‘ಧುರಂಧರ್ 2’ ಪೇಡ್​ ಪ್ರೀಮಿಯರ್ ಶೋ ಕ್ಯಾನ್ಸಲ್; ಕೊನೆ ಕ್ಷಣದಲ್ಲಿ ತೊಂದರೆ

ಸೆನ್ಸಾರ್ ಮಂಡಳಿ ಬದಲಾವಣೆಯ ಸೂಚನೆ ಕಾರಣದಿಂದ ‘ಧುರಂಧರ್ 2’ ಚಿತ್ರದ ಪೇಡ್ ಪ್ರೀಮಿಯರ್ ಶೋಗಳು ರದ್ದಾಗಿವೆ. 21 ಬದಲಾವಣೆಗಳು, ಮುಖ್ಯವಾಗಿ ಹಿಂಸಾತ್ಮಕ ದೃಶ್ಯಗಳ ತೆಗೆದುಹಾಕಲು ಸೂಚಿಸಲಾಗಿದೆ. ಇದರಿಂದ ಕನ್ನಡ, ತೆಲುಗು ವರ್ಷನ್‌ಗಳ ಪ್ರದರ್ಶನ ಇಂದು ನಡೆಯುವುದು ಅನುಮಾನವಾಗಿದೆ. ಹಿಂದಿ ವರ್ಷನ್ ಎಡಿಟ್‌ನತ್ತ ಚಿತ್ರತಂಡದ ಗಮನ ಹರಿಸಿದೆ.

‘ಧುರಂಧರ್ 2’ ಪೇಡ್​ ಪ್ರೀಮಿಯರ್ ಶೋ ಕ್ಯಾನ್ಸಲ್; ಕೊನೆ ಕ್ಷಣದಲ್ಲಿ ತೊಂದರೆ
ಧುರಂಧರ್ 2

Updated on: Mar 18, 2026 | 1:15 PM

‘ಧುರಂಧರ್ 2’ ಸಿನಿಮಾಗೆ (Dhurandhar 2 ) ಕೊನೆಯ ಕ್ಷಣದಲ್ಲಿ ತೊಂದರೆ ಎದುರಾಗಿದೆ. ಸಿನಿಮಾದ ಕೆಲವು ದೃಶ್ಯಗಳಿಗೆ ಕತ್ತರಿ ಹಾಗೂ ಬದಲಾವಣೆ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಇದರಿಂದ ಕನ್ನಡ, ತೆಲುಗು ಸೇರಿದಂತೆ ಮೊದಲಾದ ಭಾಷೆಗಳಲ್ಲಿ ಸಿನಿಮಾ ಇಂದು ಪ್​ರೀಮೀಯರ್ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ. ಇದರಿಂದ ಕನ್ನಡ, ತೆಲುಗು ವರ್ಷನ್ ಬುಕ್ ಮಾಡಿದವರಿಗೆ ಬೇಸರ ಆಗಿದೆ. ಈಗಾಗಲೇ ಬೆಂಗಳೂರಲ್ಲಿ ಕನ್ನಡ ವರ್ಷನ್ ಪ್ರೀಮಿಯರ್​​ ಶೋಗಳನ್ನು ಕ್ಯಾನ್ಸಲ್ ಮಾಡಲಾಗಿದೆ.

ಮಾರ್ಚ್ 17ರಂದು ‘ಧುರಂಧರ್ 2’ ಚಿತ್ರಕ್ಕೆ ಪ್ರಮಾಣ ಪತ್ರ ಸಿಕ್ಕಿದೆ. 21 ಬದಲಾವಣೆಗಳನ್ನು ಮಾಡಲು ಸೂಚಿಸಲಾಗಿದೆ. ಅತ್ಯಂತ ಹಿಂಸಾತ್ಮಕ ವಿಷಯಗಳನ್ನು ತೆಗೆಯಲು ಸೂಚಿಸಲಾಗಿದೆ. ಸದ್ಯ ಹಿಂದಿ ವರ್ಷನ್ ಬಗ್ಗೆ ತಂಡದವರು ಹೆಚ್ಚು ಗಮನ ಹರಿಸುತ್ತಿದ್ದಾರೆ. ಅದರ ಎಡಿಟ್ ಮಾಡಿ ಯುಎಫ್​​ಓಗೆ ಅಪ್​​ಲೋಡ್ ಮಾಡುವ ಭರದಲ್ಲಿ ತಂಡದವರಿದ್ದಾರೆ. ಹೀಗಾಗಿ, ಇನ್ನು, ಕನ್ನಡ ಹಾಗೂ ತೆಲುಗು ವರ್ಷನ್ ಇಂದು ಪ್ರದರ್ಶನ ಕಾಣೋದು ಅನುಮಾನ ಎನ್ನಲಾಗುತ್ತಿದೆ. ಸದ್ಯ ವೈಜಿಆರ್​ ಮಾಲ್​ ಅಲ್ಲಿ ಕನ್ನಡದ ಒಂದು ಶೋ ಇದೆ. ಅದು ಕೂಡ ಶೀಘ್ರವೇ ಕ್ಯಾನ್ಸಲ್ ಆಗಬಹುದು.

ಧುರಂಧರ್ 2

ಸದ್ಯ ಮೊದಲಾರ್ಧದ ಡಿಜಿಟಲ್ ಕಾಪಿ ಮಾತ್ರ ನೀಡಲಾಗಿದೆಯಂತೆ. ಎರಡನೇ ಭಾಗದ ಎಡಿಟಿಂಗ್ ನಡೆಯುತ್ತಿದೆ. ಹೀಗಾಗಿ, ಹಿಂದಿ ವರ್ಷನ್ ಪ್ರೀಮಿಯರ್​​ಗೂ ತೊಂದರೆ ಆಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ‘ಧುರಂಧರ್ 2’ ಸಿನಿಮಾದ ಭೀಕರ ದೃಶ್ಯಗಳಿಗೆ ಸೆನ್ಸಾರ್ ಕತ್ತರಿ: ತಗ್ಗಿತು ಚಿತ್ರದ ಅವಧಿ

ಬೆಂಗಳೂರಲ್ಲಿ ಕನ್ನಡ ವರ್ಷನ್​​ ಪ್ರೀಮಿಯರ್​​ಗಳನ್ನು ಇಂದು ಆಯೋಜಿಸಲಾಗಿತ್ತು. ಪಿವಿಆರ್, ಗೋಪಾಲನ್ ಅಲ್ಲಿ ಶೋ ನೀಡಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಇದನ್ನು ಕ್ಯಾನ್ಸಲ್ ಮಾಡಿರೋದು ಚರ್ಚೆ ಹುಟ್ಟುಹಾಕಿದೆ. ಹೀಗಾಗಿ, ಇಂದು ಶೋ ಕನ್ನಡ, ತೆಲುಗು ವರ್ಷನ್​ಗಳಲ್ಲಿ ಪ್ರದರ್ಶನ ಕಾಣೋದು ಅನುಮಾನವೇ.

‘ಧುರಂಧರ್ 2’ ಸಿನಿಮಾದ ರನ್​ ಟೈಮ್ ಈ ಮೊದಲು 3 ಗಂಟೆ 55 ನಿಮಿಷ ಇತ್ತು. ಹೊಸ ವರ್ಷನ್ ಮೂರು ಗಂಟೆ 49 ನಿಮಿಷ ಇದೆ. ರಣವೀರ್ ಸಿಂಗ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಆದಿತ್ಯ ಧಾರ್ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸೆನ್ಸಾರ್ ಪ್ರಮಾಣಪತ್ರದ ತೊಂದರೆಯನ್ನು ಅನೇಕ ಸಿನಿಮಾಗಳು ಎದುರಿಸಿವೆ. ‘ಧುರಂಧರ್ 2’ ಕೂಡ ಇದೆ ಸಮಸ್ಯೆಗೆ ಒಳಗಾಗಿರೋದು ಅನೇಕರಿಗೆ ಅಚ್ಚರಿ ತಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us