AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್​​ಗೆ ಕೇಡು ಬಯಸಿದ ಧುರಂಧರ್​ನ ಕರ್ಮ ಹಿಂಬಾಲಿಸುತ್ತಿದೆ’; ಹಿಂದಿ ಯೂಟ್ಯೂಬರ್​​ ಸೆನ್ಸೇಷನ್ ಹೇಳಿಕೆ

‘ಧುರಂಧರ್ 2’ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದಗಳ ಸುಳಿಯಲ್ಲಿದೆ. ‘ಟಾಕ್ಸಿಕ್’ ಚಿತ್ರದ ವಿರುದ್ಧ ವದಂತಿ ಹಬ್ಬಿಸಿದ್ದಕ್ಕೆ ‘ಧುರಂಧರ್ 2’ ತಂಡಕ್ಕೆ ‘ಕರ್ಮ’ ಸುತ್ತಿಕೊಂಡಿದೆ ಎಂದು ಹಿಂದಿ ಯೂಟ್ಯೂಬರ್ ಒಬ್ಬರು ಹೇಳಿದ್ದಾರೆ. ಟೀಸರ್ ನಿರಾಸೆ, IMDb ರೇಟಿಂಗ್‌ನಲ್ಲಿ ಹಿನ್ನಡೆ ಹಾಗೂ ನಿರ್ಬಂಧಿತ ಪ್ರದೇಶಗಳಲ್ಲಿ ಶೂಟಿಂಗ್ ಮಾಡಿ BMC ಕೆಂಗಣ್ಣಿಗೆ ಗುರಿಯಾಗಿರುವುದು ಚಿತ್ರತಂಡದ ಸಮಸ್ಯೆಗಳನ್ನು ಹೆಚ್ಚಿಸಿದೆ.

‘ಟಾಕ್ಸಿಕ್​​ಗೆ ಕೇಡು ಬಯಸಿದ ಧುರಂಧರ್​ನ ಕರ್ಮ ಹಿಂಬಾಲಿಸುತ್ತಿದೆ’; ಹಿಂದಿ ಯೂಟ್ಯೂಬರ್​​ ಸೆನ್ಸೇಷನ್ ಹೇಳಿಕೆ
ಯಶ್-ರಣವೀರ್
ರಾಜೇಶ್ ದುಗ್ಗುಮನೆ
|

Updated on:Feb 19, 2026 | 7:31 AM

Share

‘ಧುರಂಧರ್ 2’ ಸಿನಿಮಾ (Dhurandhar 2 Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ ಗೆದ್ದೇ ಗೆಲ್ಲುತ್ತೆ ಎಂಬ ನಂಬಿಕೆ ಅಭಿಮಾನಿಗಳದ್ದು. ಈ ಚಿತ್ರದ ಟೀಸರ್ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಹೆಚ್ಚಿನ ಪರಿಣಾಮ ಬೀರಲು ಇದು ವಿಫಲವಾಗಿದೆ. ಇನ್ನು, ಐಎಂಡಿಬಿ ರೇಟಿಂಗ್​​ನಲ್ಲಿಯೂ ‘ಧುರಂಧರ್ 2’ ಸಿನಿಮಾನ ‘ಟಾಕ್ಸಿಕ್’ ಹಿಂದಕ್ಕೆ ಹಾಕಿದೆ. ಈ ಎಲ್ಲಾ ವಿಷಯಗಳ ಮಧ್ಯೆ ‘ಧುರಂಧರ್ 2 ತಂಡವನ್ನು ಕರ್ಮ ಹಿಂಬಾಲಿಸುತ್ತಿದೆ ಎಂದು ಹಿಂದಿ ಯೂಟ್ಯೂಬರ್ ಒಬ್ಬರು ಹೇಳಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ.

ಹಿಂದಿ ಮಂದಿ ‘ಧರುಂದರ್ 2’ ಸಿನಿಮಾ ಪರವಾಗಿ ಮಾತನಾಡುತ್ತಾ ಇದ್ದಾರೆ. ಈ ಚಿತ್ರದ ಎದುರು ರಿಲೀಸ್ ಆಗೋ ಸಿನಿಮಾಗಳು ನಾಶವಾಗುತ್ತವೆ ಎಂದು ಭಯ ಹುಟ್ಟಿಸೋ ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಒಳಗೆ ಭಯ ಇದ್ದೇ ಇದೆ. ಈ ಕಾರಣದಿಂದಲೇ ವದಂತಿ ಹಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬುದು ಕೆಲವರ ಆರೋಪ. ‘ಟಾಕ್ಸಿಕ್ ಮುಂದಕ್ಕೆ ಹೋಗುತ್ತೆ, ಟಾಕ್ಸಿಕ್ ಅಂದುಕೊಂಡ ದಿನಾಂಕದಂದು ರಿಲೀಸ್ ಆಗಲ್ಲ’ ಎಂದೆಲ್ಲ ವದಂತಿ ಹಬ್ಬಿಸುವ ಕೆಲಸ ಮಾಡಿದ್ದು ‘ಧುರಂಧರ್’ ತಂಡ ಎಂದು ಹಿಂದಿ ಯೂಟ್ಯೂಬರ್ ವಾದಿಸಿದ್ದಾರೆ.

‘ನೂರಕ್ಕೆ ನೂರಾಹತ್ತು ಪರ್ಸೆಂಟ್ ಹೇಳ್ತಿದೀನಿ ಧುರಂಧರ್ 2 ಸಿನಿಮಾ ಪೋಸ್ಟ್​ಪೋನ್ ಆಗಲಿದೆ. ಬೇರೆಯವರಿಗೆ ಹೊಂಡ ತೋಡಿದರೆ, ಬೀಳೋದು ನಾವೇ. ಟಾಕ್ಸಿಕ್ ಪೋಸ್ಟ್​​ಪೋನ್​ ಆಗುತ್ತದೆ ಎಂದು ಧುರಂಧರ್ ತಂಡದವರು ಸುದ್ದಿ ಹಬ್ಬಿಸುತ್ತಲೇ ಬಂದರು. ಚಿತ್ರದ ಕಥೆ ಲೀಕ್ ಆಗಿದೆ ಎಂದು ಕೂಡ ಹೇಳಿದರು. ಆದರೆ, ಈಗ ಕರ್ಮ ಧುರಂಧರ್ 2 ಚಿತ್ರಕ್ಕೆ ಸುತ್ತಿಕೊಂಡು ಬಂದಿದೆ. ಅವರ ಸಿನಿಮಾ ಮುಂದಕ್ಕೆ ಹೋಗುತ್ತದೆ’ ಎಂದು ಹೇಳಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ‘ಧುರಂಧರ್ 2’ ಜೊತೆ ಬರ್ತಾರಾ ಅಕ್ಷಯ್ ಕುಮಾರ್? ಆದರೆ ಒಂದು ಟ್ವಿಸ್ಟ್

‘ಧುರಂಧರ್ 2’ ಚಿತ್ರಕ್ಕೆ ಕಾನೂನಾತ್ಮಕವಾಗಿಯೂ ಸಮಸ್ಯೆ ಆಗಿದೆ. ಮುಂಬೈನ ಅನೇಕ ಕಡೆಗಳಲ್ಲಿ ಇವರು ಶೂಟ್ ಮಾಡುತ್ತಿದ್ದಾರೆ. ನಿರ್ಬಂಧಿತ ಪ್ರದೇಶಗಳಲ್ಲೂ ಶೂಟ್ ಮಾಡುವ ಮೂಲಕ ಬೃಹತ್ ಮುಂಬೈ ಪಾಲಿಕೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:29 am, Thu, 19 February 26

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ