AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್’ ಅಬ್ಬರಕ್ಕೆ 2ನೇ ಭಾನುವಾರ ಬಾಕ್ಸ್ ಆಫೀಸ್​​ ಶೇಕ್; 350 ಕೋಟಿ ಬಾಚಿದ ರಣವೀರ್ ಚಿತ್ರ

ರಣವೀರ್ ಸಿಂಗ್ ನಟನೆಯ 'ಧುರಂಧರ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಯಶಸ್ಸು ಗಳಿಸಿದೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರ ಈಗಾಗಲೇ 350 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಚಿತ್ರವು 500 ಕೋಟಿ ರೂ. ತಲುಪುವ ನಿರೀಕ್ಷೆಯಿದೆ. ಇದು ರಣವೀರ್ ಸಿಂಗ್ ವೃತ್ತಿಜೀವನಕ್ಕೆ ಹೊಸ ಚೈತನ್ಯ ನೀಡಿದೆ.

‘ಧುರಂಧರ್’ ಅಬ್ಬರಕ್ಕೆ 2ನೇ ಭಾನುವಾರ ಬಾಕ್ಸ್ ಆಫೀಸ್​​ ಶೇಕ್; 350 ಕೋಟಿ ಬಾಚಿದ ರಣವೀರ್ ಚಿತ್ರ
ಧುರಂಧರ್
ರಾಜೇಶ್ ದುಗ್ಗುಮನೆ
|

Updated on: Dec 15, 2025 | 8:52 AM

Share

ರಣವೀರ್ ಸಿಂಗ್ ನಟನೆಯ ‘ಧುರಂಧರ್’ (Dhurandhar) ಇಡೀ ಬಾಲಿವುಡ್ ಬಾಕ್ಸ್ ಆಫೀಸ್​ನ ಶೇಕ್ ಮಾಡಿ ಬಿಟ್ಟಿದೆ. ಈ ಚಿತ್ರ ನೋಡಿದ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಮೊದಲು ಕೆಲವು ದಿನ ಸಾಧಾರಣ ಇದ್ದ ಕಲೆಕ್ಷನ್ ನಂತರ ಹೆಚ್ಚಿತು. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಬಾಯ್ಮಾತಿನ ಪ್ರಚಾರದಿಂದ ಸಿನಿಮಾ ದೊಡ್ಡ ಗೆಲುವಿನತ್ತ ಧಾಪುಗಾಲು ಹಾಕುತ್ತಿದೆ. ಸಿನಿಮಾದ ಭಾರತದ ಕಲೆಕ್ಷನ್ 350 ಕೋಟಿ ರೂಪಾಯಿ ದಾಟಿದೆ.

ಆದಿತ್ಯ ಧಾರ್ ಅವರು ‘ಉರಿ’ ಹೆಸರಿನ ಸಿನಿಮಾ ಮಾಡಿದರು. ಸರ್ಜಿಕಲ್ ಸ್ಟ್ರೈಕ್ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಯಿತು. ಈ ಚಿತ್ರ ಸೂಪರ್ ಹಿಟ್ ಆಯಿತು. ವಿಕ್ಕಿ ಕೌಶಲ್ ವೃತ್ತಿ ಜೀವನಕ್ಕೆ ದೊಡ್ಡ ಗೆಲುವು ತಂದುಕೊಟ್ಟ ಚಿತ್ರ ಇದಾಗಿದೆ. ಈಗ ಆದಿತ್ಯ ಧಾರ್ ಅವರು ‘ಧುರಂಧರ್’ ಸಿನಿಮಾ ನಿರ್ದೇಶನ ಮಾಡಿ ಗಮನ ಸೆಳೆದಿದ್ದಾರೆ. ಕಷ್ಟದಲ್ಲಿದ್ದ ರಣವೀರ್ ವೃತ್ತಿ ಜೀವನವನ್ನು ಮೇಲಕ್ಕೆ ಎತ್ತಿದ್ದಾರೆ.

‘ಧುರಂಧರ್’ ಸಿನಿಮಾ ಯಶಸ್ಸಿನ ಹಾದಿ ಹಿಡಿದಿದೆ. ಭಾನುವಾರ ಈ ಚಿತ್ರ ಬರೋಬ್ಬರಿ 59 ಕೋಟಿ ರೂಪಾಯಿ ಗಳಿಸಿದೆ. ದೇಶಾದ್ಯಂತ ಅನೇಕ ಶೋಗಳು ಹೌಸ್​ಫುಲ್ ಪರದರ್ಶನ ಕಂಡಿದೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಶನಿವಾರ ಈ ಚಿತ್ರ 53 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಈ ಚಿತ್ರದ ಒಟ್ಟಾರೆ ಕಲೆಕ್ಷನ್ ಈಗ 351 ಕೋಟಿ ರೂಪಾಯಿ ಆಗಿದೆ.

‘ಧುರಂಧರ್’ ಸಿನಿಮಾದ ಒಟ್ಟಾರೆ ಕಲೆಕ್ಷನ್ 500 ಕೋಟಿ ರೂಪಾಯಿ ಅನಾಯಾಸಾವಾಗಿ ಆಗಲಿದೆ ಎಂದು ಅಂದಾಜಿಸಲಾಗಿದೆ. ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಹಲವು ದಾಖಲೆಗಳನ್ನು ಮುರಿಯುವ ಸಾಧ್ಯತೆ ಇದೆ. ವರ್ಷಾಂತ್ಯದಲ್ಲಿ ಬಾಲಿವುಡ್​ಗೆ ದೊಡ್ಡ ಚೈತನ್ಯ ಸಿಕ್ಕಿದೆ.

ಇದನ್ನೂ ಓದಿ: ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರ ಆರು ದೇಶಗಳಲ್ಲಿ ಬ್ಯಾನ್

ರಣವೀರ್ ಸಿಂಗ್ ಅವರು ದೊಡ್ಡ ಗೆಲುವು ಕಾಣದೇ ಬಹಳ ವರ್ಷಗಳೇ ಕಳೆದಿದ್ದವು. ಈಗ ಅವರು ‘ಧುರಂಧರ್’ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಈ ಸಿನಿಮಾ ಅವರ ವೃತ್ತಿ ಜೀವನದ ಅತ್ಯಂತ ದೊಡ್ಡ ಸಿನಿಮಾ ಆಗುವ ಎಲ್ಲಾ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?