AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದಿಂದ ರಣವೀರ್ ಸಿಂಗ್‌ ಬ್ಯಾನ್; ಸಿನಿಮಾ ನೌಕರರ ಒಕ್ಕೂಟದಿಂದ ಕಠಿಣ ನಿರ್ಧಾರ

‘ಡಾನ್ 3’ ಸಿನಿಮಾದ ನಿರ್ಮಾಪಕರ ಜೊತೆ ರಣವೀರ್ ಸಿಂಗ್ ಮಾಡಿಕೊಂಡ ವಿವಾದದಿಂದ ಈ ಪರಿಸ್ಥಿತಿ ಬಂದಿದೆ. ಚಿತ್ರರಂಗದಲ್ಲಿ ಅವರನ್ನು ಬ್ಯಾನ್ ಮಾಡಲು ನಿರ್ಧರಿಸಲಾಗಿದೆ. ಸಿನಿಮಾ ನೌಕರರ ಒಕ್ಕೂಟದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಈ ತೀರ್ಮಾನ ತಿಳಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಚಿತ್ರರಂಗದಿಂದ ರಣವೀರ್ ಸಿಂಗ್‌ ಬ್ಯಾನ್; ಸಿನಿಮಾ ನೌಕರರ ಒಕ್ಕೂಟದಿಂದ ಕಠಿಣ ನಿರ್ಧಾರ
Ranveer Singh
ಮದನ್​ ಕುಮಾರ್​
|

Updated on: May 25, 2026 | 6:27 PM

Share

ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್‌ (Ranveer Singh) ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದಿಂದ ರಣವೀರ್ ಸಿಂಗ್ ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ, ಸಿನಿಮಾ ನೌಕರರ ಒಕ್ಕೂಟವು (FWICE) ನಟನ ವಿರುದ್ಧ ಅಸಹಕಾರ ತೋರಲು ನಿರ್ಧರಿಸಿದೆ. ಈ ಮೂಲಕ ಚಿತ್ರರಂಗದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಯಾರೂ ಸಹಕರಿಸದಂತೆ ಮತ್ತು ಕೆಲಸ ಮಾಡದಂತೆ ಸೂಚಿಸಿ, ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. ಕಳೆದ ವಾರ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಿದ್ದ ಫೆಡರೇಶನ್, ಸೋಮವಾರ (ಮೇ 25) ತನ್ನ ಅಧಿಕೃತ ನಿರ್ಧಾರವನ್ನು ಪ್ರಕಟಿಸಿದೆ.

ಫರ್ಹಾನ್ ಅಖ್ತರ್ ಮತ್ತು ರಿತೇಶ್ ಸಿಧ್ವಾನಿ ಅವರ ಒಡೆತನದ ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಬ್ಯಾನರ್ ಅಡಿಯಲ್ಲಿ ‘ಡಾನ್ 3’ ಸಿನಿಮಾ ಸಿದ್ಧವಾಗುತ್ತಿತ್ತು. ಶೂಟಿಂಗ್ ಆರಂಭವಾಗಲು ಕೆಲವೇ ದಿನಗಳು ಬಾಕಿ ಇರುವಾಗ ರಣವೀರ್ ಸಿಂಗ್ ಈ ಚಿತ್ರದಿಂದ ಹೊರನಡೆದರು. ಈ ದಿಢೀರ್ ನಿರ್ಧಾರದಿಂದ ನಿರ್ಮಾಣ ಸಂಸ್ಥೆಗೆ ಭಾರೀ ನಷ್ಟ ಉಂಟಾಗಿದೆ ಎಂದು ಹೇಳಲಾಗಿದೆ. ಚಿತ್ರದ ಪ್ರಿ-ಪ್ರೊಡಕ್ಷನ್ ಮತ್ತು ಪ್ರಮುಖ ಯೋಜನೆಗಳಿಗಾಗಿ ಈಗಾಗಲೇ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿತ್ತು.

FWICE ಮುಖ್ಯ ಸಲಹೆಗಾರ ಅಶೋಕ್ ಪಂಡಿತ್ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ‘ಚಿತ್ರೀಕರಣಕ್ಕೆ ಕೆಲವೇ ದಿನಗಳಿರುವಾಗ ನಟರು ಈ ರೀತಿ ಸಿನಿಮಾದಿಂದ ಹೊರನಡೆಯುವ ಪ್ರವೃತ್ತಿ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇದು ಸರಿಯಲ್ಲ’ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. FWICE ಅಧ್ಯಕ್ಷ ಬಿ.ಎನ್ ತಿವಾರಿ, ಮುಖ್ಯ ಸಲಹೆಗಾರ ಅಶೋಕ್ ಪಂಡಿತ್, ಪ್ರಧಾನ ಕಾರ್ಯದರ್ಶಿ ಅಶೋಕ್ ದುಬೆ ಮತ್ತು ಖಜಾಂಚಿ ಗಂಗೇಶ್ವರಲಾಲ್ ಶ್ರೀವಾಸ್ತವ್ ಅವರನ್ನೊಳಗೊಂಡ ಉನ್ನತ ಮಟ್ಟದ ಆಂತರಿಕ ಸಭೆಯ ನಂತರ ಈ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಇದಕ್ಕೂ ಮುನ್ನ ಈ ವಿವಾದವು ನಿರ್ಮಾಪಕರ ಸಂಘದ ಮೆಟ್ಟಿಲೇರಿತ್ತು. ಅಲ್ಲಿ ಹಿರಿಯ ನಿರ್ಮಾಪಕರು ರಣವೀರ್ ಸಿಂಗ್ ಹಾಗೂ ಎಕ್ಸೆಲ್ ಎಂಟರ್‌ಟೈನ್‌ಮೆಂಟ್ ನಡುವೆ ರಾಜಿ ಸಂಧಾನ ಮಾಡಲು ಪ್ರಯತ್ನಿಸಿದ್ದರು. ಆದರೆ, ನಷ್ಟ ಪರಿಹಾರ ಹಾಗೂ ಸೆಟಲ್ಮೆಂಟ್ ಕುರಿತ ಮಾತುಕತೆಗಳು ಸಫಲವಾಗದ ಕಾರಣ ಈಗ ಫೆಡರೇಶನ್ ಕಠಿಣ ಕ್ರಮಕ್ಕೆ ಮುಂದಾಗಿದೆ.

ಇದನ್ನೂ ಓದಿ: ‘ಧುರಂಧರ್’ ಗೆದ್ದರೂ ರಣವೀರ್ ಸಿಂಗ್ ‘ಶಕ್ತಿಮಾನ್’ ಆಗಲು ಸಾಧ್ಯವಿಲ್ಲ: ಕಾರಣ ಏನು?

ಈ ಬ್ಯಾನ್ ಆದೇಶವು ರಣವೀರ್ ಸಿಂಗ್ ಅವರ ಮುಂಬರುವ ಇತರ ಸಿನಿಮಾಗಳ ಮೇಲೂ ಪರಿಣಾಮ ಬೀರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ‘ಧುರಂಧರ್’ ಯಶಸ್ಸಿನ ನಂತರ ರಣವೀರ್ ಸಿಂಗ್ ಅವರಿಗೆ ಬೇಡಿಕೆ ಹೆಚ್ಚಿದೆ. ಅದರ ನಡುವೆಯೂ ಅವರು ಬ್ಯಾನ್ ಆಗಿರುವುದರಿಂದ ವೃತ್ತಿಜೀವನಕ್ಕೆ ಸವಾಲಾಗಿದೆ. ಈ ಬಗ್ಗೆ ಅವರು ಯಾವ ರೀತಿ ಪ್ರತಿಕ್ರಿಯೆ ನೀಡಬಹುದು ಎಂಬ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೆಪಿಎಸ್​​ಸಿ ಹಗರಣ: ಆರೋಪಿ ಬಸವರಾಜ ಬಗ್ಗೆ ಸ್ಫೋಟ ಅಂಶ ಬಿಚ್ಚಿಟ್ಟ ಖಂಡ್ರೆ
ಕೆಪಿಎಸ್​​ಸಿ ಹಗರಣ: ಆರೋಪಿ ಬಸವರಾಜ ಬಗ್ಗೆ ಸ್ಫೋಟ ಅಂಶ ಬಿಚ್ಚಿಟ್ಟ ಖಂಡ್ರೆ
ಮೋಡ ಬಿತ್ತನೆ ಕಾರ್ಯಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
ಮೋಡ ಬಿತ್ತನೆ ಕಾರ್ಯಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
ಜಗದೊದ್ಧಾರನ ಆಡಿಸಿದಳೆಶೋದೆ ಕೀರ್ತನೆ ಹುಟ್ಟಿದ ತಾಣದಲ್ಲಿ ಜನ್ಮಾಷ್ಟಮಿಸಂಭ್ರಮ
ಜಗದೊದ್ಧಾರನ ಆಡಿಸಿದಳೆಶೋದೆ ಕೀರ್ತನೆ ಹುಟ್ಟಿದ ತಾಣದಲ್ಲಿ ಜನ್ಮಾಷ್ಟಮಿಸಂಭ್ರಮ
ಸದ್ದಿಲ್ಲದೆ ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ ನೀರು!
ಸದ್ದಿಲ್ಲದೆ ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ ನೀರು!
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!