AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಭಾನುವಾರವೂ ‘ಧುರಂಧರ್ 2’ ಅಬ್ಬರ; ಭಾರತದಲ್ಲೇ ಸಾವಿರ ಕೋಟಿ ಕಲೆಕ್ಷನ್

‘ಧುರಂಧರ್ 2’ ಸಿನಿಮಾ ಭಾರತದಲ್ಲಿ 11 ದಿನಗಳಲ್ಲಿ ₹1011 ಕೋಟಿ ಗಳಿಸಿ, ವಿಶ್ವದಾದ್ಯಂತ ₹1361 ಕೋಟಿ ತಲುಪಿ ಅಬ್ಬರಿಸಿದೆ. ಎರಡನೇ ಭಾನುವಾರ 68 ಕೋಟಿ ರೂಪಾಯಿ ಕಲೆಕ್ಷನ್ ಮೂಲಕ ‘KGF 2’ ಲೈಫ್ ಟೈಮ್ ದಾಖಲೆಯನ್ನು ಮುರಿದಿದೆ. ರಣವೀರ್ ಸಿಂಗ್ ನಟನೆ ಮತ್ತು ಆದಿತ್ಯ ಧಾರ್ ನಿರ್ದೇಶನದಿಂದ ಸೃಷ್ಟಿಯಾದ ಈ ಇತಿಹಾಸ, ಭಾರತದಲ್ಲಿ 1500 ಕೋಟಿ ತಲುಪುವ ಸಾಧ್ಯತೆ ಇದೆ.

ಎರಡನೇ ಭಾನುವಾರವೂ ‘ಧುರಂಧರ್ 2’ ಅಬ್ಬರ; ಭಾರತದಲ್ಲೇ ಸಾವಿರ ಕೋಟಿ ಕಲೆಕ್ಷನ್
ಧುರಂಧರ್ 2
ರಾಜೇಶ್ ದುಗ್ಗುಮನೆ
|

Updated on: Mar 30, 2026 | 6:59 AM

Share

‘ಧುರಂಧರ್ 2’ ಸಿನಿಮಾ (Dhurandhar 2) ಎರಡನೇ ಭಾನುವಾರವೂ ತನ್ನ ಅಬ್ಬರವನ್ನು ಮುಂದುವರಿಸಿದೆ. ಈ ಚಿತ್ರ ಮೊದಲ ವಾರದಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಅದನ್ನು ಎರಡನೇ ವಾರವೂ ಮುಂದುವರಿಸಿದೆ. ಎರಡನೇ ಭಾನುವಾರ ಸಿನಿಮಾ 68 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ನಿಜಕ್ಕೂ ದೊಡ್ಡ ಕಲೆಕ್ಷನ್ ಎಂದು ಬಾಕ್ಸ್ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವರ್ಷ ಡಿಸೆಂಬರ್ 5ರಂದು ಬಂದ ‘ಧುರಂಧರ್’ ಸಿನಿಮಾ ಹಿಟ್ ಆದ ಹಿನ್ನೆಲೆಯಲ್ಲಿ ‘ಧುರಂಧರ್ 2’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆಯನ್ನು ನಿರ್ದೇಶಕ ಆದಿತ್ಯ ಧಾರ್ ಅವರು ಹುಸಿ ಮಾಡಿಲ್ಲ. ಅವರು ಸಿನಿಮಾನ ಜನರು ಗೆಲ್ಲಿಸಿದ್ದಾರೆ. ರಣವೀರ್ ಸಿಂಗ್ ಅವರ ಅದ್ಭುತ ನಟನೆ ಕೂಡ ಗಮನ ಸೆಳೆದಿದೆ. ಇದು ಸಿನಿಮಾ ಗೆಲುವಿಗೆ ಸಹಕಾರಿ ಆಗಿದೆ.

‘ಧುರಂಧರ್ 2’ ಸಿನಿಮಾ 11ನೇ ದಿನಕ್ಕೆ ಭಾರತದಲ್ಲಿ 1,011 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಈ ಚಿತ್ರದ ನೆಟ್ ಕಲೆಕ್ಷನ್ 846 ಕೋಟಿ ರೂಪಾಯಿ ಆಗಿದೆ. ಈ ಸಿನಿಮಾದ ವಿಶ್ವ ಮಟ್ಟದ ಗ್ರಾಸ್ ಕಲೆಕ್ಷನ್ 1,361 ಕೋಟಿ ರೂಪಾಯಿ ಆಗಿದೆ. ‘ಧುರಂಧರ್ 2’ ಸಿನಿಮಾ ಈಗಾಗಲೇ ‘ಕೆಜಿಎಫ್ 2’ ದಾಖಲೆಯನ್ನು ಮುರಿದಿದೆ. ‘ಕೆಜಿಎಫ್ 2’ ಚಿತ್ರದ ಲೈಫ್​ ಟೈಮ್ ಕಲೆಕ್ಷನ್ 1,250 ಕೋಟಿ ರೂಪಾಯಿ ಆಸುಪಾಸಿನಲ್ಲಿದೆ. ಅದನ್ನು ಕೇವಲ 11 ದಿನಕ್ಕೆ ‘ಧುರಂಧರ್ 2’ ಸಿನಿಮಾ ಮುರಿದು ಹಾಕಿದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಬಗ್ಗೆಯೂ ಸಾಕಷ್ಟು ಕುತೂಹಲ ಮೂಡಿದೆ. ಈ ಚಿತ್ರ ಭಾರತದಲ್ಲೇ 1500 ಕೋಟಿ ರೂಪಾಯಿ ಗಳಿಸುವ ಸಾಧ್ಯತೆ ಇದೆ. ಹಾಗಾದಲ್ಲಿ ಹೊಸ ಇತಿಹಾಸ ಸೃಷ್ಟಿ ಆಗಲಿದೆ.

ಇದನ್ನೂ ಓದಿ: ‘ಧುರಂಧರ್ 2’ ಎದುರು ತೆರೆಕಂಡರೂ ಸೂಪರ್ ಹಿಟ್ ಆದ ‘ಲವ್ ಮಾಕ್ಟೇಲ್ 3’

‘ಧುರಂಧರ್ 2’ ಚಿತ್ರವನ್ನು ಆದಿತ್ಯ ಧಾರ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ರಣವೀರ್ ಸಿಂಗ್ ಹೀರೋ. ಸಾರಾ ಅರ್ಜುನ್ ನಾಯಕಿ. ಇನ್ನೂ ಹಲವು ಸೆಲೆಬ್ರಿಟಿಗಳು ಚಿತ್ರದ ಭಾಗ ಆಗಿದ್ದಾರೆ. ಈ ಚಿತ್ರವನ್ನು ಕೆಲವರು ಪ್ರೊಪೊಗಾಂಡ ಸಿನಿಮಾ ಎಂದು ಟೀಕೆ ಮಾಡಿದ್ದೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!