AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧುರಂಧರ್ ಗೆಲುವಿನ ಎಫೆಕ್ಟ್: ನೋರಾ ಫತೇಹಿ ಜೊತೆ ಡ್ಯಾನ್ಸ್ ಮಾಡಿದ ರಾಕೇಶ್ ಬೇಡಿ

ಗ್ಲಾಮರಸ್ ನಟಿ ನೋರಾ ಫತೇಹಿ ಜೊತೆಗೆ ರಾಕೇಶ್ ಬೇಡಿ ಹೆಜ್ಜೆ ಹಾಕಿದ್ದಾರೆ. ಹೊಸ ಹಾಡಿನ ಬಗ್ಗೆ ಅವರು ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ರಾಕೇಶ್ ಬೇಡಿ ಜೊತೆ ಡ್ಯಾನ್ಸ್ ಮಾಡಿದ್ದಕ್ಕೆ ನೋರಾ ಫತೇಹಿ ಅವರಿಗೂ ಖುಷಿ ಆಗಿದೆ. ಈ ಹಾಡು ಹಿಟ್ ಆಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಧುರಂಧರ್ ಗೆಲುವಿನ ಎಫೆಕ್ಟ್: ನೋರಾ ಫತೇಹಿ ಜೊತೆ ಡ್ಯಾನ್ಸ್ ಮಾಡಿದ ರಾಕೇಶ್ ಬೇಡಿ
Rakesh Bedi, Nora Fatehi
ಮದನ್​ ಕುಮಾರ್​
|

Updated on: May 06, 2026 | 9:46 AM

Share

ಆದಿತ್ಯ ಧರ್ ನಿರ್ದೇಶನದ ಸ್ಪೈ ಥ್ರಿಲ್ಲರ್ ‘ಧುರಂಧರ್’ (Dhurandhar) ಚಿತ್ರದಲ್ಲಿ ಜಮೀಲ್ ಜಮಾಲಿ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಹಿರಿಯ ನಟ ರಾಕೇಶ್ ಬೇಡಿ ಅವರಿಗೆ ಬೇಡಿಕೆ ಹೆಚ್ಚಾಗಿದೆ. ಈಗ ಅವರು ತಮ್ಮ ನೃತ್ಯದ ಮೂಲಕ ಕಮಾಲ್ ಮಾಡಲು ಸಜ್ಜಾಗಿದ್ದಾರೆ. ಬಾಲಿವುಡ್‌ನ ಡ್ಯಾನ್ಸಿಂಗ್ ಸೆನ್ಸೇಷನ್ ನೋರಾ ಫತೇಹಿ (Nora Fatehi) ಜೊತೆ ರಾಕೇಶ್ ಬೇಡಿ ಹೆಜ್ಜೆ ಹಾಕುತ್ತಿದ್ದಾರೆ. ‘ಧುರಂಧರ್’ ಗೆಲುವಿನ ಬಳಿಕ ರಾಕೇಶ್ ಬೇಡಿ (Rakesh Bedi) ಅವರಿಗೆ ಇಂಥ ಹಲವು ಆಫರ್​ಗಳು ಬರುತ್ತಿವೆ. ಹೊಸ ಹಾಡಿನ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ರಾಕೇಶ್ ಬೇಡಿ ಅವರು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ನೋರಾ ಫತೇಹಿ ಜೊತೆಗಿನ ಶೂಟಿಂಗ್ ಅನುಭವವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮಾತನಾಡುತ್ತಾ, ‘ಇಂದು ನಾನು ಭಾರತದ ದೊಡ್ಡ ಸೆನ್ಸೇಷನ್, ಅದ್ಭುತ ನಟಿ ಮತ್ತು ಅದ್ಭುತ ಡ್ಯಾನ್ಸರ್ ನೋರಾ ಫತೇಹಿ ಜೊತೆ ಶೂಟಿಂಗ್ ಮಾಡುತ್ತಿದ್ದೇನೆ’ ಎಂದು ಹೇಳಿದ್ದಾರೆ.

ವಿಡಿಯೋದಲ್ಲಿ ನೋರಾ ಫತೇಹಿ ಕೂಡ ರಾಕೇಶ್ ಬೇಡಿ ಅವರ ನೃತ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಸರ್, ನಿಮ್ಮ ಜೊತೆ ಕೆಲಸ ಮಾಡಲು ನಮಗೆ ತುಂಬಾ ಸಂತೋಷವಾಗುತ್ತಿದೆ. ನಿಮ್ಮ ಡ್ಯಾನ್ಸ್ ಅದ್ಭುತವಾಗಿದೆ. ನಿಮ್ಮ ನೃತ್ಯದ ವೇಗಕ್ಕೆ ಮ್ಯಾಚ್ ಮಾಡಲು ನಾನು ಪ್ರಯತ್ನಿಸುತ್ತಿದ್ದೇನೆ. ಜನರಿಗೆ ಈ ಹಾಡನ್ನು ತೋರಿಸಲು ನಾನು ಕಾಯುತ್ತಿದ್ದೇನೆ’ ಎಂದು ನೋರಾ ಹೇಳಿದ್ದಾರೆ.

View this post on Instagram

A post shared by Rakesh Bedi (@therakeshbedi)

ಇದಕ್ಕೆ ತಮಾಷೆಯಾಗಿ ಪ್ರತಿಕ್ರಿಯಿಸಿದ ರಾಕೇಶ್ ಬೇಡಿ, ‘ಈಕೆ ಎಷ್ಟು ಸುಳ್ಳು ಹೇಳುತ್ತಾಳೆ ನೋಡಿ’ ಎಂದು ಕಾಲೆಳೆದಿದ್ದಾರೆ. ಕೂಡಲೇ ನಕ್ಕ ನೋರಾ, ‘ಇಲ್ಲ ಸರ್, ನಾನು ನಿಜ ಹೇಳುತ್ತಿದ್ದೇನೆ. ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ. ಮದುವೆ ಸಮಾರಂಭಗಳಲ್ಲಿ ಈ ಹಾಡು ಖಂಡಿತವಾಗಿಯೂ ಸದ್ದು ಮಾಡಲಿದೆ’ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಧುರಂಧರ್’ ಗೆದ್ದಿದ್ದಕ್ಕೆ ನಟ ರಾಕೇಶ್ ಬೇಡಿಗೆ 1 ಕೋಟಿ ರೂಪಾಯಿ ಬೋನಸ್ ಕೊಟ್ಟ ನಿರ್ಮಾಪಕರು

‘ಧುರಂಧರ್’ ಚಿತ್ರದಲ್ಲಿ ಪಾಕಿಸ್ತಾನಿ ರಾಜಕಾರಣಿ ಜಮೀಲ್ ಜಮಾಲಿ ಪಾತ್ರ ನಿರ್ವಹಿಸಿದ್ದ ರಾಕೇಶ್ ಬೇಡಿ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಚಿತ್ರದ ಯಶಸ್ಸಿನ ನಂತರ ಅವರು ಹಲವು ಜಾಹೀರಾತುಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ಈಗ ನೋರಾ ಫತೇಹಿ ಅವರಂತಹ ಖ್ಯಾತ ನರ್ತಕಿಯ ಜೊತೆ ವಿಶೇಷ ಹಾಡಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!