AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆದ ದಿಲೀಪ್​ ಕುಮಾರ್​ ಪತ್ನಿ ಸೈರಾ ಬಾನು

ಸೈರಾ ಹಾಗೂ ದಿಲೀಪ್​ ಒಟ್ಟು 54 ವರ್ಷಗಳ ಕಾಲ ಒಟ್ಟಾಗಿ ಸಂಸಾರ ನಡೆಸಿದ್ದಾರೆ. ಅನೇಕರಿಗೆ ಇವರ ದಾಂಪತ್ಯ ಮಾದರಿ ಆಗಿದೆ. ದಿಲೀಪ್​ ಮೃತಪಟ್ಟ ನಂತರದಲ್ಲಿ ಸೈರಾ ಆರೋಗ್ಯದಲ್ಲಿ ಏರುಪೇರಾಗಿತ್ತು.

ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆದ ದಿಲೀಪ್​ ಕುಮಾರ್​ ಪತ್ನಿ ಸೈರಾ ಬಾನು
ದಿಲೀಪ್​ ಕುಮಾರ್​-ಸೈರಾ ಬಾನು
TV9 Web
| Edited By: |

Updated on: Sep 06, 2021 | 2:50 PM

Share

ಕೆಲ ತಿಂಗಳ ಹಿಂದೆ ನಟ ದಿಲೀಪ್​ ಕುಮಾರ್ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಅವರ​ ಪತ್ನಿ ಸೈರಾ ಬಾನು ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ವಾರ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ.

ಸೈರಾ ಹಾಗೂ ದಿಲೀಪ್​ ಒಟ್ಟು 54 ವರ್ಷಗಳ ಕಾಲ ಒಟ್ಟಾಗಿ ಸಂಸಾರ ನಡೆಸಿದ್ದಾರೆ. ಅನೇಕರಿಗೆ ಇವರ ದಾಂಪತ್ಯ ಮಾದರಿ ಆಗಿದೆ. ದಿಲೀಪ್​ ಮೃತಪಟ್ಟ ನಂತರದಲ್ಲಿ ಸೈರಾ ಆರೋಗ್ಯದಲ್ಲಿ ಏರುಪೇರಾಗಿತ್ತು. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರುವುದು ಅಭಿಮಾನಿಗಳಿಗೆ ರಿಲೀಫ್​ ನೀಡಿದೆ.

ಬಾಲಿವುಡ್​ನಲ್ಲಿ ದಶಕಗಳ ಕಾಲ ಸ್ಟಾರ್​ ಆಗಿ ಮೆರೆದ ದಿಲೀಪ್​ ಕುಮಾರ್ ಅವರು ಜು.7ರಂದು ನಿಧನರಾದರು. ಹಲವಾರು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಅವರ ಮೂಲ ಹೆಸರು ದಿಲೀಪ್​ ಕುಮಾರ್​ ಅಲ್ಲವೇ ಅಲ್ಲ. ಈಗ ಪಾಕಿಸ್ತಾನದಲ್ಲಿರುವ ಪೇಶಾವರದಲ್ಲಿ 1922ರಲ್ಲಿ ಜನಿಸಿದ ಅವರಿಗೆ ಕುಟುಂಬದವರು ಇಟ್ಟ ಹೆಸರು ಮೊಹಮ್ಮದ್​ ಯೂಸೂಫ್​ ಖಾನ್​. ಆದರೆ ಚಿತ್ರರಂಗಕ್ಕೆ ಬರುವಾಗ ಅವರು ದಿಲೀಪ್​ ಕುಮಾರ್​ ಎಂದು ಹೆಸರು ಬದಲಾಯಿಸಿಕೊಂಡರು. 1944ರಲ್ಲಿ ತೆರೆಕಂಡ ‘ಜ್ವಾರ್​ ಭಾಟ’ ದಿಲೀಪ್​ ನಟನೆಯ ಮೊದಲ ಸಿನಿಮಾ. ಆ ಚಿತ್ರದ ನಿರ್ಮಾಪಕಿ ದೇವಿಕಾ ರಾಣಿ ಅವರೇ ಯೂಸೂಫ್​ ಖಾನ್​ಗೆ ಹೆಸರು ಬದಲಾಯಿಸಿಕೊಳ್ಳುವ ಸಲಹೆ ನೀಡಿದ್ದರು.

ಮೊದಲ ಸಿನಿಮಾ ‘ಜ್ವಾರ್​ ಭಾಟಾ’ದಿಂದ ದಿಲೀಪ್​ ಕುಮಾರ್​ಗೆ ದೊಡ್ಡ ಯಶಸ್ಸು ಸಿಕ್ಕಿತ್ತು. ಅನೇಕ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ದಿಲೀಪ್​ ಅಭಿನಯ ಇಷ್ಟವಾಯಿತು. ಚಿತ್ರರಂಗಕ್ಕೆ ಕಾಲಿಟ್ಟ ಮೊದಲ ದಶಕದಲ್ಲಿ ದಿಲೀಪ್​ ಕುಮಾರ್​ ಸ್ಟಾರ್​ ಆದರು. ಎರಡನೇ ದಶಕದಲ್ಲಿ ಸೂಪರ್​ ಸ್ಟಾರ್​ ಆಗಿ ಮಿಂಚಿದರು. ದೇವದಾಸ್​, ನಯಾ ದೌರ್​, ಮಧುಮತಿ, ಕೊಹಿನೂರ್​, ಮುಘಲ್​-ಏ-ಆಜಮ್​ ಮುಂತಾದ ಗಮನಾರ್ಹ ಚಿತ್ರಗಳಲ್ಲಿ ದಿಲೀಪ್​ ಕುಮಾರ್​ ನಟಿಸಿದರು. 1998ರಲ್ಲಿ ತೆರೆಕಂಡ ‘ಖಿಲಾ’ ದಿಲೀಪ್​ ನಟನೆಯ ಕೊನೇ ಸಿನಿಮಾ.

ಇದನ್ನೂ ಓದಿ: Saira Banu: ನಟ ದಿಲೀಪ್ ಕುಮಾರ್ ಪತ್ನಿ ಸೈರಾ ಬಾನು ಆರೋಗ್ಯದಲ್ಲಿ ಚೇತರಿಕೆ; ಐಸಿಯುನಿಂದ ಡಿಸ್ಚಾರ್ಜ್

ನಟ ದಿಲೀಪ್​ ಕುಮಾರ್​ ಪತ್ನಿ ಸೈರಾ ಬಾನು ಆರೋಗ್ಯ ಸ್ಥಿತಿ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ