AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 3’ ಎಫೆಕ್ಟ್​?; ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ ಮಾಡಿದ ವಿವೇಕ್ ಅಗ್ನಿಹೋತ್ರಿ

ವಿವೇಕ್ ಅಗ್ನಿಹೋತ್ರಿ 'ಆಪರೇಷನ್ ಸಿಂಧೂರ್' ಸಿನಿಮಾ ಘೋಷಿಸಿದ್ದಾರೆ. ಪೆಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಅದಕ್ಕೆ ಭಾರತ ನೀಡಿದ ಪ್ರತಿಕ್ರಿಯೆಯನ್ನು ಇದು ಆಧರಿಸಿದೆ. 'ಧುರಂಧರ್ 3' ಚಿತ್ರದ ಯಶಸ್ಸು ಈ ಹೊಸ ಘೋಷಣೆಗೆ ಪ್ರೇರಣೆ ಇರಬಹುದೇ ಎಂಬ ಪ್ರಶ್ನೆ ಮೂಡಿಸಿದೆ. 'ದಿ ಕಾಶ್ಮೀರ್ ಫೈಲ್ಸ್' ನಂತರ, ಇದೊಂದು ಮತ್ತೊಂದು ಮಹತ್ವದ ವಿಷಯವನ್ನು ತೆರೆಗೆ ತರುತ್ತಿದೆ.

‘ಧುರಂಧರ್ 3’ ಎಫೆಕ್ಟ್​?; ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ ಮಾಡಿದ ವಿವೇಕ್ ಅಗ್ನಿಹೋತ್ರಿ
ವಿವೇಕ್​-ರಣವೀರ್
ರಾಜೇಶ್ ದುಗ್ಗುಮನೆ
|

Updated on: Mar 26, 2026 | 2:57 PM

Share

ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಗಮನ ಸೆಳೆದರು. ಕಾಶ್ಮೀರಿ ಪಂಡಿತರ ಮೇಲೆ ನಡೆದ ದಾಳಿಯ ಕುರಿತು ಈ ಸಿನಿಮಾ ಇತ್ತು. ನಂತರ ಬಂದ ‘ದಿ ವ್ಯಾಕ್ಸಿನ್ ವಾರ್’ ಹಾಗೂ ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾಗಳು ಗಮನ ಸೆಳೆಯಲು ವಿಪಲವಾದವು. ಈಗ ವಿವೇಕ್ ಅವರು ಪೆಹಲ್ಗಾಮ್ ದಾಳಿ ಕುರಿತು ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಚಿತ್ರಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರು ಇಟ್ಟಿದ್ದಾರೆ. ಪೆಹಲ್ಗಾಮ್ ದಾಳಿ ಬಳಿಕ ನಡೆಯುವ ಘಟನೆಗಳನ್ನು ವಿವೇಕ್ ಕಟ್ಟಿಕೊಡಲಿದ್ದಾರೆ.

ಜಮ್ಮು ಕಾಶ್ಮೀರದ ಪೆಹಲ್ಗಾಮ್​​ ಅಲ್ಲಿ ಉಗ್ರರು ದಾಳಿ ಮಾಡಿದರು. ವಿವಾಹಿತರಲ್ಲಿ ಪುರಷರನ್ನೇ ಟಾರ್ಗೆಟ್ ಮಾಡಿ ಈ ದಾಳಿ ನಡೆಸಲಾಯಿತು. ಒಟ್ಟೂ 26 ಜನ ಟೂರಿಸ್ಟ್​ಗಳನ್ನು ಕೊಲ್ಲಲಾಯಿತು. ಈ ದಾಳಿ ಇಡೀ ಭಾರತವೇ ತತ್ತರಿಸುವಂತೆ ಮಾಡಿತು. ಇದಕ್ಕೆ ಪ್ರತಿಯಾಗಿ ಭಾರತ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ನಡೆಸಿತು. ಪಾಕಿಸ್ತಾನ ಹಾಗೂ ಪಾಕಿಸ್ತಾ ಆಕ್ರಮಿತ ಭಾಗಗಳ ಮೇಲೆ ಭಾರತ ದಾಳಿ ನಡೆಸಿತು. ಈ ಘಟನೆ ಆಧರಿಸಿ ‘ಆಪರೇಷನ್ ಸಿಂಧೂರ್’ ಮಾಡಲಾಗುದು ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ.

‘ಕೆಲವು ಕಥೆಗಳನ್ನು ಆಯ್ಕೆ ಮಾಡಲಾಗುವುದಿಲ್ಲ, ಅವು ನಿಮ್ಮನ್ನು ಆಯ್ಕೆ ಮಾಡುತ್ತವೆ. ಆಪರೇಷನ್ ಸಿಂಧೂರ್ ಅಂತಹ ಕಥೆಗಳಲ್ಲಿ ಒಂದು. ಪ್ರಾಮಾಣಿಕತೆ, ಧೈರ್ಯ ಮತ್ತು ಜವಾಬ್ದಾರಿಯಿಂದ ಹೇಳಬೇಕಾದ ಕಥೆ. ಇದು ಕೇವಲ ಸಿನಿಮಾ ಅಲ್ಲ, ಇದು ವಿಷಯಗಳನ್ನು ಹೊರಜಗತ್ತಿಗೆ ತೋರಿಸುವ ಪ್ರಕ್ರಿಯೆ. ಒಂದು ರಾಷ್ಟ್ರದಲ್ಲಿ ಇಷ್ಟು ದೊಡ್ಡ ಘಟನೆ ನಡೆದಾಗ ಅವುಗಳನ್ನು ಸತ್ಯಗಳನ್ನು ಹೇಳಿ ದಾಖಲಿಸುವುದು ಮುಖ್ಯವಾಗುತ್ತದೆ’ ಎಂದು ನಿರ್ಮಾಪಕ ಭೂಷಣ್ ಕುಮಾರ್ ಹೇಳಿದ್ದಾರೆ.

ನಿರ್ದೇಶಕ-ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಮಾತನಾಡಿ, ‘ಭಾರತವು ಪೆಹಲ್ಗಾಮ್ ಭಯೋತ್ಪಾದನಾ ದಾಳಿಗೆ ಸೇಡು ತೀರಿಸಿಕೊಂಡಿದೆ. ಪಾಕಿಸ್ತಾನವನ್ನು ಶಿಕ್ಷಿಸಿದೆ ಮಾತ್ರವಲ್ಲದೆ, ಆಧುನಿಕ ಯುದ್ಧದಲ್ಲೂ ತನ್ನ ಶಕ್ತಿಯನ್ನು ಪ್ರದರ್ಶಿಸಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಪರೇಷನ್ ಸಿಂದೂರ್ ಕುರಿತು ಸಿನಿಮಾ ಮಾಡಲಿರುವ ವಿವೇಕ್ ಅಗ್ನಿಹೋತ್ರಿ

ಸದ್ಯ, ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿದೆ. ಭಾರತ ನಡೆಸಿದ ಆಪರೇಷನ್ ಆಧಾರವನ್ನು ಸ್ಫೂರ್ತಿಯಾಗಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವಿವೇಕ್ ಅಗ್ನಿಹೋತ್ರಿ ಈ ಚಿತ್ರ ಘೋಷಿಸಿದರೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಮುದ್ರದಾಳದಲ್ಲಿ ಪತ್ನಿಗೆ ಪ್ರಪೋಸ್ ಮಾಡಿದ ಧನರಾಜ್; ವಿಡಿಯೋ ವೈರಲ್
ಸಮುದ್ರದಾಳದಲ್ಲಿ ಪತ್ನಿಗೆ ಪ್ರಪೋಸ್ ಮಾಡಿದ ಧನರಾಜ್; ವಿಡಿಯೋ ವೈರಲ್
ಕೆಲಸ ಕಳೆದುಕೊಂಡ ಸ್ನೇಹಿತನಿಗೆ ತನ್ನ 37 ಲಕ್ಷ ರೂ. ಬೆಲೆಯ ಕಾರನ್ನೇ ಕೊಟ್ಟ
ಕೆಲಸ ಕಳೆದುಕೊಂಡ ಸ್ನೇಹಿತನಿಗೆ ತನ್ನ 37 ಲಕ್ಷ ರೂ. ಬೆಲೆಯ ಕಾರನ್ನೇ ಕೊಟ್ಟ
ದೇವರಂತಿರಬೇಕಾದ ವೈದ್ಯನಿಂದಲೇ ವೃದ್ಧ ರೋಗಿ ಮೇಲೆ ಮಾರಣಾಂತಿಕ ಹಲ್ಲೆ
ದೇವರಂತಿರಬೇಕಾದ ವೈದ್ಯನಿಂದಲೇ ವೃದ್ಧ ರೋಗಿ ಮೇಲೆ ಮಾರಣಾಂತಿಕ ಹಲ್ಲೆ
ಕೋಪವೇ ಮನುಷ್ಯನ ದಾರಿದ್ರ್ಯಕ್ಕೆ ಕಾರಣವಾ?
ಕೋಪವೇ ಮನುಷ್ಯನ ದಾರಿದ್ರ್ಯಕ್ಕೆ ಕಾರಣವಾ?
ಇಂದು ಈ ರಾಶಿಯವರು ಕಡಿಮೆ ಚರ್ಚೆ ಮಾಡಿದರೆ ಒಳಿತು
ಇಂದು ಈ ರಾಶಿಯವರು ಕಡಿಮೆ ಚರ್ಚೆ ಮಾಡಿದರೆ ಒಳಿತು
ಆಲ್ಕೋಹಾಲ್ ಸೇವಿಸುತ್ತಾ ಪ್ರಶ್ನೆ ಪತ್ರಿಕೆ ಪರಿಶೀಲಿಸುತ್ತಿರುವ ಶಿಕ್ಷಕ!
ಆಲ್ಕೋಹಾಲ್ ಸೇವಿಸುತ್ತಾ ಪ್ರಶ್ನೆ ಪತ್ರಿಕೆ ಪರಿಶೀಲಿಸುತ್ತಿರುವ ಶಿಕ್ಷಕ!
ಧ್ರುವ ಸರ್ಜಾ, ದರ್ಶನ್ ಮುನಿಸಿಗೆ ಕಾರಣ ಏನು? ಮಾಜಿ ಮ್ಯಾನೇಜರ್​ಗೆ ಪ್ರಶ್ನೆ
ಧ್ರುವ ಸರ್ಜಾ, ದರ್ಶನ್ ಮುನಿಸಿಗೆ ಕಾರಣ ಏನು? ಮಾಜಿ ಮ್ಯಾನೇಜರ್​ಗೆ ಪ್ರಶ್ನೆ
ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು?
ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು?
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ