AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಬಾಕ್ಸ್ ಆಫೀಸ್​​​ನಲ್ಲಿ ‘ಕಾಂತಾರ: ಚಾಪ್ಟರ್ 1’ ಗಳಿಕೆ ಹಿಂದಿಕ್ಕಿದ ‘ಧುರಂಧರ್’

ರಣವೀರ್ ಸಿಂಗ್ ನಟನೆಯ 'ಧುರಂದರ್' 2025ರ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾವಾಗಿ ಹೊರಹೊಮ್ಮಿದೆ. 935 ಕೋಟಿ ಗಳಿಸಿ, 'ಕಾಂತಾರ: ಚಾಪ್ಟರ್ 1' ದಾಖಲೆ ಮುರಿದಿದೆ. ಭಾರತದಲ್ಲಿ 600 ಕೋಟಿ ಗಳಿಸಿದ್ದು, ಅಲ್ಪಾವಧಿಯಲ್ಲೇ 1000 ಕೋಟಿ ಕ್ಲಬ್ ಸೇರುವ ಸಾಧ್ಯತೆ ಇದೆ.

ವಿಶ್ವ ಬಾಕ್ಸ್ ಆಫೀಸ್​​​ನಲ್ಲಿ ‘ಕಾಂತಾರ: ಚಾಪ್ಟರ್ 1’ ಗಳಿಕೆ ಹಿಂದಿಕ್ಕಿದ ‘ಧುರಂಧರ್’
ಧುರಂಧರ್-ಕಾಂತಾರ
ರಾಜೇಶ್ ದುಗ್ಗುಮನೆ
|

Updated on: Dec 25, 2025 | 11:58 AM

Share

ರಣವೀರ್ ಸಿಂಗ್ ನಟನೆಯ ‘ಧುರಂದರ್’ (Dhurandhar) 2025ರ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಆಗಿ ಹೊರ ಹೊಮ್ಮಿದೆ. ಈ ಚಿತ್ರದ ವಿಶ್ವ ಮಟ್ಟದ ಕಲೆಕ್ಷನ್ 935 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಮೂಲಕ ‘ಕಾಂತಾರ: ಚಾಪ್ಟರ್ 1’ ಚಿತ್ರದ ಗಳಿಕೆಯನ್ನು ಈ ಸಿನಿಮಾ ಹಿಂದಿಕ್ಕಿಬಿಟ್ಟಿದೆ. ಈ ಚಿತ್ರ ಸುಲಭದಲ್ಲಿ ಶೀಘ್ರವೇ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರುವ ಎಲ್ಲಾ ಸಾಧ್ಯತೆ ಇದೆ. ಚಿತ್ರ ತಂಡಕ್ಕೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಿದ್ದಾರೆ. ಈ ಸಿನಿಮಾ ಸೂಪರ್ ಹಿಟ್ ಆಯಿತು. ರಿಷಬ್ ಅವರೇ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಈ ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಇದಾಗಿತ್ತು. ಈ ಚಿತ್ರದ ದಾಖಲೆಯನ್ನು ಈಗ ‘ಧುರಂಧರ್’ ಮುರಿದು ಹಾಕಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಒಟ್ಟಾರೆ ಕಲೆಕ್ಷನ್ 850 ಕೋಟಿ ರೂಪಾಯಿ ಆಗಿತ್ತು. ‘ಧುರಂಧರ್’ ಕಲೆಕ್ಷನ್ 900 ಕೋಟಿ ರೂಪಾಯಿ ದಾಟಿದೆ. ಹಲವು ದೇಶಗಳಲ್ಲಿ ಸಿನಿಮಾ ‘ಧುರಂಧರ್’ ಬ್ಯಾನ್ ಆಗಿದೆ. ಆದಾಗ್ಯೂ ಸಿನಿಮಾ ಕಲೆಕ್ಷನ್ ತಗ್ಗಿಲ್ಲ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​​ನಲ್ಲಿ 600 ಕೋಟಿ ರೂಪಾಯಿ ಗಳಿಸಿದೆ.

20ನೇ ದಿನವೂ ‘ಧುರಂಧರ್’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ 17 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ವೀಕೆಂಡ್ ಒಳಗೆ ಚಿತ್ರ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ರೂಪಾಯಿ ಗಳಿಸೋ ಸಾಧ್ಯತೆ ಇದೆ. ಈ ಮೂಲಕ ಈ ವರ್ಷದ ಮೊದಲ ಸಾವಿರ ಕೋಟಿ ರೂಪಾಯಿ ಕ್ಲಬ್ ಸಿನಿಮಾ ಇದಾಗೋ ಸಾಧ್ಯತೆ ಇದೆ.

ಇದನ್ನೂ ಓದಿ: ‘ಧುರಂಧರ್’ ಯಶಸ್ಸಿನ ಬಳಿಕ ‘ದೃಶ್ಯಂ 3’ ಚಿತ್ರದಿಂದ ಹೊರಬಂದ ಅಕ್ಷಯ್ ಖನ್ನಾ?

‘ಧುರಂಧರ್’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ಆದಿತ್ಯ ಧಾರ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಸಾಕಷ್ಟು ನೆಗೆಟಿವ್ ಟಾಕ್ ಪಡೆದಿತ್ತು. ಆದಾಗ್ಯೂ ‘ಧುರಂಧರ್’ ಗೆದ್ದು ಬೀಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್