AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಸಿನಿಮಾ ಟ್ರೇಲರ್ ಚೆನ್ನಾಗಿದ್ದರೂ ಅಭಿಮಾನಿಗಳಿಗೆ ಕಾಣ್ತಿದೆ ಕೊರತೆ

ಬಹುನಿರೀಕ್ಷಿತ 'ಧುರಂಧರ್ 2' ಸಿನಿಮಾ ಟ್ರೇಲರ್ ಬಿಡುಗಡೆಯಾಗಿ ಅಭಿಮಾನಿಗಳನ್ನು ರಂಜಿಸಿದೆ. ಆ್ಯಕ್ಷನ್ ಪ್ರಿಯರಿಗೆ ಹಬ್ಬವನ್ನೇ ಉಂಟುಮಾಡಿದ ರಣವೀರ್ ಸಿಂಗ್ ಅವರ ಪಾತ್ರ, ಸಿನಿಮಾದ ಬೃಹತ್ ಕಲೆಕ್ಷನ್ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಆದಾಗ್ಯೂ, ಮೊದಲ ಭಾಗದ ಪ್ರಮುಖ ಪಾತ್ರಧಾರಿ ಅಕ್ಷಯ್ ಖನ್ನಾ ಅವರು ಟ್ರೇಲರ್‌ನಲ್ಲಿ ಕಾಣೆಯಾಗಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

‘ಧುರಂಧರ್ 2’ ಸಿನಿಮಾ ಟ್ರೇಲರ್ ಚೆನ್ನಾಗಿದ್ದರೂ ಅಭಿಮಾನಿಗಳಿಗೆ ಕಾಣ್ತಿದೆ ಕೊರತೆ
ರಣವೀರ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on: Mar 07, 2026 | 12:27 PM

Share

ಬಹು ನಿರೀಕ್ಷಿತ ‘ಧುರಂಧರ್ 2’ ಸಿನಿಮಾ (Dhurandhar 2) ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದ ಟ್ರೇಲರ್ ಧೂಳೆಬ್ಬಿಸಿದೆ. ಈ ಟ್ರೇಲರ್ ಗಮನ ಸೆಳೆದಿದೆ. ಟ್ರೇಲರ್ ಉದ್ದಕ್ಕೂ ಆ್ಯಕ್ಷನ್ ಇದೆ. ರಣವೀರ್ ಸಿಂಗ್ ಅವರು ಟ್ರೇಲರ್ ಅಲ್ಲಿ ರಕ್ತ ಹರಿಸಿದ್ದಾರೆ. ಟ್ರೇಲರ್ ನೋಡಿದರೆ ಸಿನಿಮಾ 2 ಸಾವಿರ ಕೋಟಿ ಕಲೆಕ್ಷನ್ ಮಾಡೋದು ಪಕ್ಕಾ ಎಂಬುದು ಅಭಿಮಾನಿಗಳಿಗೆ ಸ್ಪಷ್ಟವಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿವೆ. ಆದರೂ ಒಂದು ಕೊರತೆ ಕಾಣುತ್ತಿದೆ.

‘ಧುರಂಧರ್ 2’ ಸಿನಿಮಾ ಟ್ರೇಲರ್ ಉದ್ದಕ್ಕೂ ಆ್ಯಕ್ಷನ್ ಮೆರೆಯಲಾಗಿದೆ. ಈ ಚಿತ್ರದ ಟ್ರೇಲರ್ ನೋಡಿದವರಿಗೆ ಅದ್ಭುತ ಫೀಲ್ ಆಗಿದೆ. ಹಮ್ಜಾ ಅಲಿ ಮಜಾರಿ ಪಾಕಿಸ್ತಾನದಲ್ಲಿ ರೆಹಮಾನ್ ಡಕಾಯಿತ್​​ನ ಕೊಲೆ ಮಾಡುತ್ತಾನೆ. ಈ ಕೊಲೆ ಬಳಿಕ ಹಮ್ಜಾ ಪಾಕಿಸ್ತಾನದ ಡಾನ್ ಆಗುವ ರೀತಿಯಲ್ಲಿ ತೋರಿಸಲಾಗಿದೆ. ಅಲ್ಲದೆ, ಹಮ್ಜಾನ ಹಿಂದಿನ ಕಥೆಯನ್ನು ಕೂಡ ತೋರಿಸಲಾಗಿದೆ.

ಟ್ರೇಲರ್ ಉದ್ದಕ್ಕೂ ‘ಧುರಂದರ್ 2’ ಚಿತ್ರದಲ್ಲಿ ಆ್ಯಕ್ಷನ್ ಇದೆ. ಇದು ಆ್ಯಕ್ಷನ್ ಪ್ರಿಯರಿಗೆ ಸಾಕಷ್ಟು ಇಷ್ಟ ಆಗುವ ಸಾಧ್ಯತೆ ಇದೆ. ಆದರೆ, ಟ್ರೇಲರ್ ಅಲ್ಲಿ ಎಲ್ಲಿಯೂ ಅಕ್ಷಯ್ ಖನ್ನಾ ಕಾಣಿಸಿಲ್ಲ. ಮೊದಲ ಭಾಗದಲ್ಲಿ ಅವರು ರೆಹಮಾನ್ ಡಕಾಯಿತ್ ಪಾತ್ರ ಮಾಡಿದ್ದರು. ಈ ಪಾತ್ರ ಎಲ್ಲಿಯೂ ತೋರಿಸಿಲ್ಲ. ಇದು ಕೆಲವರ ಬೇಸರಕ್ಕೆ ಕಾರಣ ಆಗಿದೆ. ಕೆಲವು ದೃಶ್ಯಗಳಲ್ಲಿಯಾದರೂ ಅವರು ಕಾಣಿಸಿಕೊಳ್ಳಬೇಕಿತ್ತು ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಆ್ಯಕ್ಷನ್, ಆ್ಯಕ್ಷನ್, ಆ್ಯಕ್ಷನ್; ಬೀಸ್ಟ್​ ಮೋಡ್​​​ನಲ್ಲಿ ರಿವೇಂಜ್​ಗೆ ಇಳಿದ ರಣವೀರ್ ‘ಧುರಂಧರ್ 2’ ಸಿನಿಮಾಗೆ ಆದಿತ್ಯ ಧಾರ್ ನಿರ್ದೇಶನ ಮಾಡಿದ್ದಾರೆ. ಜಿಯೋ ಸ್ಟುಡಿಯೋ ಜೊತೆ ಆದಿತ್ಯ ಧಾರ್ ಕೂಡ ಸಿನಿಮಾದ ನಿರ್ಮಾಪಕ. ಭಾರತದ ವ್ಯಕ್ತಿಯೋರ್ವ ಪಾಕಿಸ್ತಾನದಲ್ಲಿ ಸ್ಪೈ ಆಗುತ್ತಾನೆ. ಅಲ್ಲಿಯವರ ಜೊತೆ ಸೇರಿ, ಭಾರತದ ಪರವಾಗಿ ಕೆಲಸ ಮಾಡುತ್ತಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ