AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ 2’ ದಾಖಲೆ ಉಡೀಸ್: ಹೊಸ ಇತಿಹಾಸ ಬರೆಯಲು ಸಜ್ಜಾದ ‘ಧುರಂಧರ್ 2’

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ‘ಬಾಹುಬಲಿ 2’ ಸಿನಿಮಾದ ದಾಖಲೆಯನ್ನು ಈ ಚಿತ್ರ ಮುರಿಯುತ್ತಿದೆ. ಬಿಡುಗಡೆಯಾಗಿ ಒಂದೂವರೆ ತಿಂಗಳು ಕಳೆದರೂ ಈ ಸಿನಿಮಾ ಹಲವು ಕಡೆಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಬಾಹುಬಲಿ 2’ ದಾಖಲೆ ಉಡೀಸ್: ಹೊಸ ಇತಿಹಾಸ ಬರೆಯಲು ಸಜ್ಜಾದ ‘ಧುರಂಧರ್ 2’
Baahubali 2, Dhurandhar 2
ಮದನ್​ ಕುಮಾರ್​
|

Updated on: Apr 28, 2026 | 5:22 PM

Share

ಭಾರತೀಯ ಚಿತ್ರರಂಗದ ಬಾಕ್ಸ್ ಆಫೀಸ್ ಇತಿಹಾಸದಲ್ಲಿ ‘ಧುರಂಧರ್ 2’ (Dhurandhar 2) ಸಿನಿಮಾ ಮಾಡಿದ ಸಾಧನೆ ಸಣ್ಣದಲ್ಲ. ಕಳೆದ ಒಂಬತ್ತು ವರ್ಷಗಳಿಂದ ಅಲುಗಾಡದಂತೆ ಉಳಿದಿದ್ದ ‘ಬಾಹುಬಲಿ 2’ (Baahubali 2) ಚಿತ್ರದ ಬೃಹತ್ ದಾಖಲೆಯನ್ನು ಮುರಿಯಲು ‘ಧುರಂಧರ್ 2’ ಚಿತ್ರ ಸಜ್ಜಾಗಿದೆ. ರಿಲೀಸ್ ಆದ ದಿನದಿಂದಲೂ ಭರ್ಜರಿ ಕಲೆಕ್ಷನ್ ಮಾಡುತ್ತಾ ಬಂದಿರುವ ಈ ಸಿನಿಮಾ ವಿಶ್ವಾದ್ಯಂತ ಅಬ್ಬರಿಸಿದೆ. ಚಿತ್ರದ ಒಟ್ಟು ಕಲೆಕ್ಷನ್ 1700 ಕೋಟಿ ರೂಪಾಯಿ ಮೀರಿದೆ. ಈ ಮೂಲಕ ರಣವೀರ್ ಸಿಂಗ್ (Ranveer Singh) ಅವರ ಖ್ಯಾತಿ ಹೆಚ್ಚಾಗಿದೆ.

ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರವು ವಿಶ್ವಾದ್ಯಂತ ಅಂದಾಜು 1790 ಕೋಟಿ ರೂಪಾಯಿ ಗಳಿಸುವ ಮೂಲಕ ಅತಿಹೆಚ್ಚು ಗಳಿಕೆ ಮಾಡಿದ ಭಾರತದ ಎರಡನೇ ಚಿತ್ರ ಎಂಬ ಹೆಗ್ಗಳಿಕೆ ಪಾತ್ರವಾಗಿತ್ತು. ಚೀನಾದಲ್ಲಿ ಭರ್ಜರಿ ಪ್ರದರ್ಶನ ಕಂಡಿದ್ದ ‘ದಂಗಲ್’ ಸಿನಿಮಾ ಮೊದಲ ಸ್ಥಾನದಲ್ಲಿದೆ. ಈಗ ‘ಧುರಂಧರ್ 2’ ಚಿತ್ರವು ‘ಬಾಹುಬಲಿ 2’ ದಾಖಲೆ ಮುರಿಯಲು ಕೇವಲ 10 ಕೋಟಿ ರೂಪಾಯಿ ಬಾಕಿ ಇದೆ.

‘ಧುರಂಧರ್ 2’ ಚಿತ್ರದ ಸದ್ಯದ ವೇಗವನ್ನು ನೋಡಿದರೆ, ಈ ವಾರಾಂತ್ಯದ ವೇಳೆಗೆ ಅಧಿಕೃತವಾಗಿ 1790 ಕೋಟಿ ರೂಪಾಯಿ ಗಡಿ ದಾಟಲಿದೆ. ಈ ಮೂಲಕ ಜಾಗತಿಕವಾಗಿ ಅತಿಹೆಚ್ಚು ಗಳಿಕೆ ಮಾಡಿದ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ‘ಬಾಹುಬಲಿ 2’ ಸಿನಿಮಾವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ‘ಧುರಂಧರ್ 2’ ಏರಲಿದೆ. ಇದು ಚಿತ್ರತಂಡದ ದೊಡ್ಡ ಸಾಧನೆ ಆಗಲಿದೆ.

ಒಂದು ಕಾಲದಲ್ಲಿ ಮುಟ್ಟಲು ಅಸಾಧ್ಯ ಎನ್ನಲಾಗುತ್ತಿದ್ದ ದಾಖಲೆಗಳು ಈಗಿನ ಸಿನಿಮಾಗಳಿಗೆ ಸುಲಭವಾಗುತ್ತಿವೆ. ಪ್ರೇಕ್ಷಕರ ವ್ಯಾಪಕ ಬೆಂಬಲ ಮತ್ತು ಮಲ್ಟಿಪ್ಲೆಕ್ಸ್​​ಗಳ ಸಂಖ್ಯೆ ಹೆಚ್ಚಿರುವುದರಿಂದ ‘ಧುರಂಧರ್ 2’ ಈ ಮೈಲಿಗಲ್ಲನ್ನು ವೇಗವಾಗಿ ತಲುಪುತ್ತಿದೆ. ಈ ಸಾಧನೆಯು ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ಯುಗದ ಆರಂಭವನ್ನು ಸೂಚಿಸುತ್ತಿದೆ ಎನ್ನುತ್ತಿದ್ದಾರೆ ಟ್ರೇಡ್ ತಜ್ಞರು

ಇದನ್ನೂ ಓದಿ: ‘ಧುರಂಧರ್’ ಚಿತ್ರಕ್ಕೆ ತಿರುಗೇಟು ನೀಡಲು ‘ಮೇರಾ ಲಿಯಾರಿ’ ಸಿನಿಮಾ ಮಾಡಿದ ಪಾಕಿಸ್ತಾನ

ಆದಿತ್ಯ ಧರ್ ಅವರು ‘ಧುರಂಧರ್ 2’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರಣವೀರ್ ಸಿಂಗ್ ಮತ್ತು ಸಾರಾ ಅರ್ಜುನ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅರ್ಜುನ್ ರಾಮ್​ಪಾಲ್, ರಾಕೇಶ್ ಬೇಡಿ, ಸಂಜಯ್ ದತ್, ಆರ್. ಮಾಧವನ್ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ