AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ವಾನ್ಸ್ ಬುಕಿಂಗ್​​ನಿಂದ 60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಧುರಂಧರ್ 2’; ಹೊಸ ದಾಖಲೆ

ರಣವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾ ಮಾರ್ಚ್ 19ಕ್ಕೆ ತೆರೆಗೆ ಬರಲಿದ್ದು, ಮಾರ್ಚ್ 18ರ ಪ್ರೀಮಿಯರ್‌ ಶೋಗಳ ಅಡ್ವಾನ್ಸ್ ಬುಕಿಂಗ್ ದಾಖಲೆ ಬರೆದಿದೆ. ವಿಶ್ವಾದ್ಯಂತ 60 ಕೋಟಿ ರೂ. ಹಾಗೂ ಭಾರತದಲ್ಲಿ 24.4 ಕೋಟಿ ರೂ. ಗಳಿಕೆ ಕಂಡಿದೆ. ಪವನ್ ಕಲ್ಯಾಣ್ 'ಒಜಿ' ದಾಖಲೆ ಮುರಿಯುವ ಸನಿಹದಲ್ಲಿದೆ.

ಅಡ್ವಾನ್ಸ್ ಬುಕಿಂಗ್​​ನಿಂದ 60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಧುರಂಧರ್ 2’; ಹೊಸ ದಾಖಲೆ
ರಣವೀರ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on: Mar 13, 2026 | 1:10 PM

Share

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಹೊಸ ದಾಖಲೆ ಬರೆಯಲು ರೆಡಿ ಆಗಿದೆ. ಈ ಚಿತ್ರ ಮಾರ್ಚ್ 19ಕ್ಕೆ ತೆರೆಗೆ ಬರಲಿದೆ. ಅದಕ್ಕೂ ಹಿಂದಿನ ದಿನ ಅಂದರೆ ಮಾರ್ಚ್​ 18ರಂದು ಸಿನಿಮಾಗೆ ಸಾಕಷ್ಟು ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿದೆ. ಬೆಂಗಳೂರು, ಮುಂಬೈ ಸೇರಿದಂತೆ ಅನೇಕ ಕಡೆಗಳಲ್ಲಿ ಶೋ ಹೌಸ್​​​ಫುಲ್ ಆಗಿದೆ. ಇದರಿಂದ ಸಿನಿಮಾಗೆ ದೊಡ್ಡ ಮೊಟ್ಟದಲ್ಲಿ ಹಣ ಹರಿದು ಬರುತ್ತಿದೆ. ಅಡ್ವಾನ್ಸ್ ಬುಕಿಂಗ್​​ನಿಂದ ಚಿತ್ರಕ್ಕೆ ವಿಶ್ವಾದ್ಯಂತ 60 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ.

‘ಧುರಂಧರ್ 2’ ಸಿನಿಮಾದ ಎಲ್ಲಾ ಟಿಕೆಟ್​​​ಗಳನ್ನು ಬಿಡುಗಡೆ ಮಾಡಿಲ್ಲ. ಕೇವಲ ಮಾರ್ಚ್ 18ರ ಟಿಕೆಟ್​​​ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಮಾರ್ಚ್ 19ರ ಟಿಕೆಟ್​​​ಗಳನ್ನು ಕೂಡ ಬುಕಿಂಗ್​​ ಮಾಡುವ ಅವಕಾಶ ನೀಡಿದರೆ ಸಿನಿಮಾ ಅಬ್ಬರಿಸೋದು ಫಿಕ್ಸ್ ಎಂದು ಹೇಳಲಾಗುತ್ತಿದೆ. ಈಗಾಗಲೇ ದೇಶಾದ್ಯಂತ 4.7 ಲಕ್ಷ ಟಿಕೆಟ್​​​ಗಳು ಸೇಲ್ ಆಗಿವೆ. ಇದರಿಂದ ಭಾರತದಲ್ಲಿ 24.4 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಪವನ್ ಕಲ್ಯಾಣ್ ಅವರ ‘ಒಜಿ’ ಸಿನಿಮಾ ಪ್ರೀಮಿಯರ್ ಶೋನಿಂದ 25 ಕೋಟಿ ರೂಪಾಯಿ ಗಳಿಸಿತ್ತು ಎನ್ನಲಾಗಿದೆ. ಆ ದಾಖಲೆಯನ್ನು ‘ಧುರಂಧರ್ 2’ ಸುಲಭದಲ್ಲಿ ಬ್ರೇಕ್ ಮಾಡಲಿದೆ ಎಂದು ಊಹಿಸಲಾಗಿದೆ.

‘ಧುರಂಧರ್ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​​ನಲ್ಲಿ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತದೆ ಎಂಬ ಕುತೂಹಲ ಮೂಡಿದೆ. ‘ಧುರಂಧರ್ 2’ ಚಿತ್ರದಲ್ಲಿ ಅಕ್ಷಯ್ ಖನ್ನಾ ನಟಿಸುತ್ತಾರಾ ಎಂಬುದು ಸದ್ಯದ ಪ್ರಶ್ನೆ. ‘ಧುರಂಧರ್’ ಚಿತ್ರದಲ್ಲಿ ನಟ ಅಕ್ಷಯ್ ಖನ್ನಾ ರೆಹಮಾನ್ ದಕೈತ್ ಪಾತ್ರವನ್ನು ನಿರ್ವಹಿಸಿದ್ದಾರೆ. ಚಿತ್ರದ ಮೊದಲ ಭಾಗದಲ್ಲಿ ರೆಹಮಾನ್ ಕೊಲ್ಲಲ್ಪಟ್ಟರು. ಆದರೆ ಅವರು ‘ಧುರಂಧರ್ 2’ ಚಿತ್ರದಲ್ಲಿ ಮತ್ತೆ ಕಾಣಿಸಿಕೊಳ್ಳುತ್ತಾರೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಸಾವಿರ ಪರದೆಗಳಲ್ಲಿ ಶತದಿನೋತ್ಸವ ಆಚರಿಸಿಕೊಳ್ಳುತ್ತಿದೆ ‘ಧುರಂಧರ್’ ಸಿನಿಮಾ

ಈ ಬಾರಿ, ರೆಹಮಾನ್ ದಕೈತ್ ಅವರ ಇತಿಹಾಸವು ಚಿತ್ರದಲ್ಲಿ ಹೇಳುವ ಸಾಧ್ಯತೆ ಇದೆ. ಟ್ರೇಲರ್‌ನಲ್ಲಿ ಅಕ್ಷಯ್ ಖನ್ನಾ ಅವರನ್ನು ತೋರಿಸಿಲ್ಲ. ಅದಾದ ನಂತರ, ಅನೇಕ ಚರ್ಚೆಗಳು ಹುಟ್ಟಿಕೊಂಡಿವೆ… ಇದರಿಂದಾಗಿ, ಅನೇಕ ಜನರು ‘ಧುರಂಧರ್ 2’ ಚಿತ್ರವನ್ನು ನೋಡಲು ಉತ್ಸುಕರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು