AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರ ಆರು ದೇಶಗಳಲ್ಲಿ ಬ್ಯಾನ್

ರಣವೀರ್ ಸಿಂಗ್ ಅವರ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡುತ್ತಿದ್ದರೂ, ಒಂದು ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಭಾರತ-ಪಾಕ್ ಬೇಹುಗಾರಿಕೆ ಆಧಾರಿತ ಈ ಚಿತ್ರಕ್ಕೆ ಪಾಕಿಸ್ತಾನ ವಿರೋಧಿ ಅಂಶಗಳ ಕಾರಣ 6 ದೇಶಗಳು ನಿಷೇಧ ಹೇರಿವೆ. ಈ ಸವಾಲಿನ ನಡುವೆಯೂ ಚಿತ್ರ ಜಾಗತಿಕವಾಗಿ 300 ಕೋಟಿ ರೂ. ಗಳಿಸಿ ಯಶಸ್ಸು ಕಂಡಿದೆ.

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರ ಆರು ದೇಶಗಳಲ್ಲಿ ಬ್ಯಾನ್
ಧುರಂಧರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 12, 2025 | 8:05 AM

Share

ರಣವೀರ್ ಸಿಂಗ್ ಅವರ ಧುರಂಧರ್ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡುತ್ತಿದೆ. ಈ ಚಿತ್ರದ ಕಥೆ ಭಾರತ-ಪಾಕಿಸ್ತಾನ ಬೇಹುಗಾರಿಕೆ ಮೇಲೆ ಆಧರಿಸಿದೆ. ಈ ಚಿತ್ರ ಚೆನ್ನಾಗಿ ಗಳಿಕೆ ಮಾಡುತ್ತಿದ್ದರೂ ಒಂದು ಶಾಕಿಂಗ್ ಸುದ್ದಿ ಹೊರ ಬಂದಿದೆ. ಈ ಸಿನಿಮಾಗೆ ಬ್ಯಾನ್ ಬಿಸಿ ತಟ್ಟಿದೆ. ಒಂದಲ್ಲ, ಎರಡಲ್ಲ ಆರು ದೇಶಗಳು ಚಿತ್ರಕ್ಕೆ ಬ್ಯಾನ್ ಹೇರಿವೆ.

ರಣವೀರ್ ಸಿಂಗ್, ಅಕ್ಷಯ್ ಖನ್ನಾ, ಸಂಜಯ್ ದತ್, ಅರ್ಜುನ್ ರಾಂಪಾಲ್ ಮತ್ತು ಮಾಧವನ್ ಅವರು ‘ಧುರಂಧರ್’ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಹಿಟ್ ಆಗಿದೆ. ಚಿತ್ರದ ಹಾಡುಗಳು ಮತ್ತು ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಧುರಂಧರ್ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದಕ್ಕಾಗಿಯೇ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಯಶಸ್ಸು ಕಂಡಿದೆ.

ಧುರಂಧರ್ ಚಿತ್ರ ಸುದ್ದಿಯಲ್ಲಿರುವಾಗಲೇ, ಕೆಲವು ಕೆಟ್ಟ ಸುದ್ದಿಗಳೂ ಇವೆ. ಈ ಚಿತ್ರವನ್ನು 6 ದೇಶಗಳಲ್ಲಿ ನಿಷೇಧಿಸಲಾಗಿದೆ. ಇದರರ್ಥ ಈ ದೇಶಗಳಲ್ಲಿ ಚಿತ್ರ ಬಿಡುಗಡೆಯಾಗುವುದಿಲ್ಲ. ಪ್ರೇಕ್ಷಕರು ಅಲ್ಲಿನ ಚಿತ್ರಮಂದಿರಗಳಿಗೆ ಹೋಗಿ ಈ ಚಿತ್ರವನ್ನು ವೀಕ್ಷಿಸಲು ಸಾಧ್ಯವಾಗುವುದಿಲ್ಲ.

ಬಹ್ರೇನ್, ಕುವೈತ್, ಓಮನ್, ಕತಾರ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಬ್ಯಾನ್ ಹೇರಿದ ದೇಶಗಳು. ಪಾಕಿಸ್ತಾನ ವಿರೋಧಿ ಅಂಶ ಇರುವುದರಿಂದ ಸಿನಿಮಾಗೆ ಬ್ಯಾನ್ ಬಿದ್ದಿದೆ. ಈ ಮೊದಲು ‘ಸ್ಕೈ ಫೋರ್ಸ್’, ‘ಫೈಟರ್’, ‘ಆರ್ಟಿಕಲ್ 370’, ‘ಟೈಗರ್ 3’ ಚಿತ್ರಗಳು ಈ ದೇಶದಲ್ಲಿ ಬ್ಯಾನ್ ಆಗಿದ್ದವು. ಧುರಂಧರ್ ತಂಡವು ತಮ್ಮ ಕೈಲಾದಷ್ಟು ಪ್ರಯತ್ನಿಸಿತು. ಆದರೆ ಅದು ಸಾಧ್ಯವಾಗಿಲ್ಲ. ಸೆನ್ಸಾರ್ ಮಂಡಳಿ ಇದಕ್ಕೆ ಒಪ್ಪಿಗೆ ಕೊಟ್ಟಿಲ್ಲ.

ಡಿಸೆಂಬರ್ 5 ರಂದು ಚಿತ್ರ ಬಿಡುಗಡೆಯಾಯಿತು. ಅಂದಿನಿಂದ, ಈ ಚಿತ್ರವು ವಿಶ್ವ ಮಟ್ಟದಲ್ಲಿ 300 ಕೋಟಿ ರೂಪಾಯಿ, ಭಾರತದಲ್ಲಿ 200 ಕೋಟಿ ರೂಪಾಯಿ ಗಳಿಸಿದೆ. ಈ ವೀಕೆಂಡ್​ನಲ್ಲಿ ಸಿನಿಮಾ ಮತ್ತಷ್ಟು ಗಳಿಕೆ ಮಾಡಬಹುದು.

ಇದನ್ನೂ ಓದಿ: ರಾ ಏಜೆಂಟ್​ ಆಗಲಿರುವ ರಣವೀರ್​ ಸಿಂಗ್​ಗೆ ಸಂಜಯ್​ ದತ್​ ವಿಲನ್; ಇದು ‘ಕೆಜಿಎಫ್​ 2’ ಎಫೆಕ್ಟ್​

ರಣವೀರ್​ ಸಿಂಗ್ ಅವರು ಹಲವು ವರ್ಷಗಳ ಬಳಿಕ ಯಶಸ್ಸು ಕಂಡಿದ್ದಾರೆ. ಈ ಚಿತ್ರ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿದೆ. ವಿವಾದಗಳ ಹೊರತಾಗಿಯೂ ಸಿನಿಮಾ ಗೆಲುವು ಕಂಡಿದೆ. ಈಗ ಬ್ಯಾನ್ ಕೂಡ ಸಿನಿಮಾ ಕಲೆಕ್ಷನ್ ಮೇಲೆ ಹೆಚ್ಚು ಪ್ರಭಾವ ಬೀರದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ