ಬಿಜೆಪಿ ಸರ್ಕಾರದ ಪರವಾಗಿ ಸಿನಿಮಾ ಮಾಡ್ತೀರಿ ಎಂಬ ಆರೋಪಕ್ಕೆ ಉತ್ತರ ನೀಡಿದ ಅಕ್ಷಯ್​ ಕುಮಾರ್​

ಬಿಜೆಪಿ ಸರ್ಕಾರದ ಮಾರ್ಸ್​ ಮಿಷನ್​ ಮತ್ತು ಸ್ವಚ್ಛ ಭಾರತ ಅಭಿಯಾನವನ್ನು ಪ್ರಮೋಟ್​ ಮಾಡುವ ಸಲುವಾಗಿ ಅಕ್ಷಯ್​ ಕುಮಾರ್​ ಅವರು ‘ಮಿಷನ್​ ಮಂಗಳ್​’ ಹಾಗೂ ‘ಟಾಯ್ಲೆಟ್​: ಏಕ್​ ಪ್ರೇಮ್​ ಕಥಾ’ ಸಿನಿಮಾವನ್ನು ಮಾಡಿದರು ಎಂಬುದು ಅನೇಕರ ಆರೋಪ. ಆದರೆ ಅದನ್ನು ಅಕ್ಷಯ್​ ಕುಮಾರ್​ ಅವರು ತಳ್ಳಿಹಾಕಿದ್ದಾರೆ.

ಬಿಜೆಪಿ ಸರ್ಕಾರದ ಪರವಾಗಿ ಸಿನಿಮಾ ಮಾಡ್ತೀರಿ ಎಂಬ ಆರೋಪಕ್ಕೆ ಉತ್ತರ ನೀಡಿದ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್​

Updated on: Oct 10, 2023 | 12:00 PM

ನಟ ಅಕ್ಷಯ್​ ಕುಮಾರ್ (Akshay Kumar)​ ಅವರು ವಿಮಲ್​ ಪಾನ್​ ಮಸಾಲಾ ಜಾಹೀರಾತಿನಲ್ಲಿ ಕಾಣಿಸಿಕೊಂಡು ಟೀಕೆಗೆ ಒಳಗಾಗಿರುವುದು ಗೊತ್ತೇ ಇದೆ. ಅಷ್ಟೇ ಅಲ್ಲದೇ ಅವರು ಬೇರೆ ಬೇರೆ ಕಾರಣಕ್ಕೆ ಟ್ರೋಲ್​ ಆಗುತ್ತಾರೆ. ಅವರು ಕೆನಡಾದ ಪೌರತ್ವ ಪಡೆದಿದ್ದು ಕೂಡ ಸಿಕ್ಕಾಪಟ್ಟೆ ಟೀಕೆಗೆ ಗುರಿಯಾಗಿತ್ತು. ನರೇಂದ್ರ ಮೋದಿ (Narendra Modi) ನೇತೃತ್ವದ ಬಿಜೆಪಿ ಸರ್ಕಾರವನ್ನು ಅಕ್ಷಯ್​ ಕುಮಾರ್​ ಅವರು ಬೆಂಬಲಿಸುತ್ತಾ ಬಂದಿದ್ದಾರೆ. ಅವರ ಸಿನಿಮಾಗಳು ಕೂಡ ಬಿಜೆಪಿ (BJP Government) ಪರವಾಗಿ ಇವೆ ಎಂಬುದು ಕೆಲವರ ಆರೋಪ. ಅಂತಹ ಆರೋಪಗಳಿಗೆ ಅಕ್ಷಯ್​ ಕುಮಾರ್​ ಈಗ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯದ ವಿಚಾರದಲ್ಲಿ ತಮ್ಮ ನಿಲುವು ಏನು ಎಂಬುದನ್ನು ತಿಳಿಸಿದ್ದಾರೆ.

ಬಿಜೆಪಿ ಸರ್ಕಾರದ ಮಾರ್ಸ್​ ಮಿಷನ್​ ಮತ್ತು ಸ್ವಚ್ಛ ಭಾರತ ಅಭಿಯಾನವನ್ನು ಪ್ರಮೋಟ್​ ಮಾಡುವ ಸಲುವಾಗಿ ಅಕ್ಷಯ್​ ಕುಮಾರ್​ ಅವರು ‘ಮಿಷನ್​ ಮಂಗಳ್​’ ಹಾಗೂ ‘ಟಾಯ್ಲೆಟ್​: ಏಕ್​ ಪ್ರೇಮ್​ ಕಥಾ’ ಸಿನಿಮಾವನ್ನು ಮಾಡಿದರು ಎಂಬುದು ಅನೇಕರ ಆರೋಪ. ಆದರೆ ಅದನ್ನು ಅಕ್ಷಯ್​ ಕುಮಾರ್​ ಅವರು ತಳ್ಳಿಹಾಕಿದ್ದಾರೆ. ‘ಇಂಡಿಯಾ ಟುಡೆ’ ನಡೆಸಿದ ಸಂದರ್ಶನದಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ.

ಇದನ್ನೂ ಓದಿ: ಬೇರೆ ಹೀರೋಗಳ ಸಿನಿಮಾ ಸಾವಿರ ಕೋಟಿ ರೂ. ಗಳಿಸಿದ್ದಕ್ಕೆ ಅಕ್ಷಯ್​ ಕುಮಾರ್​ ಹೇಳೋದೇನು?

‘ಜನರು ಹಾಗೆ ಹೇಳುತ್ತಾರೆ. ಆದರೆ ಅಸಲಿ ವಿಷಯ ಆ ರೀತಿ ಇಲ್ಲ. ನಾನು ‘ಏರ್​ಲಿಫ್ಟ್​’ ಸಿನಿಮಾವನ್ನು ಮಾಡಿದೆ. ಆ ಸಂದರ್ಭದಲ್ಲಿ ಕಾಂಗ್ರೆಸ್​ ಸರ್ಕಾರ ಆಡಳಿತದಲ್ಲಿ ಇತ್ತು. ಆದರೆ ಅದರ ಬಗ್ಗೆ ಯಾರೂ ಮಾತನಾಡಲಿಲ್ಲ. ‘ಮಿಷನ್​ ರಾಣಿಗಂಜ್​’ ಸಿನಿಮಾದ ನೈಜ ಘಟನೆ ನಡೆದಿದ್ದು ಕೂಡ ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ. ಅದು ಒಳ್ಳೆಯತನಕ್ಕೆ ಮತ್ತು ಶ್ರೇಷ್ಠತೆಗೆ ಸಂಬಂಧಿಸಿದ್ದು. ಯಾರು ಅಧಿಕಾರದಲ್ಲಿ ಇದ್ದರು ಎಂಬುದು ಮುಖ್ಯವಲ್ಲ. ದೇಶದ ಹಿತಕ್ಕಾಗಿ ಏನು ಮಾಡಲಾಯಿತು ಎಂಬುದು ಮಾತ್ರ ಮುಖ್ಯ’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ:ಅಕ್ಷಯ್​ ಕುಮಾರ್​ಗೆ ಯಾವುದೇ ಧರ್ಮದ ಮೇಲೆ ನಂಬಿಕೆ ಇಲ್ಲ; ಹಾಗಾದ್ರೆ ಅವರ ನಿಲುವು ಏನು?

ಒಂದು ಕಾಲದಲ್ಲಿ ಅಕ್ಷಯ್​ ಕುಮಾರ್​ ನಟಿಸಿದ ಸಿನಿಮಾಗಳು ಸತತವಾಗಿ ಸೋಲು ಕಂಡಿದ್ದವು. ಇನ್ನೇನು ಬಾಲಿವುಡ್​ನಲ್ಲಿ ತಮ್ಮ ಭವಿಷ್ಯ ಅಂತ್ಯವಾಯ್ತು ಎಂದು ಅಕ್ಷಯ್​ ಕುಮಾರ್​ ಅಂದುಕೊಂಡಿದ್ದರು. ಹಾಗಾಗಿ ಕೆನಡಾಗೆ ತೆರಳಿ ಅಲ್ಲಿಯೇ ಜೀವನ ಕಟ್ಟಿಕೊಳ್ಳಬೇಕು ಎಂದು ಅವರು ನಿರ್ಧರಿಸಿದ್ದರು. ಆ ಸಂದರ್ಭದಲ್ಲಿ ಅವರು ಕೆನಡಾದ ಪೌರತ್ವ ಪಡೆದುಕೊಂಡಿದ್ದರು. ಬಳಿಕ ಅವರಿಗೆ ಮತ್ತೆ ಬಾಲಿವುಡ್​ನಲ್ಲಿ ಯಶಸ್ಸು ಸಿಕ್ಕಿತು. ಆದರೂ ಭಾರತದ ಪೌರತ್ವ ಇರಲಿಲ್ಲ. 2023ರಲ್ಲಿ ಅವರಿಗೆ ಮರಳಿ ಭಾರತದ ಪೌರತ್ವ ಸಿಕ್ಕಿತು. ಅದನ್ನು ಈ ವರ್ಷ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ತಿಳಿಸಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us