AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ ಬೆನ್ನು ತಟ್ಟಿದ್ದಕ್ಕೆ ಖುಷಿಯಾದ ‘ಧುರಂಧರ್ 2’ ನಿರ್ದೇಶಕ ಆದಿತ್ಯ ಧರ್

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ ಅವರಿಗೆ ‘ಧುರಂಧರ್: ದಿ ರಿವೆಂಜ್’ ಸಿನಿಮಾ ಬಹಳ ಇಷ್ಟ ಆಗಿದೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಈ ಸಿನಿಮಾಗೆ ಭರಪೂರ ಮೆಚ್ಚುಗೆ ಸೂಚಿಸಿದ್ದಾರೆ. ಶಿವಣ್ಣ ಮೆಚ್ಚಿದ್ದಕ್ಕೆ ನಿರ್ದೇಶಕ ಆದಿತ್ಯ ಧರ್ ಅವರಿಗೆ ತುಂಬಾ ಖುಷಿಯಾಗಿದೆ. ಅವರು ಪ್ರತಿಕ್ರಿಯಿಸಿದ್ದಾರೆ.

ಶಿವಣ್ಣ ಬೆನ್ನು ತಟ್ಟಿದ್ದಕ್ಕೆ ಖುಷಿಯಾದ ‘ಧುರಂಧರ್ 2’ ನಿರ್ದೇಶಕ ಆದಿತ್ಯ ಧರ್
Aditya Dhar, Shiva Rajkumar
ಮದನ್​ ಕುಮಾರ್​
|

Updated on: Mar 26, 2026 | 3:22 PM

Share

‘ಧುರಂಧರ್ 2’ (Dhurandhar 2) ಸಿನಿಮಾ ವಿಶ್ವಾದ್ಯಂತ ಸಾವಿರಾರು ಕೋಟಿ ರೂಪಾಯಿ ಗಳಿಸಿ ಮುನ್ನುಗ್ಗುತ್ತಿದೆ. ಈ ಸಿನಿಮಾ ನೋಡಿರುವ ಶಿವರಾಜ್​ಕುಮಾರ್ (Shivarajkumar) ಅವರು ಮೆಚ್ಚಿಕೊಂಡಿದ್ದಾರೆ. ಎಕ್ಸ್ (ಟ್ವಿಟರ್) ಮೂಲಕ ಶಿವಣ್ಣ ಅವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ರಣವೀರ್ ಸಿಂಗ್ ಅವರ ನಟನೆ, ಆದಿತ್ಯ ಧರ್ ಅವರ ನಿರ್ದೇಶನಕ್ಕೆ ಶಿವಣ್ಣ ಭೇಷ್ ಎಂದಿದ್ದಾರೆ. ಇದರಿಂದಾಗಿ ‘ಧುರಂಧರ್ 2’ ಚಿತ್ರತಂಡಕ್ಕೆ ಬಲ ಹೆಚ್ಚಿದಂತಾಗಿದೆ. ಶಿವರಾಜ್​ಕುಮಾರ್ ಅವರ ವಿಮರ್ಶೆಗೆ ಆದಿತ್ಯ ಧರ್ (Aditya Dhar) ಪ್ರತಿಕ್ರಿಯೆ ನೀಡಿದ್ದಾರೆ.

‘ನಿಮ್ಮ ಈ ಮಾತುಗಳಿಗೆ ಧನ್ಯವಾದಗಳು ಸರ್. ನಿಮ್ಮಿಂದ ಈ ಮೆಚ್ಚುಗೆ ಬರುತ್ತಿರುವುದು ನಿಜಕ್ಕೂ ಬಹಳಷ್ಟು ಅರ್ಥಪೂರ್ಣವಾಗಿದೆ. ಪ್ರಾಮಾಣಿಕತೆ ಮತ್ತು ದೃಢನಿಶ್ಚಯದಿಂದ ಕಥೆಗಳನ್ನು ಹೇಳುವುದನ್ನು ಮುಂದುವರಿಸಲು ನಿಮ್ಮ ಬೆಂಬಲವು ನಮಗೆ ಪ್ರೋತ್ಸಾಹ ನೀಡುತ್ತದೆ. ನಿಮ್ಮ ಪ್ರೀತಿಗೆ ಧನ್ಯವಾದಗಳು’ ಎಂದು ಆದಿತ್ಯ ಧರ್ ಅವರು ಟ್ವೀಟ್ ಮಾಡಿದ್ದಾರೆ.

ಶಿವಣ್ಣ ಹೇಳಿದ್ದೇನು?

‘ಧುರಂಧರ್: ದಿ ರಿವೇಂಜ್’ ಸಿನಿಮಾ ಬಹಳ ಚೆನ್ನಾಗಿದೆ. ಈ ಸಿನಿಮಾದಲ್ಲಿನ ಪ್ರತಿಯೊಂದು ಅಂಶ ಕೂಡ ಇಷ್ಟ ಆಯಿತು. ರಣವೀರ್ ಸಿಂಗ್ ಬ್ರಿಲಿಯಂಟ್. ಹಳೇ ಸಾಂಗ್ ಬಳಸಿಕೊಂಡಿರುವ ಸಂಗೀತ ನಿರ್ದೇಶಕ ಶಾಶ್ವತ್ ಸಚ್​ದೇವ್ ಅವರ ಕೆಲಸ ಪರಿಣಾಮಕಾರಿ ಆಗಿದೆ. ನಿರ್ದೇಶಕ ಆದಿತ್ಯ ಧರ್ ಅವರ ಕೆಲಸಕ್ಕೆ ಗೌರವ ಸಲ್ಲಬೇಕು. ಸೈನಿಕನ ದೇಶಭಕ್ತಿಯೇ ಈ ಸಿನಿಮಾದ ಜೀವಾಳ. ಇಡೀ ಧುರಂಧರ್ 2 ಚಿತ್ರತಂಡಕ್ಕೆ ಅಭಿನಂದನೆಗಳು’ ಎಂದು ಶಿವರಾಜ್​ಕುಮಾರ್ ಅವರು ಮೆಚ್ಚುಗೆ ಸೂಚಿಸಿದ್ದಾರೆ.

ಈ ಹಿಂದೆ ‘ಧುರಂಧರ್’ ಮೊದಲ ಭಾಗವನ್ನು ವೀಕ್ಷಿಸಿದ್ದಾಗಲೂ ಶಿವರಾಜ್​ಕುಮಾರ್ ಅವರು ಹೊಗಳಿದ್ದರು. ‘ರಣವೀರ್ ಸಿಂಗ್ ಅವರು ಮಾಡಿದ ಪಾತ್ರ ಸುಲಭವಲ್ಲ. ಅದನ್ನು ಅವರು ಬಹಳ ಬ್ರಿಲಿಯಂಟ್ ಆಗಿ ನಿಭಾಯಿಸಿದ್ದಾರೆ’ ಎಂದು ಶಿವರಾಜ್​ಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮುಂಬೈನಲ್ಲಿ ನಡೆದ ‘45’ ಸಿನಿಮಾದ ಸುದ್ದಿಗೋಷ್ಠಿ ವೇಳೆ ಅವರು ಈ ಮಾತು ಹೇಳಿದ್ದರು.

ಇದನ್ನೂ ಓದಿ: ‘ನಮ್ಮದು ಧುರಂಧರ್ ರೀತಿ ವಯಸ್ಕರ ಸಿನಿಮಾ ಅಲ್ಲ’: ಅಕ್ಷಯ್ ಕುಮಾರ್ ಹೀಗೆ ಹೇಳಿದ್ದು ಯಾಕೆ?

ರಣವೀರ್ ಸಿಂಗ್ ಜತೆ ‘ಧುರಂಧರ್ 2’ ಸಿನಿಮಾದಲ್ಲಿ ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್, ಕಬೀರ್ ಬೇಡಿ, ಆರ್. ಮಾಧವನ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ರಿಷಬ್ ಶೆಟ್ಟಿ, ರಜನಿಕಾಂತ್, ಅಲ್ಲು ಅರ್ಜುನ್, ಮಹೇಶ್ ಬಾಬು, ರಾಮ್ ಚರಣ್, ರಾಜಮೌಳಿ ಮುಂತಾದ ಸೆಲೆಬ್ರಿಟಿಗಳು ಈ ಸಿನಿಮಾ ನೋಡಿ ಹೊಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ