AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದಿಲೀಪ್​ ಕುಮಾರ್​ ಪತ್ನಿ ಸೈರಾ ಬಾನು ಆರೋಗ್ಯ ಸ್ಥಿತಿ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ

ಸೈರಾ ಹಾಗೂ ದಿಲೀಪ್​ ಒಟ್ಟು 54 ವರ್ಷಗಳ ಕಾಲ ಒಟ್ಟಾಗಿ ಸಂಸಾರ ನಡೆಸಿದ್ದಾರೆ. ಅನೇಕರಿಗೆ ಇವರ ದಾಂಪತ್ಯ ಮಾದರಿ ಆಗಿದೆ. ದಿಲೀಪ್​ ಮೃತಪಟ್ಟ ನಂತರದಲ್ಲಿ ಸೈರಾ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗಿದೆ.

ನಟ ದಿಲೀಪ್​ ಕುಮಾರ್​ ಪತ್ನಿ ಸೈರಾ ಬಾನು ಆರೋಗ್ಯ ಸ್ಥಿತಿ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ
ನಟ ದಿಲೀಪ್​ ಕುಮಾರ್​ ಹಾಗೂ ಪತ್ನಿ ಸೈರಾ ಬಾನು
TV9 Web
| Edited By: |

Updated on: Sep 01, 2021 | 2:42 PM

Share

ಕೆಲ ತಿಂಗಳ ಹಿಂದೆ ಮೃತಪಟ್ಟಿದ್ದ ನಟ ದಿಲೀಪ್​ ಕುಮಾರ್​ ಪತ್ನಿ ಸೈರಾ ಬಾನು ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ರಕ್ತದೊತ್ತಡ ಸಮಸ್ಯೆಗೆ ಸಂಬಂಧಿಸಿ ಅವರನ್ನು ಮೂರು ದಿನಗಳ ಹಿಂದೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುಗೆ ಶಿಫ್ಟ್​ ಮಾಡಲಾಗಿದೆ.

ಸೈರಾ ಹಾಗೂ ದಿಲೀಪ್​ ಒಟ್ಟು 54 ವರ್ಷಗಳ ಕಾಲ ಒಟ್ಟಾಗಿ ಸಂಸಾರ ನಡೆಸಿದ್ದಾರೆ. ಅನೇಕರಿಗೆ ಇವರ ದಾಂಪತ್ಯ ಮಾದರಿ ಆಗಿದೆ. ದಿಲೀಪ್​ ಮೃತಪಟ್ಟ ನಂತರದಲ್ಲಿ ಸೈರಾ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗಿದೆ. ಈಗ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಲಿವುಡ್​ನಲ್ಲಿ ದಶಕಗಳ ಕಾಲ ಸ್ಟಾರ್​ ಆಗಿ ಮೆರೆದ ದಿಲೀಪ್​ ಕುಮಾರ್ ಅವರು ಬುಧವಾರ ಜು.7ರಂದು ನಿಧನರಾದರು. ಹಲವಾರು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಅವರ ಮೂಲ ಹೆಸರು ದಿಲೀಪ್​ ಕುಮಾರ್​ ಅಲ್ಲವೇ ಅಲ್ಲ. ಈಗ ಪಾಕಿಸ್ತಾನದಲ್ಲಿರುವ ಪೇಶಾವರದಲ್ಲಿ 1922ರಲ್ಲಿ ಜನಿಸಿದ ಅವರಿಗೆ ಕುಟುಂಬದವರು ಇಟ್ಟ ಹೆಸರು ಮೊಹಮ್ಮದ್​ ಯೂಸೂಫ್​ ಖಾನ್​. ಆದರೆ ಚಿತ್ರರಂಗಕ್ಕೆ ಬರುವಾಗ ಅವರು ದಿಲೀಪ್​ ಕುಮಾರ್​ ಎಂದು ಹೆಸರು ಬದಲಾಯಿಸಿಕೊಂಡರು. 1944ರಲ್ಲಿ ತೆರೆಕಂಡ ‘ಜ್ವಾರ್​ ಭಾಟ’ ದಿಲೀಪ್​ ನಟನೆಯ ಮೊದಲ ಸಿನಿಮಾ. ಆ ಚಿತ್ರದ ನಿರ್ಮಾಪಕಿ ದೇವಿಕಾ ರಾಣಿ ಅವರೇ ಯೂಸೂಫ್​ ಖಾನ್​ಗೆ ಹೆಸರು ಬದಲಾಯಿಸಿಕೊಳ್ಳುವ ಸಲಹೆ ನೀಡಿದ್ದರು.

ಮೊದಲ ಸಿನಿಮಾ ‘ಜ್ವಾರ್​ ಭಾಟಾ’ದಿಂದ ದಿಲೀಪ್​ ಕುಮಾರ್​ಗೆ ದೊಡ್ಡ ಯಶಸ್ಸು ಸಿಕ್ಕಿತ್ತು. ಅನೇಕ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ದಿಲೀಪ್​ ಅಭಿನಯ ಇಷ್ಟವಾಯಿತು. ಚಿತ್ರರಂಗಕ್ಕೆ ಕಾಲಿಟ್ಟ ಮೊದಲ ದಶಕದಲ್ಲಿ ದಿಲೀಪ್​ ಕುಮಾರ್​ ಸ್ಟಾರ್​ ಆದರು. ಎರಡನೇ ದಶಕದಲ್ಲಿ ಸೂಪರ್​ ಸ್ಟಾರ್​ ಆಗಿ ಮಿಂಚಿದರು. ದೇವದಾಸ್​, ನಯಾ ದೌರ್​, ಮಧುಮತಿ, ಕೊಹಿನೂರ್​, ಮುಘಲ್​-ಏ-ಆಜಮ್​ ಮುಂತಾದ ಗಮನಾರ್ಹ ಚಿತ್ರಗಳಲ್ಲಿ ದಿಲೀಪ್​ ಕುಮಾರ್​ ನಟಿಸಿದರು. 1998ರಲ್ಲಿ ತೆರೆಕಂಡ ‘ಖಿಲಾ’ ದಿಲೀಪ್​ ನಟನೆಯ ಕೊನೇ ಸಿನಿಮಾ.

ಇದನ್ನೂ ಓದಿ: ಡಾ. ರಾಜ್​ಕುಮಾರ್​ ಜತೆ ದಿಲೀಪ್​ ಕುಮಾರ್​ಗೆ ಇದ್ದ ಒಡನಾಟ ಎಂಥದ್ದು? ಫೋಟೋ ಸಹಿತ ವಿವರಿಸಿದ ಪುನೀತ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್