AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್’ ಕಲೆಕ್ಷನ್ ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು; ರಣವೀರ್ ಕೆರಿಯರ್​ನಲ್ಲಿ ಹೊಸ ಮೈಲಿಗಲ್ಲು

ರಣವೀರ್ ಸಿಂಗ್ ಅವರ 'ಧುರಂಧರ್' ಸಿನಿಮಾ ನೆಗೆಟಿವ್ ಮಾತುಗಳನ್ನು ಮೀರಿ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ. ರಣವೀರ್ ವೃತ್ತಿಜೀವನದಲ್ಲೇ ಅತಿ ದೊಡ್ಡ ಓಪನಿಂಗ್ ಪಡೆದ ಚಿತ್ರ ಇದಾಗಿದೆ. ಆದರೆ, ಮಾರ್ಚ್ 19ಕ್ಕೆ ಇದರ ಸೀಕ್ವೆಲ್ 'ಟಾಕ್ಸಿಕ್' ಜೊತೆ ರಿಲೀಸ್ ಆಗುವ ಸಾಧ್ಯತೆ ಇದ್ದು, ಭವಿಷ್ಯದಲ್ಲಿ ತೊಂದರೆ ಎದುರಿಸಬಹುದು.

‘ಧುರಂಧರ್’ ಕಲೆಕ್ಷನ್ ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು; ರಣವೀರ್ ಕೆರಿಯರ್​ನಲ್ಲಿ ಹೊಸ ಮೈಲಿಗಲ್ಲು
ಧುರಂಧರ್
ರಾಜೇಶ್ ದುಗ್ಗುಮನೆ
|

Updated on:Dec 06, 2025 | 7:02 AM

Share

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ (Dhurandhar Movie) ಸಾಕಷ್ಟು ನೆಗೆಟಿವ್ ವಿಷಯಗಳ ಜೊತೆ ರಿಲೀಸ್ ಆಯಿತು. ಸಿನಿಮಾ ರಿಲೀಸ್ ಆಗುವ ಮೊದಲೇ ಈ ಚಿತ್ರಕ್ಕೆ ಅನೇಕರು ನೆಗೆಟಿವ್ ಪ್ರಚಾರ ಕೊಟ್ಟರು. ಸಿನಿಮಾ ಬಜೆಟ್ 300 ಕೋಟಿ ರೂಪಾಯಿ. ಈ ಸಿನಿಮಾದ ಗಳಿಕೆ ಮೊದಲ ದಿನ 18 ಕೋಟಿ ರೂಪಾಯಿ ಆಗಬಹುದು ಎಂದು ಎಲ್ಲರೂ ಊಹಿಸಿದ್ದರು. ಆದರೆ, ಈ ಊಹೆಗೂ ಹೆಚ್ಚಿನ ಗಳಿಕೆ ಈ ಚಿತ್ರದಿಂದ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಪ್ರೀ ಬುಕಿಂಗ್ ಆಧರಿಸಿ ‘ಧುರಂಧರ್’ ಸಿನಿಮಾ ಫ್ಲಾಪ್ ಆಗಲಿದೆ ಎಂದು ಅನೇಕರು ಭವಿಷ್ಯ ನುಡಿದಿದ್ದರು. ಆದರೆ, ಆ ರೀತಿ ಆಗಿಲ್ಲ. ಈ ಸಿನಿಮಾಗೆ ಸಿಕ್ಕ ಉತ್ತಮ ವಿಮರ್ಶೆ ಕಾರಣದಿಂದ ಈ ಚಿತ್ರ ಮೊದಲ ದಿನ 27 ಕೋಟಿ ರೂಪಾಯಿ ಗಳಿಸಿದೆ. ರಣವೀರ್ ಸಿಂಗ್ ವೃತ್ತಿ ಜೀವನದಲ್ಲೇ ಅವರ ಚಿತ್ರವೊಂದು ಮೊದಲ ದಿನ ಇಷ್ಟು ದೊಡ್ಡ ಮೊತ್ತದ ಓಪನಿಂಗ್ ಕಂಡಿರಲಿಲ್ಲ. ಈಗ ಈ ಚಿತ್ರಕ್ಕೆ ಆ ಸ್ಥಾನ ಸಿಕ್ಕಿದೆ.

ರಣವೀರ್ ಸಿಂಗ್ ನಟನೆಯ ‘ಪದ್ಮಾವತ್’ ಸಾಕಷ್ಟು ವಿವಾದಗಳ ಜೊತೆ ರಿಲೀಸ್ ಆಯಿತು. ಕೆಲವು ರಾಜ್ಯಗಳಲ್ಲಿ ಚಿತ್ರ ಬ್ಯಾನ್ ಕೂಡ ಆಯಿತು. ಈ ಸಿನಿಮಾ ಮೊದಲ ದಿನ ಮಾಡಿದ ಕಲೆಕ್ಷನ್ 24 ಕೋಟಿ ರೂಪಾಯಿ. ಈಗ ಆ ದಾಖಲೆಯನ್ನು ‘ಧುರಂಧರ್’ ಸಿನಿಮಾ ಮುರಿದಿದೆ.

‘ಧುರಂಧರ್’ ಚಿತ್ರದ ರನ್ ಟೈಮ್ ಬಗ್ಗೆ ಅನೇಕರಿಗೆ ಅಸಮಾಧಾನ ಇದೆ. ಈ ಚಿತ್ರಕ್ಕೆ ಸೀಕ್ವೆಲ್ ಮಾರ್ಚ್ 19ರಂದು ರಿಲೀಸ್ ಆಗಲಿದೆಯಂತೆ. ಈ ಚಿತ್ರಕ್ಕೆ ಇನ್ನೂ ಪಾರ್ಟ್ 3, ಪಾರ್ಟ್ 4 ಮಾಡುವ ಆಲೋಚನೆಯಲ್ಲಿ ತಂಡ ಇದೆ. ಇದನ್ನು ಜನರು ಇಷ್ಟಪಡದೆ ಇರಬಹುದು.

ಇದನ್ನೂ ಓದಿ: ‘ಧುರಂಧರ್’ ರಿಲೀಸ್​ಗೂ ಮೊದಲೇ ರಣವೀರ್​ಗೆ ಬೆಂಗಳೂರಲ್ಲಿ ಎದುರಾಯ್ತು ದೊಡ್ಡ ಸಂಕಷ್ಟ

ಈಗಾಗಲೇ ಮಾರ್ಚ್ 19ರಂದು ಕನ್ನಡದ ‘ಟಾಕ್ಸಿಕ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಇದೇ ಸಂದರ್ಭದಲ್ಲಿ ‘ಧುರಂಧರ್’ ಸೀಕ್ವೆಲ್ ಬಂದರೆ ಚಿತ್ರ ಸಾಕಷ್ಟು ತೊಂದರೆ ಅನುಭವಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:00 am, Sat, 6 December 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು