AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನವೇ 250 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಧುರಂಧರ್ 2’ ಸಿನಿಮಾ

‘ಧುರಂಧರ್ 2’ ಸಿನಿಮಾ ದಾಖಲೆಗಳ ಮೇಲೆ ದಾಖಲೆ ಬರೆದಿದ್ದು, ಮೊದಲ ದಿನವೇ ಅದ್ಭುತ ಯಶಸ್ಸು ಕಂಡಿದೆ. ಒಟ್ಟು 250 ಕೋಟಿ ಸನಿಹ ತಲುಪಿದ ಗಳಿಕೆ ಚಿತ್ರದ ಅಬ್ಬರಕ್ಕೆ ಸಾಕ್ಷಿ. ರಣವೀರ್ ಸಿಂಗ್ ನಟನೆಯ ಈ ಸಿನಿಮಾ ಭಾರತ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗುವತ್ತ ಹೆಜ್ಜೆ ಹಾಕಿದೆ. ಇದರ ಒಟ್ಟಾರೆ ಕಲೆಕ್ಷನ್ 2000 ಕೋಟಿ ರೂಪಾಯಿ ಕ್ಲಬ್ ಸೇರುವ ನಿರೀಕ್ಷೆ ಇದೆ.

ಮೊದಲ ದಿನವೇ 250 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಧುರಂಧರ್ 2’ ಸಿನಿಮಾ
ಧುರಂಧರ್ 2
ರಾಜೇಶ್ ದುಗ್ಗುಮನೆ
|

Updated on: Mar 20, 2026 | 7:01 AM

Share

‘ಧುರಂಧರ್ 2’ ಸಿನಿಮಾ (Dhurandhar 2 Movie) ದಾಖಲೆಯ ಮೇಲೆ ದಾಖಲೆ ಬರೆದಿದೆ. ಮೊದಲ ದಿನವೇ ಚಿತ್ರ ಅದ್ಭುತ ಯಶಸ್ಸು ಕಂಡಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 250 ಕೋಟಿ ರೂಪಾಯಿ ಸಮೀಪಿಸಿದೆ. ಇದು ಚಿತ್ರದ ಅಬ್ಬರವನ್ನು ತೋರಿಸುತ್ತದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟಾಗಲಿದೆ ಎಂಬ ಕುತೂಹಲ ಮೂಡಿದೆ. ಭಾರತ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಆಗಿ ಇದು ಬದಲಾಗಲಿದೆಯೇ ಎಂಬ ಕುತೂಹಲ ಮೂಡಿದೆ.

‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದುದ್ದಕ್ಕೂ ಅವರೇ ಹೈಲೈಟ್ ಆಗುತ್ತಾರೆ. ಸಂಜಯ್ ದತ್ ಅರ್ಜುನ್ ರಾಮ್​​ಪಾಲ್ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಗಳಿಕ ವಿವರ ಸಿಕ್ಕಿದೆ.

‘ಧುರಂಧರ್ 2’ ಸಿನಿಮಾ ಪ್ರೀಮಿಯರ್ ಹಾಗೂ ಮೊದಲ ದಿನದ ಕಲೆಕ್ಷನ್ ಸೇರಿದರೆ 236 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಇದರಲ್ಲಿ ಭಾರತದಿಂದ 172 ಕೋಟಿ ರೂಪಾಯಿ ಹಾಗೂ ವಿದೇಶದಿಂದ 64 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಭಾರತದ ನೆಟ್ ಕಲೆಕ್ಷನ್ 140 ಕೋಟಿ ರೂಪಾಯಿ ಇದೆ ಎಂದು sacnilk ವರದಿ ಮಾಡಿದೆ.

ಈ ಸಿನಿಮಾ ಮಾರ್ಚ್ 19ರಂದು ಸಿನಿಮಾ ಹಿಂದಿಯಲ್ಲಿ 103 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಅತಿ ದೊಡ್ಡ ಓಪನಿಂಗ್ ಪಡೆದ ಹಿಂದಿ ಚಿತ್ರ ಎಂಬ ಹೆಗ್ಗಳಿಕೆ ಈ ಸಿನಿಮಾಗೆ ಬಂದಿದೆ. ‘ಧುರಂಧರ್ 2’ ಪ್ರೀಮಿಯರ್ ಶೋನಿಂದ 40 ಕೋಟಿ ರೂಪಾಯಿ ಗಳಿಸುತ್ತು. ಈ ಸಿನಿಮಾ ಅನಾಯಾಸವಾಗಿ 2000 ಕೋಟಿ ರೂಪಾಯಿ ಕ್ಲಬ್ ಸೇರುವ ಎಲ್ಲಾ ಲಲಕ್ಷಣ ಗೋಚರವಾಗಿದೆ. ಈ ಸಿನಿಮಾಗೆ ಬರೋಬ್ಬರಿ 34 ಸಾವಿರ ಶೋಗಳು ಸಿಕ್ಕಿದ್ದವು ಎಂಬುದು ವಿಶೇಷ.

ಇದನ್ನೂ ಓದಿ: ಅಬ್ಬಬ್ಬಾ, ಪೇಯ್ಡ್​ ಪ್ರೀಮೀಯರ್​ನಿಂದ ‘ಧುರಂಧರ್ 2’ ಸಿನಿಮಾ ಗಳಿಸಿದ್ದು ಇಷ್ಟೊಂದಾ?

‘ಧುರಂಧರ್’ ಸಿನಿಮಾ ಹಲವು ದಾಖಲೆಗಳನ್ನು ಮಾಡಿತ್ತು. ಇದು ಸೀಕ್ವಲ್​​ಗೆ ಸಹಕಾರಿ ಆಗುತ್ತಿದೆ. ಈ ಕಾರಣದಿಂದಲೇ ಚಿತ್ರದ ಕಲೆಕ್ಷನ್ ಜೋರಾಗಿದೆ. ಈ ಚಿತ್ರದ ಮೂಲಕ ನಿರ್ಮಾಪಕರು ದೊಡ್ಡ ಮಟ್ಟದಲ್ಲಿ ಲಾಭ ಮಾಡುವ ಸೂಚನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ