AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್ ನಟನೆಯ ‘ಧುರಂಧರ್ 2’ ವಿಳಂಬಕ್ಕೆ ಕಾರಣವಾಯ್ತು ಚಂದ್ರ ಗ್ರಹಣ

ಸೋಶಿಯಲ್ ಮೀಡಿಯಾದಲ್ಲಿ 'ಧುರಂಧರ್ 2' Vs 'ಟಾಕ್ಸಿಕ್' ಚರ್ಚೆ ಜೋರಾಗಿದೆ. ಮಾರ್ಚ್ 3ಕ್ಕೆ ಬರಬೇಕಿದ್ದ 'ಧುರಂಧರ್ 2' ಟ್ರೇಲರ್ ಚಂದ್ರ ಗ್ರಹಣದ ಕಾರಣ ಮುಂದೂಡಲ್ಪಟ್ಟಿದೆ. ಗ್ರಹಣವನ್ನು ಶುಭ ಎಂದು ಪರಿಗಣಿಸದ ಕಾರಣ ಚಿತ್ರತಂಡ ಈ ನಿರ್ಧಾರ ತೆಗೆದುಕೊಂಡಿದೆ. ಮಾರ್ಚ್ 5 ಅಥವಾ 6ರಂದು ಹೊಸ ಟ್ರೇಲರ್ ದಿನಾಂಕ ನಿರೀಕ್ಷಿಸಲಾಗಿದೆ.

ರಣವೀರ್ ನಟನೆಯ ‘ಧುರಂಧರ್ 2’ ವಿಳಂಬಕ್ಕೆ ಕಾರಣವಾಯ್ತು ಚಂದ್ರ ಗ್ರಹಣ
ಧುರಂಧರ್ 2
ರಾಜೇಶ್ ದುಗ್ಗುಮನೆ
|

Updated on: Mar 03, 2026 | 3:09 PM

Share

ಸೋಶಿಯಲ್ ಮೀಡಿಯಾ ಓಪನ್ ಮಾಡಿದರೆ ‘ಧುರಂಧರ್ 2’ (Dhurandhar 2) Vs ‘ಟಾಕ್ಸಿಕ್’ ಎಂಬ ಚರ್ಚೆ ಕಾಣಿಸುತ್ತದೆ. ಇಂದು (ಮಾರ್ಚ್ 3) ಸಿನಿಮಾ ಟ್ರೇಲರ್ ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ನಂತರ ಅದನ್ನು ಮುಂದಕ್ಕೆ ಹಾಕಲಾಯಿತು. ಇದಕ್ಕೆ ಕಾರಣ ಆಗಿದ್ದು ಚಂದ್ರ ಗ್ರಹಣ ಎಂದು ವರದಿ ಆಗಿದೆ. ಈ ಬಗ್ಗೆ ಬಾಲಿವುಡ್ ಹಂಗಾಮ ವರದಿ ಮಾಡಿದೆ. ಬಾಲಿವುಡ್​​ನವರೂ ಇದನ್ನು ಬಹುವಾಗಿ ನಂಬುತ್ತಾರೆ ಎಂಬ ವಿಷಯ ಅನೇಕರಿಗೆ ಅಚ್ಚರಿ ತಂದಿದೆ.

ಕೆಲವರ ನಂಬಿಕೆ ಪ್ರಕಾರ ಗ್ರಹಣ ದಿನವನ್ನು ಒಳ್ಳೆಯ ದಿನ ಎಂದು ಪರಿಗಣಿಸಲಾಗುವುದಿಲ್ಲ. ಈ ಕಾರಣದಿಂದ ಅಂದು ಸಾಕಷ್ಟು ಪೂಜೆಗಳನ್ನು ಮಾಡಲಾಗುತ್ತದೆ. ಕೆಲವು ಕಡೆಗಳಲ್ಲಿ ಗ್ರಹಣದ ಸಮಯದಲ್ಲಿ ಆಹಾರ ಸೇವನೆಯನ್ನೂ ಮಾಡೋದಿಲ್ಲ. ಗ್ರಹಣದ ಬಳಿಕ ಸ್ನಾನ ಮಾಡಿ, ಮನೆಯನ್ನು ಶುಚಿಗೊಳಿಸುವವರೂ ಇದ್ದಾರೆ. ಹೀಗಾಗಿ, ಈ ದಿನ ‘ಧುರಂಧರ್ 2’ ಟ್ರೇಲರ್ ರಿಲೀಸ್ ಮಾಡೋದು ಬೇಡ ಎಂಬ ನಿರ್ಧಾರಕ್ಕೆ ಚಿತ್ರತಂಡಕ್ಕೆ ಬಂದಂತೆ ಇದೆ.

ಮಾರ್ಚ್ 3ರಂದು ಟ್ರೇಲರ್ ಲಾಂಚ್ ಮಾಡಬೇಕು ಎಂಬ ಆಲೋಚನೆಯನ್ನು ತಂಡ ಹೊಂದಿದ್ದು ನಿಜವೇ ಆಗಿತ್ತು. ಆದರೆ, ಗ್ರಹಣದ ಸಮಯ ಬೆಳಿಗ್ಗೆ 9.30ರಿಂದ ಆರಂಭ ಆಗಿ ಸಂಜೆ 6.46ರವರೆಗೆ ಇದೆ. ಹೀಗಾಗಿ, ಈ ಆಲೋಚನೆಯನ್ನು ಕೈ ಬಿಡಲಾಗಿದೆ ಎಂದು ಹೇಳಲಾಗುತ್ತಾ ಇದೆ. ಆದರೆ, ಈ ಬಗ್ಗೆ ತಂಡ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಇದನ್ನೂ ಓದಿ: ‘ಟಾಕ್ಸಿಕ್’ಗೆ ತಿರುಗೇಟು ಕೊಡಲು ಸರ್​​​ಪ್ರೈಸ್ ಶಾಕ್ ರೆಡಿ ಮಾಡಿದ ‘ಧುರಂಧರ್ 2’

ಸದ್ಯ ಕೇಳಿ ಬರುತ್ತಿರುವ ಹೊಸ ವರದಿ ಪ್ರಕಾರ ಮಾರ್ಚ್ 5 ಅಥವಾ 6ರಂದು ಟ್ರೇಲರ್ ಲಾಂಚ್ ಆಗಲಿದೆಯಂತೆ. ಮುಂಬೈನ ನೀತಾ ಮುಕೇಶ್ ಅಂಬಾನಿ ಕಲ್ಚರಲ್ ಸೆಂಟರ್ ಅಲ್ಲಿ ಈ ಟ್ರೇಲರ್ ರಿವೀಲ್ ಆಗುವ ಸಾಧ್ಯತೆ ಇದೆ. ಈಗಾಗಲೇ ‘ಟಾಕ್ಸಿಕ್’ ಸಿನಿಮಾ ಟ್ರೇಲರ್ ಮಾರ್ಚ್ 8ರಂದು ರಿವೀಲ್ ಆಗುವುದು ಬಹುತೇಕ ಖಚಿತವಾಗಿದೆ. ಹೀಗಾಗಿ, ಅದಕ್ಕೂ ಮೊದಲೇ ‘ಧುರಂಧರ್ 2’ ಟ್ರೇಲರ್ ರಿಲೀಸ್ ಆದರೆ, ಚಿತ್ರಕ್ಕೆ ಹೆಚ್ಚು ಸಹಕಾರಿ ಆಗಬಹುದು. ಒಂದೊಮ್ಮೆ ಎರಡೂ ಟ್ರೇಲರ್​​​ಗಳು ಒಂದೇ ದಿನ ಬಿಡುಗಡೆ ಕಂಡರೆ ಯೂಟ್ಯೂಬ್​​​ನಲ್ಲೂ ಇವು ಕ್ಲ್ಯಾಶ್ ಆದಂತೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು