AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರ ಆರು ದೇಶಗಳಲ್ಲಿ ಬ್ಯಾನ್

ರಣವೀರ್ ಸಿಂಗ್ ಅವರ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡುತ್ತಿದ್ದರೂ, ಒಂದು ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಭಾರತ-ಪಾಕ್ ಬೇಹುಗಾರಿಕೆ ಆಧಾರಿತ ಈ ಚಿತ್ರಕ್ಕೆ ಪಾಕಿಸ್ತಾನ ವಿರೋಧಿ ಅಂಶಗಳ ಕಾರಣ 6 ದೇಶಗಳು ನಿಷೇಧ ಹೇರಿವೆ. ಈ ಸವಾಲಿನ ನಡುವೆಯೂ ಚಿತ್ರ ಜಾಗತಿಕವಾಗಿ 300 ಕೋಟಿ ರೂ. ಗಳಿಸಿ ಯಶಸ್ಸು ಕಂಡಿದೆ.

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರ ಆರು ದೇಶಗಳಲ್ಲಿ ಬ್ಯಾನ್
ಧುರಂಧರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 12, 2025 | 8:05 AM

Share

ರಣವೀರ್ ಸಿಂಗ್ ಅವರ ಧುರಂಧರ್ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡುತ್ತಿದೆ. ಈ ಚಿತ್ರದ ಕಥೆ ಭಾರತ-ಪಾಕಿಸ್ತಾನ ಬೇಹುಗಾರಿಕೆ ಮೇಲೆ ಆಧರಿಸಿದೆ. ಈ ಚಿತ್ರ ಚೆನ್ನಾಗಿ ಗಳಿಕೆ ಮಾಡುತ್ತಿದ್ದರೂ ಒಂದು ಶಾಕಿಂಗ್ ಸುದ್ದಿ ಹೊರ ಬಂದಿದೆ. ಈ ಸಿನಿಮಾಗೆ ಬ್ಯಾನ್ ಬಿಸಿ ತಟ್ಟಿದೆ. ಒಂದಲ್ಲ, ಎರಡಲ್ಲ ಆರು ದೇಶಗಳು ಚಿತ್ರಕ್ಕೆ ಬ್ಯಾನ್ ಹೇರಿವೆ.

ರಣವೀರ್ ಸಿಂಗ್, ಅಕ್ಷಯ್ ಖನ್ನಾ, ಸಂಜಯ್ ದತ್, ಅರ್ಜುನ್ ರಾಂಪಾಲ್ ಮತ್ತು ಮಾಧವನ್ ಅವರು ‘ಧುರಂಧರ್’ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಹಿಟ್ ಆಗಿದೆ. ಚಿತ್ರದ ಹಾಡುಗಳು ಮತ್ತು ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಧುರಂಧರ್ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದಕ್ಕಾಗಿಯೇ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಯಶಸ್ಸು ಕಂಡಿದೆ.

ಧುರಂಧರ್ ಚಿತ್ರ ಸುದ್ದಿಯಲ್ಲಿರುವಾಗಲೇ, ಕೆಲವು ಕೆಟ್ಟ ಸುದ್ದಿಗಳೂ ಇವೆ. ಈ ಚಿತ್ರವನ್ನು 6 ದೇಶಗಳಲ್ಲಿ ನಿಷೇಧಿಸಲಾಗಿದೆ. ಇದರರ್ಥ ಈ ದೇಶಗಳಲ್ಲಿ ಚಿತ್ರ ಬಿಡುಗಡೆಯಾಗುವುದಿಲ್ಲ. ಪ್ರೇಕ್ಷಕರು ಅಲ್ಲಿನ ಚಿತ್ರಮಂದಿರಗಳಿಗೆ ಹೋಗಿ ಈ ಚಿತ್ರವನ್ನು ವೀಕ್ಷಿಸಲು ಸಾಧ್ಯವಾಗುವುದಿಲ್ಲ.

ಬಹ್ರೇನ್, ಕುವೈತ್, ಓಮನ್, ಕತಾರ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಬ್ಯಾನ್ ಹೇರಿದ ದೇಶಗಳು. ಪಾಕಿಸ್ತಾನ ವಿರೋಧಿ ಅಂಶ ಇರುವುದರಿಂದ ಸಿನಿಮಾಗೆ ಬ್ಯಾನ್ ಬಿದ್ದಿದೆ. ಈ ಮೊದಲು ‘ಸ್ಕೈ ಫೋರ್ಸ್’, ‘ಫೈಟರ್’, ‘ಆರ್ಟಿಕಲ್ 370’, ‘ಟೈಗರ್ 3’ ಚಿತ್ರಗಳು ಈ ದೇಶದಲ್ಲಿ ಬ್ಯಾನ್ ಆಗಿದ್ದವು. ಧುರಂಧರ್ ತಂಡವು ತಮ್ಮ ಕೈಲಾದಷ್ಟು ಪ್ರಯತ್ನಿಸಿತು. ಆದರೆ ಅದು ಸಾಧ್ಯವಾಗಿಲ್ಲ. ಸೆನ್ಸಾರ್ ಮಂಡಳಿ ಇದಕ್ಕೆ ಒಪ್ಪಿಗೆ ಕೊಟ್ಟಿಲ್ಲ.

ಡಿಸೆಂಬರ್ 5 ರಂದು ಚಿತ್ರ ಬಿಡುಗಡೆಯಾಯಿತು. ಅಂದಿನಿಂದ, ಈ ಚಿತ್ರವು ವಿಶ್ವ ಮಟ್ಟದಲ್ಲಿ 300 ಕೋಟಿ ರೂಪಾಯಿ, ಭಾರತದಲ್ಲಿ 200 ಕೋಟಿ ರೂಪಾಯಿ ಗಳಿಸಿದೆ. ಈ ವೀಕೆಂಡ್​ನಲ್ಲಿ ಸಿನಿಮಾ ಮತ್ತಷ್ಟು ಗಳಿಕೆ ಮಾಡಬಹುದು.

ಇದನ್ನೂ ಓದಿ: ರಾ ಏಜೆಂಟ್​ ಆಗಲಿರುವ ರಣವೀರ್​ ಸಿಂಗ್​ಗೆ ಸಂಜಯ್​ ದತ್​ ವಿಲನ್; ಇದು ‘ಕೆಜಿಎಫ್​ 2’ ಎಫೆಕ್ಟ್​

ರಣವೀರ್​ ಸಿಂಗ್ ಅವರು ಹಲವು ವರ್ಷಗಳ ಬಳಿಕ ಯಶಸ್ಸು ಕಂಡಿದ್ದಾರೆ. ಈ ಚಿತ್ರ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿದೆ. ವಿವಾದಗಳ ಹೊರತಾಗಿಯೂ ಸಿನಿಮಾ ಗೆಲುವು ಕಂಡಿದೆ. ಈಗ ಬ್ಯಾನ್ ಕೂಡ ಸಿನಿಮಾ ಕಲೆಕ್ಷನ್ ಮೇಲೆ ಹೆಚ್ಚು ಪ್ರಭಾವ ಬೀರದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​