AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಕಿಸ್​ಗೆ ಹೆಚ್ಚುವರಿ 20 ಲಕ್ಷ ರೂಪಾಯಿ ಸಂಭಾವನೆ ಪಡೆಯುತ್ತಾರಾ ನಟಿ ರಶ್ಮಿಕಾ ಮಂದಣ್ಣ?

ಕೆಲವೇ ದಿನಗಳ ಹಿಂದೆ ‘ಅನಿಮಲ್​’ ಸಿನಿಮಾದ ಹೊಸ ಹಾಡು ಬಿಡುಗಡೆ ಆಯಿತು. ಅದರ ಪೋಸ್ಟರ್​ನಲ್ಲಿ ಹೆಚ್ಚು ಹೈಲೈಟ್​ ಆಗಿದ್ದೇ ರಶ್ಮಿಕಾ ಮಂದಣ್ಣ ಮತ್ತು ರಣಬೀರ್​ ಕಪೂರ್​ ಅವರ ಕಿಸ್​. ಈ ಹಾಡಿನಲ್ಲಿ ಅವರಿಬ್ಬರು ಹಲವು ಬಾರಿ ಲಿಪ್​ ಲಾಕ್​ ಮಾಡಿಕೊಂಡಿದ್ದಾರೆ. ಹಾಡು ಬಿಡುಗಡೆ ಆದ ಬಳಿಕ ಹೀಗೊಂದು ಗಾಸಿಪ್ ಹರಡಿದೆ.

ಪ್ರತಿ ಕಿಸ್​ಗೆ ಹೆಚ್ಚುವರಿ 20 ಲಕ್ಷ ರೂಪಾಯಿ ಸಂಭಾವನೆ ಪಡೆಯುತ್ತಾರಾ ನಟಿ ರಶ್ಮಿಕಾ ಮಂದಣ್ಣ?
ರಣಬೀರ್​ ಕಪೂರ್​, ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Oct 17, 2023 | 2:48 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಬಾಲಿವುಡ್​ನಲ್ಲಿ ಒಳ್ಳೊಳ್ಳೆಯ ಆಫರ್​ ಪಡೆಯುತ್ತಿದ್ದಾರೆ. ಅದಕ್ಕೆ ತಕ್ಕಂತೆ ಅವರಿಗೆ ಕೋಟ್ಯಂತರ ರೂಪಾಯಿ ಸಂಭಾವನೆ ಕೂಡ ಸಿಗುತ್ತಿದೆ. ಅಮಿತಾಭ್​ ಬಚ್ಚನ್​, ಸಿದ್ದಾರ್ಥ್​ ಮಲ್ಹೋತ್ರಾ ಅವರಂತಹ ಸ್ಟಾರ್​ ಹೀರೋಗಳ ಜೊತೆ ನಟಿಸಿ ರಶ್ಮಿಕಾ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ರಣಬೀರ್​ ಕಪೂರ್​ (Ranbir Kapoor) ಜೊತೆ ನಟಿಸಿರುವ ‘ಅನಿಮಲ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮತ್ತು ರಣಬೀರ್​ ಕಪೂರ್​ ಅವರು ಲಿಪ್​ ಲಾಕ್​ (Lip Lock) ಮಾಡಿದ್ದಾರೆ. ಈ ದೃಶ್ಯಗಳಿಗೆ ರಶ್ಮಿಕಾ ಹೆಚ್ಚುವರಿ ಹಣ ಪಡೆದಿದ್ದಾರೆ ಎಂಬ ಗಾಸಿಪ್​ ಹಬ್ಬಿದೆ. ಆದರೆ ಅದನ್ನು ರಶ್ಮಿಕಾ ಮಂದಣ್ಣ ಅವರ ಆಪ್ತರು ತಳ್ಳಿ ಹಾಕಿದ್ದಾರೆ ಎಂದು ಕೂಡ ಮಾಧ್ಯಮಗಳಲ್ಲಿ ವರದಿ ಆಗಿದೆ.

ಕೆಲವೇ ದಿನಗಳ ಹಿಂದೆ ‘ಅನಿಮಲ್​’ ಸಿನಿಮಾದ ಹೊಸ ಹಾಡು ಬಿಡುಗಡೆ ಆಯಿತು. ಅದರ ಪೋಸ್ಟರ್​ನಲ್ಲಿ ಹೆಚ್ಚು ಹೈಲೈಟ್​ ಆಗಿದ್ದೇ ರಶ್ಮಿಕಾ ಮಂದಣ್ಣ ಮತ್ತು ರಣಬೀರ್​ ಕಪೂರ್​ ಅವರ ಕಿಸ್​. ಈ ಹಾಡಿನಲ್ಲಿ ಅವರಿಬ್ಬರು ಹಲವು ಬಾರಿ ಲಿಪ್​ ಲಾಕ್​ ಮಾಡಿಕೊಂಡಿದ್ದಾರೆ. ಪ್ರತಿ ಲಿಪ್​ ಕಿಸ್​ಗೆ ರಶ್ಮಿಕಾ ಅವರು 20 ಲಕ್ಷ ರೂಪಾಯಿ ಹೆಚ್ಚುವರಿ ಹಣ ಪಡೆಯುತ್ತಾರೆ ಎಂದು ಗಾಸಿಪ್​ ಹಬ್ಬಿಸಲಾಗಿದೆ. ಇದನ್ನು ಕೇಳಿ ಅಭಿಮಾನಿಗಳು ಶಾಕ್​ ಆಗಿದ್ದರು. ಆದರೆ ಆ ರೀತಿ ಯಾವುದೇ ಹೆಚ್ಚುವರಿ ಹಣವನ್ನು ರಶ್ಮಿಕಾ ಅವರು ಪಡೆಯುತ್ತಿಲ್ಲ ಎಂದು ಆಪ್ತ ಮೂಲಗಳು ಸ್ಪಷ್ಟನೆ ನೀಡಿರುವುದಾಗಿ ತೆಲುಗಿನ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟ ಆಗಿದೆ.

ಸಂದೀಪ್​ ರೆಡ್ಡಿ ವಂಗಾ ಅವರು ‘ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ಎರಡು ಶೇಡ್​ನ ಪಾತ್ರದಲ್ಲಿ ರಣಬೀರ್​ ಕಪೂರ್ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಅನಿಲ್​ ಕಪೂರ್​, ಸನ್ನಿ ಡಿಯೋಲ್​ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಎಲ್ಲ ಕಾರಣಕ್ಕಾಗಿ ‘ಅನಿಮಲ್​’ ಸಿನಿಮಾದ ಮೇಲೆ ನಿರೀಕ್ಷೆ ಮೂಡಿದೆ.

ಮತ್ತೊಂದು ಬಾಲಿವುಡ್​ ಸಿನಿಮಾಗೆ ಶೂಟಿಂಗ್​ ಶುರು ಮಾಡಿದ ರಶ್ಮಿಕಾ ಮಂದಣ್ಣ

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಅನಿಮಲ್​’ ಚಿತ್ರ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಆಯಿತು. ಡಿಸೆಂಬರ್​ 1ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’ ಸಿನಿಮಾಗಳ ಸಕ್ಸಸ್​ ನಂತರ ಸಂದೀಪ್​ ರೆಡ್ಡಿ ವಂಗಾ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿರುವುದರಿಂದ ಸಜಹವಾಗಿಯೇ ಹೈಪ್​ ಕ್ರಿಯೇಟ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?