AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಕಥೆ ನಂದು ಎಂದ ವ್ಯಕ್ತಿಯ ಮೈಚಳಿ ಬಿಡಿಸಲು ಮುಂದಾದ ಆದಿತ್ಯ ಧಾರ್

‘ಧುರಂಧರ್ 2’ ಕಥೆ ತನ್ನದು ಎಂದು ಸಂತೋಷ್ ಕುಮಾರ್ ಹೇಳಿಕೆ ನೀಡಿದ ನಂತರ, ನಿರ್ದೇಶಕ ಆದಿತ್ಯ ಧಾರ್ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಸಂತೋಷ್ ಕುಮಾರ್ ಸಾರ್ವಜನಿಕವಾಗಿ ಕಥೆ ಕದ್ದ ಆರೋಪ ಮಾಡಿದ್ದರಿಂದ, ಆದಿತ್ಯ ಧಾರ್ ನೋಟಿಸ್ ಕಳುಹಿಸಿದ್ದಾರೆ. ಆದರೆ, ನೋಟಿಸ್ ಬಂದಿಲ್ಲ ಎಂದು ಸಂತೋಷ್ ನಿರಾಕರಿಸಿದ್ದಾರೆ, ಕೋರ್ಟ್‌ನಲ್ಲಿ ಹೋರಾಡುವ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಕೆರಳಿದ ಆದಿತ್ಯ ಧಾರ್ ಈಗ ಮತ್ತಷ್ಟು ಕಠಿಣ ಕ್ರಮಕ್ಕೆ ಸಿದ್ಧರಾಗಿದ್ದಾರೆ.

‘ಧುರಂಧರ್ 2’ ಕಥೆ ನಂದು ಎಂದ ವ್ಯಕ್ತಿಯ ಮೈಚಳಿ ಬಿಡಿಸಲು ಮುಂದಾದ ಆದಿತ್ಯ ಧಾರ್
ಆದಿತ್ಯ-ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Apr 04, 2026 | 1:18 PM

Share

‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾ (Dhurandhar 2) ಗೆದ್ದು ಬೀಗಿದೆ. ‘ಧುರಂಧರ್’ ರಿಲೀಸ್ ಆಗಿ ನಾಲ್ಕು ತಿಂಗಳು ಹಾಗೂ ‘ಧುರಂಧರ್ 2’ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಹೀಗಿರುವಾಗ ಕಥೆ ಬರಹಗಾರ ಸಂತೋಷ್ ಕುಮಾರ್ ಎಂಬುವವರು ‘ಧುರಂಧರ್ 2’ ಕಥೆ ತಮ್ಮದು ಎಂದು ಹೇಳಿಕೊಂಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಲು ಆದಿತ್ಯ ಧಾರ್ ಮುಂದಾಗಿದ್ದಾರೆ ಎಂದು ವರದಿ ಆಗಿದೆ.

ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಸಂತೋಷ್ ಕುಮಾರ್ ಅವರು, ‘ಧುರಂಧರ್ 2’ ಚಿತ್ರದ ಕಥೆ ನನ್ನದು. ಅವರು ಅದನ್ನು ಕದ್ದು ಸಿನಿಮಾ ಮಾಡಿದ್ದಾರೆ. ನಾನು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳುಗೆ ಕಥೆ ಹೇಳಿದ್ದೆ. ನಾನು ದೊಡ್ಡ ದೊಡ್ಡ ಕಲಾವಿದರನ್ನು ಸಿನಿಮಾದಲ್ಲಿ ಹಾಕಿಕೊಳ್ಳುವ ಪ್ಲ್ಯಾನ್ ಇತ್ತು’ ಎಂದಿದ್ದರು.

ಈ ವಿಷಯವಾಗಿ ಆದಿತ್ಯ ಧಾರ್ ಅವರು ಸಾರ್ವಜನಿಕವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಬದಲಿಗೆ ಕಾನೂನಾತ್ಮಕವಾಗಿಯೇ ಉತ್ತರಿಸಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ವರದಿಗಳ ಪ್ರಕಾರ, ತಮ್ಮ ಕಾನೂನು ತಂಡದ ಜೊತೆ ಮಾತನಾಡಿರುವ ಆದಿತ್ಯ ಧಾರ್ ಅವರು ಸಂತೋಷ್​​ ಕುಮಾರ್ ಅವರಿಗೆ ನೋಟಿಸ್ ಕಳುಹಿಸಿದ್ದಾರೆ. ಈ ರೀತಿ ಸುಳ್ಳು ಹೇಳಿಕೆ ನೀಡದಂತೆ ಸೂಚಿಸಿದ್ದಾರೆ.

ಆದರೆ, ಇದಕ್ಕೆ ಸಂತೋಷ್ ಕುಮಾರ್ ಸುಮ್ಮನಾಗಿಲ್ಲ. ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸಂತೋಷ್ ಕುಮಾರ್ ನೇರವಾಗಿ ಹೇಳಿದ್ದಾರೆ. ಮೌನವಾಗಿರಲು ತನ್ನ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಕೋರ್ಟ್​​​ನಲ್ಲಿ ವಿಷಯ ಹೋರಾಡುವುದಾಗಿ ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ‘ಧುರಂಧರ್ 2’ ಮೇಲೆ ಕಥೆ ಕದ್ದ ಆರೋಪ: ಚಿತ್ರತಂಡದ ವಿರುದ್ಧ ಕೇಸ್ ಹಾಕಲು ನಿರ್ಧಾರ

ಇದರಿಂದ ಸಿಟ್ಟಾಗಿರೋ ಆದಿತ್ಯ ಧಾರ್ ಅವರಿಗೆ ಮತ್ತಷ್ಟು ಸಿಟ್ಟಾಗಿದ್ದಾರೆ. ಎಚ್ಚರಿಕೆಯ ಬಳಿಕವೂ ಸಂತೋಷ್ ಅವರು ಆಧಾರ ರಹಿತ ಹೇಳಿಕೆ ಮುಂದುವರಿಸಿದ್ದಾರೆ ಎಂಬುದು ಆದಿತ್ಯ ಧಾರ್ ಅವರ ಆರೋಪ. ಈ ಹಿನ್ನೆಲೆಯಲ್ಲಿ ಸಂತೋಷ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದಿತ್ಯ ಧಾರ್ ಮುಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ