AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾಗೆ ಪ್ರಪೋಸ್ ಮಾಡಿದ್ರಾ ರಣಬೀರ್ ಕಪೂರ್?

Ranbir Kapoor-Anushka Sharma: ರಣ್​ಬೀರ್ ಕಪೂರ್, ಆಲಿಯಾ ಭಟ್ ಜೊತೆ ವಿವಾಹವಾಗಿ ಆರಾಮವಾಗಿದ್ದಾರೆ. ಅಂತೆಯೇ ಅನುಷ್ಕಾ ಶರ್ಮಾ ಕ್ರಿಕೆಟಿಗ ವಿರಾಟ್ ಕೊಹ್ಲಿಯ ಧರ್ಮಪತ್ನಿ, ಇಬ್ಬರು ಮಕ್ಕಳ ತಾಯಿಯೂ ಹೌದು. ಅಂದಹಾಗೆ ಅನುಷ್ಕಾ ಶರ್ಮಾ ಮತ್ತು ರಣ್​ಬೀರ್ ಕಪೂರ್ ಆಪ್ತ ಗೆಳೆಯರು. ರಣ್​ಬೀರ್ ಕಪೂರ್ ಒಮ್ಮೆ ಅನುಷ್ಕಾ ಶರ್ಮಾಗೆ ಪ್ರೊಪೋಸ್ ಸಹ ಮಾಡಿದ್ದರಂತೆ.

ಅನುಷ್ಕಾಗೆ ಪ್ರಪೋಸ್ ಮಾಡಿದ್ರಾ ರಣಬೀರ್ ಕಪೂರ್?
Ranbir Kapoor Anushka
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 15, 2025 | 8:54 PM

Share

ಅನುಷ್ಕಾ ಶರ್ಮಾ ಹಾಗೂ ರಣಬೀರ್ ಕಪೂರ್ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಅವರು ಈ ಮೊದಲು ‘ಏ ದಿಲ್ ಹೇ ಮುಷ್ಕಿಲ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ರಿಲೀಸ್ ಆಗಿದ್ದು 2016ರಲ್ಲಿ. ಅಂದರೆ ಚಿತ್ರ ಬಿಡುಗಡೆ ಆಗಿ 9 ವರ್ಷಗಳೇ ಕಳೆದು ಹೋಗಿವೆ. ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಇದೆ. ರಣಬೀರ್ ಕಪೂರ್ ಅವರು ಈ ಮೊದಲು ಅನುಷ್ಕಾಗೆ ಪ್ರಪೋಸ್ ಮಾಡಿದ್ದರಂತೆ.

ರಣಬೀರ್ ಕಪೂರ್ ಅವರು ಆಲಿಯಾ ಭಟ್ನ ವಿವಾಹ ಆಗಿದ್ದಾರೆ. ಅದೇ ರೀತಿ ಅನುಷ್ಕಾ ಶರ್ಮಾ ಕ್ರಿಕೆಟರ್ ವಿರಾಟ್ ಕೊಹ್ಲಿಯನ್ನು ಮದುವೆ ಆಗಿ ಸುಖವಾಗಿದ್ದಾರೆ. ರಣಬೀರ್ ಕಪೂರ್ ಅವರು ಈ ಮೊದಲು ಸಾಕಷ್ಟು ನಟಿಯರ ಜೊತೆ ಆಪ್ತತೆ ಹೊಂದಿದ್ದರು. ಅನೇಕರ ಜೊತೆ ಅವರು ಡೇಟಿಂಗ್ ಮಾಡಿದ ಉದಾಹರಣೆ ಇದೆ. ಈ ಮೊದಲು ಮಾತನಾಡಿದ್ದ ಅನುಷ್ಕಾ ಶರ್ಮಾ ಅವರು, ‘ನನಗೆ ಬಾಯ್ಸ್ ಫ್ರೆಂಡ್ಸ್ ಜಾಸ್ತಿ’ ಎಂದು ಹೇಳಿದ್ದರು. ಇದಕ್ಕೆ ರಣಬೀರ್ ಉತ್ತರಿಸಿದ್ದರು.

‘ನಾನು ಇವರ ಜೊತೆ ಸಮಯ ಕಳೆದಿದ್ದೇನೆ. ಯಾರಿಗೆ ಇವರ ಜೊತೆ ಒಳ್ಳೆಯ ಗೆಳೆತನ ಬೆಳೆಯುತ್ತದೆಯೋ ಅವರಿಗೆ ಪ್ರೀತಿ ಉಂಟಾಗುತ್ತದೆ. ಆದರೆ, ಅನುಷ್ಕಾ ಆ ರೀತಿ ಏನೂ ಇಲ್ಲ, ಗೆಳೆತನ ಮಾತ್ರ ಎನ್ನುತ್ತಾರೆ. ಈ ರೀತಿ ಹೇಳಿದ ವ್ಯಕ್ತಿಯ ಸರ್ನೇಮ್ ಕಪೂರ್’ ಎಂದಿದ್ದರು ರಣಬೀರ್. ಈ ವಿಚಾರ ಕೇಳಿದ ಬಳಿಕ ಅನೇಕರಿಗೆ ರಣಬೀರ್ ಕಪೂರ್ಗೂ ಅನುಷ್ಕಾ ಮೇಲೆ ಪ್ರೀತಿ ಮೂಡಿತ್ತೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ:ರಣ್​ಬೀರ್ ಕಪೂರ್ ಅನ್ನು ರಾಮನ ಪಾತ್ರದಲ್ಲಿ ಒಪ್ಪಲಾಗದು, ತಗಾದೆ ತೆಗೆದ ಹಿರಿಯ ನಟ

ರಣಬೀರ್ ಕಪೂರ್ ಅವರು ಸಾಲು ಸಾಲು ಹಿಟ್ ಕಂಡಿದ್ದಾರೆ. ‘ಅನಿಮಲ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಈಗ ಅವರು ರಾಮಾಯಣ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಕಾಣಿಸಿಕೊಳ್ಳುತ್ತಾ ಇದ್ದಾರೆ. ಇತ್ತ ಅನುಷ್ಕಾ ಶರ್ಮಾ ಅವರು ಸಿನಿಮಾ ಕೆಲಸಗಳಿಂದ ದೂರವೇ ಇದ್ದಾರೆ. ಅವರು ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್