AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranveer Singh: ತಮ್ಮದೇ ಬಾಡಿಗಾರ್ಡ್​ ಕೈಯಲ್ಲಿ ಪೆಟ್ಟು ತಿಂದ ರಣವೀರ್​ ಸಿಂಗ್​? ವಿಡಿಯೋದ ಅಸಲಿಯತ್ತು ಇಲ್ಲಿದೆ

Ranveer Singh Viral Video: ಸೈಮಾ ಸಮಾರಂಭದ ರೆಡ್​ ಕಾರ್ಪೆಟ್​ಗೆ ರಣವೀರ್​ ಸಿಂಗ್​ ಎಂಟ್ರಿ ನೀಡುವಾಗ ಜನರ ನೂಕುನುಗ್ಗಲು ಉಂಟಾಗಿತ್ತು. ಆಗ ಅವರನ್ನು ಬಾಡಿಗಾರ್ಡ್ಸ್​ ಸುತ್ತುವರಿದರು.

Ranveer Singh: ತಮ್ಮದೇ ಬಾಡಿಗಾರ್ಡ್​ ಕೈಯಲ್ಲಿ ಪೆಟ್ಟು ತಿಂದ ರಣವೀರ್​ ಸಿಂಗ್​? ವಿಡಿಯೋದ ಅಸಲಿಯತ್ತು ಇಲ್ಲಿದೆ
ರಣವೀರ್ ಸಿಂಗ್
TV9 Web
| Edited By: |

Updated on: Sep 14, 2022 | 11:08 AM

Share

ಬಾಲಿವುಡ್​ ನಟ ರಣವೀರ್​ ಸಿಂಗ್​ (Ranveer Singh) ಇದ್ದಲ್ಲಿ ಸಿಕ್ಕಾಪಟ್ಟೆ ಜೋಶ್​ ಇರುತ್ತದೆ. ಎಲ್ಲರ ಗಮನವೂ ತಮ್ಮ ಕಡೆಗೆ ಇರುವಂತೆ ಅವರು ನೋಡಿಕೊಳ್ಳುತ್ತಾರೆ. ಇತ್ತೀಚೆಗೆ ಅವರು ಬೆಂಗಳೂರಿಗೆ ಬಂದಿದ್ದರು. ಅದ್ದೂರಿಯಾಗಿ ನಡೆದ ಸೈಮಾ ಅವಾರ್ಡ್ಸ್​ (SIIMA Awards 2022) ಕಾರ್ಯಕ್ರಮದಲ್ಲಿ ರಣವೀರ್​ ಸಿಂಗ್​ ಭಾಗಿ ಆಗಿದ್ದರು. ಈ ವೇಳೆ ಅವರ ಕೆನ್ನೆಗೆ ಬಾಡಿಗಾರ್ಡ್​ ಕೈಯಿಂದ ಪೆಟ್ಟು ಬಿದ್ದಿದೆ! ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ತಮ್ಮ ನೆಚ್ಚಿನ ನಟನಿಗೆ ಯಾಕೆ ಹೀಗಾಯ್ತು ಎಂದು ಅಭಿಮಾನಿಗಳು ಕಮೆಂಟ್​ಗಳ ಮೂಲಕ ಪ್ರಶ್ನಿಸುತ್ತಿದ್ದಾರೆ. ನಿಜಕ್ಕೂ ಅವರಿಗೆ ಬಾಡಿಗಾರ್ಡ್​ (Bodyguard) ಹೊಡೆದಿದ್ದಾರಾ ಎಂದು ಫ್ಯಾನ್ಸ್ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟಕ್ಕೂ ಈ ವಿಡಿಯೋದ ಅಸಲಿಯತ್ತೇನು? ಇಲ್ಲಿದೆ ವಿವರ..

ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿರುವ ರಣವೀರ್​ ಸಿಂಗ್​ ಅವರಿಗೆ ಇರುವ ಜನಪ್ರಿಯತೆ ಅಪಾರ. ದಕ್ಷಿಣ ಭಾರತದಲ್ಲೂ ಅವರ ಸಿನಿಮಾಗಳು ಬ್ಲಾಕ್​ ಬಸ್ಟರ್​ ಹಿಟ್​ ಆಗಿವೆ. ಅವರು ಎಲ್ಲೇ ಹೋದರೂ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ರಣವೀರ್​ ಸಿಂಗ್​ ಅವರಿಗೆ ಕರ್ನಾಟಕ, ಅದರಲ್ಲೂ ಬೆಂಗಳೂರಿನ ಬಗ್ಗೆ ವಿಶೇಷ ಪ್ರೀತಿ. ಯಾಕೆಂದರೆ ಅವರು ಬೆಂಗಳೂರಿನ ಅಳಿಯ. ಕನ್ನಡತಿ ದೀಪಿಕಾ ಪಡುಕೋಣೆ ಅವರನ್ನು ಮದುವೆ ಆದ ನಂತರ ಹಲವು ಬಾರಿ ರಣವೀರ್​ ಸಿಂಗ್​ ಬೆಂಗಳೂರಿಗೆ ಬಂದು ಹೋಗಿದ್ದಾರೆ. ಈ ಬಾರಿ ಅವರು ಸೈಮಾ ಸಮಾರಂಭಕ್ಕಾಗಿ ಬಂದಾಗ ಅಭಿಮಾನಿಗಳು ಅವರನ್ನು ಮಾತನಾಡಿಸಲು ಮುಗಿಬಿದ್ದಿದ್ದಾರೆ.

ಇದನ್ನೂ ಓದಿ
Image
Ranveer Singh: ಮತ್ತೆ ಬೆತ್ತಲಾಗುವಂತೆ ರಣವೀರ್​ ಸಿಂಗ್​ಗೆ ಬೇಡಿಕೆ; ಈ ಬಾರಿ ಆಹ್ವಾನ ಬಂದಿರೋದು ಪ್ರಾಣಿಗಳಿಗೋಸ್ಕರ
Image
Ranveer Singh: ಬೆತ್ತಲೆ ಫೋಟೋ ಹಂಚಿಕೊಂಡ ರಣವೀರ್​ ಸಿಂಗ್​ ವಿರುದ್ಧ ಕೇಸ್​ ದಾಖಲಿಸಿದ ಮುಂಬೈ ಪೊಲೀಸರು
Image
Alia Bhatt: ‘ರಣವೀರ್​ ಸಿಂಗ್​ ಜತೆ ಏನು ಬೇಕಾದ್ರೂ ಮಾತಾಡ್ತೀನಿ’; ಮದುವೆ ಬಳಿಕ ಆಲಿಯಾ ಭಟ್​ ಅಚ್ಚರಿಯ ಹೇಳಿಕೆ
Image
Ranveer Singh: ರಣವೀರ್​ ಸಿಂಗ್​ ಒಟ್ಟು ಆಸ್ತಿ ಎಷ್ಟು? 2 ಸಿನಿಮಾ ಸೋತ ಮಾತ್ರಕ್ಕೆ ಕರಗಿಲ್ಲ ಸ್ಟಾರ್​ ನಟನ ನೂರಾರು ಕೋಟಿ ಸಂಪತ್ತು

ಸೈಮಾ ಸಮಾರಂಭದ ರೆಡ್​ ಕಾರ್ಪೆಟ್​ಗೆ ರಣವೀರ್​ ಸಿಂಗ್​ ಎಂಟ್ರಿ ನೀಡುವಾಗ ಜನರ ನೂಕುನುಗ್ಗಲು ಉಂಟಾಗಿತ್ತು. ಆಗ ಅವರನ್ನು ಬಾಡಿಗಾರ್ಡ್ಸ್​ ಸುತ್ತುವರಿದರು. ಅಭಿಮಾನಿಗಳ ತಳ್ಳಾಟ ಹೆಚ್ಚಿದ್ದರಿಂದ ಬಾಡಿಗಾರ್ಡ್​ ಒಬ್ಬರ ಕೈ ರಣವೀರ್​ ಸಿಂಗ್​ ಮುಖಕ್ಕೆ ತಗುಲಿತು. ಅದು ಆಕಸ್ಮಿಕವಾಗಿ ಆದ ಪ್ರಮಾದ ಎಂಬುದು ಅವರಿಗೆ ಅರಿವಾಯಿತು. ಹಾಗಾಗಿ ಅವರು ಆ ಬಾಡಿಗಾರ್ಡ್​ ವಿರುದ್ಧ ಕೂಗಾಡಲಿಲ್ಲ. ಅದೇ ವಿಡಿಯೋ ಈಗ ವೈರಲ್​ ಆಗಿದೆ.

ಬಹಳ ಅದ್ದೂರಿಯಾಗಿ 10ನೇ ವರ್ಷದ ಸೈಮಾ ಸಮಾರಂಭ ನಡೆಯಿತು. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ಜರುಗಿದ್ದು ವಿಶೇಷವಾಗಿತ್ತು. ಕನ್ನಡ, ತೆಲುಗು, ಮಲಯಾಳಂ, ತಮಿಳು ಹಾಗೂ ಹಿಂದಿ ಚಿತ್ರರಂಗದ ಅನೇಕ ಸ್ಟಾರ್​ ಸೆಲೆಬ್ರಿಟಿಗಳು ಆಗಮಿಸಿ ಸಮಾರಂಭದ ರಂಗು ಹೆಚ್ಚಿಸಿದರು. ಯಶ್​, ಶಿವರಾಜ್​ಕುಮಾರ್​, ಕಮಲ್​ ಹಾಸನ್​, ಅಲ್ಲು ಅರ್ಜುನ್​, ವಿಜಯ್​ ದೇವರಕೊಂಡ ಸೇರಿದಂತೆ ಅನೇಕ ಕಲಾವಿದರು ಸೈಮಾ ಸಂಭ್ರಮಕ್ಕೆ ಸಾಕ್ಷಿಯಾದರು. ಇದೇ ವೇದಿಕೆಯಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗೆ ನಮನ ಸಲ್ಲಿಸಲಾಯಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ