರಾಟ ಆಗಿವೆ. ರಣವೀರ್ ಸಿಂಗ್ ನಟನೆಯ ಈ ಚಿತ್ರದ ಮೇಲೆ ಜನರಿಗೆ ಈ ಪರಿ ಕ್ರೇಜ್ ಇದೆ.

ಮುಂಬೈನ ಬೊರಿವಲಿಯ ಐನಾಕ್ಸ್ ಮೆಗಾಪ್ಲೆಕ್ಸ್‌ನಲ್ಲಿ ರಿಕ್ಲೈನರ್ ಸೀಟುಗಳ ಬೆಲೆ ಬರೋಬ್ಬರಿ 3100 ರೂಪಾಯಿ ತಲುಪಿದೆ. ದೆಹಲಿಯ ಪಿವಿಆರ್ ಸೆಲೆಕ್ಟ್ ಸಿಟಿ ವಾಕ್‌ನಲ್ಲಿ 2400 ರೂಪಾಯಿವರೆಗೆ ದರವಿದೆ. ಇನ್ನು, ಮೆಟ್ರೋ ನಗರಗಳಲ್ಲಿ ಸಾಮಾನ್ಯ ಸೀಟುಗಳ ಬೆಲೆಯೇ 600ರಿಂದ 900 ರೂಪಾಯಿ ಆಸುಪಾಸಿನಲ್ಲಿದೆ. ಐಮ್ಯಾಕ್ಸ್ ಶೋಗಳಿಗೆ 1000 ರೂಪಾಯಿಗೂ ಅಧಿಕ ದರವಿದ್ದರೂ ಬಹುತೇಕ ಶೋಗಳು ಈಗಾಗಲೇ ಹೌಸ್‌ಫುಲ್ ಆಗಿವೆ.

ಕೇವಲ ಹಿಂದಿ ಮಾತ್ರವಲ್ಲದೆ, ದಕ್ಷಿಣ ಭಾರತದ ಭಾಷೆಗಳಲ್ಲೂ ಈ ಚಿತ್ರಕ್ಕೆ ಭಾರಿ ಬೇಡಿಕೆ ಇದೆ. ಕನ್ನಡ ಮತ್ತು ತೆಲುಗಿನಲ್ಲಿ ಕೂಡ ‘ಧುರಂಧರ್ 2’ ಸಿನಿಮಾದ ಟಿಕೆಟ್​ಗಳು 400 ರೂಪಾಯಿ ಆಸುಪಾಸಿನಲ್ಲಿ ಮಾರಾಟ ಆಗುತ್ತಿವೆ. ಬೆಂಗಳೂರು, ಹೈದರಾಬಾದ್ ಮುಂತಾದ ಕಡೆಗಳಲ್ಲಿ ಈ ಚಿತ್ರದ ಹಿಂದಿ ವರ್ಷನ್ ಟಿಕೆಟ್​ಗಳು ಸಾವಿರ ರೂಪಾಯಿಗೂ ಅಧಿಕ ಬೆಲೆಗೆ ಮಾರಾಟ ಆಗಿವೆ. ತಮಿಳುನಾಡಿನಲ್ಲಿ ಬೆಲೆ ಮಿತಿ ಇರುವ ಕಾರಣ 166 ರೂಪಾಯಿ ನಿಗದಿ ಆಗಿದೆ.

ಅಡ್ವಾನ್ಸ್ ಬುಕಿಂಗ್ ಆರಂಭವಾದ ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾದ ಸುಮಾರು 3 ಲಕ್ಷ ಟಿಕೆಟ್‌ಗಳನ್ನು ಮಾರಾಟ ಆಗಿವೆ. ಈ ಮೂಲಕ ಬಿಡುಗಡೆಗೂ ಮುನ್ನವೇ ಭಾರತದಲ್ಲಿ 15 ಕೋಟಿಗೂ ಅಧಿಕ ಮೊತ್ತವನ್ನು ಬಾಚಿಕೊಂಡಿದೆ. ಇದು ಬಾಲಿವುಡ್ ಚಿತ್ರವೊಂದರ ಪ್ರೀಮಿಯರ್ ಶೋಗೆ ಸಿಕ್ಕಿರುವ ಅತಿ ದೊಡ್ಡ ಮೊತ್ತದ ಕಲೆಕ್ಷನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದನ್ನೂ ಓದಿ: ‘ಧುರಂಧರ್ 2’ ಕನ್ನಡ ಟ್ರೇಲರ್: ಕರ್ನಾಟಕದಲ್ಲಿ ಮೋಡಿ ಮಾಡುತ್ತಾ ರಣವೀರ್ ಸಿಂಗ್ ಸಿನಿಮಾ?

ಆದಿತ್ಯ ಧಾರ್ ನಿರ್ದೇಶನದ ಈ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಪಾಕಿಸ್ತಾನದಲ್ಲಿರುವ ಭಾರತೀಯ ಗೂಢಚಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಆರ್‌ ಮಾಧವನ್, ಅರ್ಜುನ್ ರಾಮ್​ಪಾಲ್, ಸಂಜಯ್ ದತ್, ಸಾರಾ ಅರ್ಜುನ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರದ ಮೊದಲ ಭಾಗ ವಿಶ್ವದಾದ್ಯಂತ ಸಾವಿರಾರು ಕೋಟಿ ರೂಪಾಯಿ ಗಳಿಸಿ ದಾಖಲೆ ಬರೆದಿತ್ತು. ಈಗ ಎರಡನೇ ಭಾಗವೂ ಅದೇ ಹಾದಿಯಲ್ಲಿ ಸಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ